Homeಮುಖಪುಟಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

ಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

- Advertisement -
- Advertisement -

ತನ್ನ ಕಂಪೆನಿಯ ಮೇಲೆ ಅಮೆರಿಕದ ಅಧಿಕಾರಿಗಳು ಮಾಡಿರುವ ಆರೋಪಗಳ ಬಗ್ಗೆ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಪತ್ರಿಕೆಗಳು ತಪ್ಪಾಗಿ ಮತ್ತು ಅಜಾಗರೂಕ ವರದಿ ಮಾಡಿವೆ ಎಂದು ಶನಿವಾರ ಹೇಳಿದ್ದಾರೆ. ಅಮೆರಿಕ ದೋಷಾರೋಪಣೆಗೆ

“ಎರಡು ವಾರಗಳ ಹಿಂದೆಯೇ ಅದಾನಿ ಗ್ರೀನ್ ಎನರ್ಜಿಯಲ್ಲಿನ ಅನುಸರಣೆ ಪ್ರಕ್ರಿಯೆಗಳ ಬಗ್ಗೆ ನಾವು ಅಮೆರಿಕದಿಂದ ಆರೋಪಗಳನ್ನು ಎದುರಿಸಿದ್ದೇವೆ ಎಂದು ನಿಮ್ಮಲ್ಲಿ ಹೆಚ್ಚಿನವರು ಓದಿದ್ದೀರಿ. ಆದರೆ ನಾವು ಇಂತಹ ಸವಾಲುಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ.” ಎಂದು ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅದಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರತಿಯೊಂದು ದಾಳಿಯು ನಮ್ಮನ್ನು ಬಲಪಡಿಸುತ್ತದೆ ಮತ್ತು ಪ್ರತಿ ಅಡಚಣೆಯು ಅದಾನಿ ಗ್ರೂಪ್‌ಗೆ ಮತ್ತಷ್ಟು ಚೇತರಿಸಿಕೊಳ್ಳುವ ಮೆಟ್ಟಿಲು ಆಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ” ಎಂದು ಅದಾನಿ ಹೇಳಿದ್ದಾರೆ.

ಅಮರಿಕದಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿರುವ ಅದಾನಿ ಮತ್ತು ಇತರರ ದೋಷಾರೋಪಣೆಗೆ ಸಂಬಂಧಿಸಿದ ಬೆಳವಣಿಗೆಗಳನ್ನು ಖಾಸಗಿ ಕಂಪನಿಗಳು, ವ್ಯಕ್ತಿಗಳು ಮತ್ತು ಅಮೆರಿಕ ನ್ಯಾಯಾಂಗ ಇಲಾಖೆಯನ್ನು ಒಳಗೊಂಡಿರುವ ಕಾನೂನು ವಿಷಯವಾಗಿ ಪರಿಗಣಿಸುವುದಾಗಿ ಭಾರತ ಸರ್ಕಾರ ಹೇಳಿದ ಒಂದು ದಿನದ ನಂತರ ಅದಾನಿ ಈ ಹೇಳಿಕೆ ನೀಡಿದ್ದಾರೆ.

ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಾಹಕ ವನೀತ್ ಜೈನ್ ಅವರು ಸೆಕ್ಯುರಿಟೀಸ್ ವಂಚನೆ ಮತ್ತು ಅಮೆರಿಕದ ಸೆಕ್ಯುರಿಟೀಸ್ ನಿಯಮಗಳ ಉಲ್ಲಂಘನೆಗಾಗಿ ಪಿತೂರಿ ನಡೆಸಿದ್ದಾರೆ ಎಂದು ದೋಷಾರೋಪಣೆಯಲ್ಲಿ ಆರೋಪಿಸಲಾಗಿದೆ. ಅದಾನಿ ಗ್ರೀನ್ ಎನರ್ಜಿ ಕಾರ್ಯನಿರ್ವಾಹಕರು ಅಂತರಾಷ್ಟ್ರೀಯ ನಿಧಿಯನ್ನು ಪಡೆಯಲು ಲಂಚದ ಆಮಿಷ ನೀಡಿದ್ದರು ಎಂದು ಅದು ಆರೋಪಿಸಿದೆ.

ಅದಾನಿ ಮತ್ತು ಅವರ ಸಹಚರರು 2021 ಮತ್ತು 2023 ರ ನಡುವೆ ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ 2,200 ಕೋಟಿ ರೂಪಾಯಿಗಳನ್ನು ಲಂಚವಾಗಿ ಪಾವತಿಸಲು ಸಂಚು ರೂಪಿಸಿದ್ದಾರೆ ಎಂದು ಅಮೆರಿಕದ ಪ್ರಾಸಿಕ್ಯೂಟರ್‌ಗಳು ಪ್ರತಿಪಾದಿಸಿದ್ದಾರೆ. ಅಲ್ಲದೆ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಛತ್ತೀಸ್‌ಗಢ ಮತ್ತು ಜಮ್ಮು ಕಾಶ್ಮೀರದ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎನ್ನಲಾಗಿದೆ.

“ಸಾಕಷ್ಟು ಸ್ಥಾಪಿತ ವರದಿಗಳ ಹೊರತಾಗಿಯೂ, ಅದಾನಿ ಕಡೆಯಿಂದ ‘ವಿದೇಶಿ ಭ್ರಷ್ಟ ಆಚರಣೆಗಳ ಕಾಯ್ದೆ’ಯ ಉಲ್ಲಂಘನೆ ಆಗಿದೆ ಎಂದು ಯಾರೋಬ್ಬರೂ ಆರೋಪ ಮಾಡಿಲ್ಲ. ಜೊತೆಗೆ ನ್ಯಾಯಕ್ಕೆ ಅಡ್ಡಿಪಡಿಸುವ ಪಿತೂರಿ ನಡೆಸಲಾಗಿದೆ ಎಂಬ ಆರೋಪ ಹೊರಿಸಲಾಗಿಲ್ಲ. ಆದರೂ, ಇಂದಿನ ಜಗತ್ತಿನಲ್ಲಿ ನಕಾರಾತ್ಮಕತೆಯು ಸತ್ಯಗಳಿಗಿಂತ ವೇಗವಾಗಿ ಹರಡುತ್ತದೆ” ಎಂದು ಅದಾನಿ ಶನಿವಾರ ಹೇಳಿದ್ದಾರೆ.

ಜೊತೆಗೆ ಹಿಂಡೆನ್‌ಬರ್ಗ್ ವರದಿಯನ್ನು ಉಲ್ಲೇಖಿಸಿರುವ ಅದಾನಿ, ಪಟ್ಟಭದ್ರ ಮಾಧ್ಯಮ ಹಿತಾಸಕ್ತಿಗಳಿಂದ ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಅಮೆರಿಕದ ಅಧಿಕಾರಿಗಳು ಮಾಡಿರುವ ಆರೋಪಗಳನ್ನು ಅದಾನಿ ಗ್ರೂಪ್ ನಿರಾಕರಿಸಿದ್ದು, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ.

ವಿದೇಶಿ ಭ್ರಷ್ಟ ಆಚರಣೆಗಳ ಕಾಯಿದೆಯು ಅಮೆರಿಕದ ಕಾನೂನಾಗಿದ್ದು, ಹೆಚ್ಚಿನ ವ್ಯಾಪಾರ ವ್ಯವಹಾರಗಳಿಗಾಗಿ ವಿದೇಶಿ ಅಧಿಕಾರಿಗಳಿಗೆ ಲಂಚ ಪಾವತಿಸುವುದನ್ನು ಕಾಯಿದೆಯು ನಿಷೇಧಿಸುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...