Homeಮುಖಪುಟಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

ಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

- Advertisement -
- Advertisement -

ತನ್ನ ಕಂಪೆನಿಯ ಮೇಲೆ ಅಮೆರಿಕದ ಅಧಿಕಾರಿಗಳು ಮಾಡಿರುವ ಆರೋಪಗಳ ಬಗ್ಗೆ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಪತ್ರಿಕೆಗಳು ತಪ್ಪಾಗಿ ಮತ್ತು ಅಜಾಗರೂಕ ವರದಿ ಮಾಡಿವೆ ಎಂದು ಶನಿವಾರ ಹೇಳಿದ್ದಾರೆ. ಅಮೆರಿಕ ದೋಷಾರೋಪಣೆಗೆ

“ಎರಡು ವಾರಗಳ ಹಿಂದೆಯೇ ಅದಾನಿ ಗ್ರೀನ್ ಎನರ್ಜಿಯಲ್ಲಿನ ಅನುಸರಣೆ ಪ್ರಕ್ರಿಯೆಗಳ ಬಗ್ಗೆ ನಾವು ಅಮೆರಿಕದಿಂದ ಆರೋಪಗಳನ್ನು ಎದುರಿಸಿದ್ದೇವೆ ಎಂದು ನಿಮ್ಮಲ್ಲಿ ಹೆಚ್ಚಿನವರು ಓದಿದ್ದೀರಿ. ಆದರೆ ನಾವು ಇಂತಹ ಸವಾಲುಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ.” ಎಂದು ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅದಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರತಿಯೊಂದು ದಾಳಿಯು ನಮ್ಮನ್ನು ಬಲಪಡಿಸುತ್ತದೆ ಮತ್ತು ಪ್ರತಿ ಅಡಚಣೆಯು ಅದಾನಿ ಗ್ರೂಪ್‌ಗೆ ಮತ್ತಷ್ಟು ಚೇತರಿಸಿಕೊಳ್ಳುವ ಮೆಟ್ಟಿಲು ಆಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ” ಎಂದು ಅದಾನಿ ಹೇಳಿದ್ದಾರೆ.

ಅಮರಿಕದಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿರುವ ಅದಾನಿ ಮತ್ತು ಇತರರ ದೋಷಾರೋಪಣೆಗೆ ಸಂಬಂಧಿಸಿದ ಬೆಳವಣಿಗೆಗಳನ್ನು ಖಾಸಗಿ ಕಂಪನಿಗಳು, ವ್ಯಕ್ತಿಗಳು ಮತ್ತು ಅಮೆರಿಕ ನ್ಯಾಯಾಂಗ ಇಲಾಖೆಯನ್ನು ಒಳಗೊಂಡಿರುವ ಕಾನೂನು ವಿಷಯವಾಗಿ ಪರಿಗಣಿಸುವುದಾಗಿ ಭಾರತ ಸರ್ಕಾರ ಹೇಳಿದ ಒಂದು ದಿನದ ನಂತರ ಅದಾನಿ ಈ ಹೇಳಿಕೆ ನೀಡಿದ್ದಾರೆ.

ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಾಹಕ ವನೀತ್ ಜೈನ್ ಅವರು ಸೆಕ್ಯುರಿಟೀಸ್ ವಂಚನೆ ಮತ್ತು ಅಮೆರಿಕದ ಸೆಕ್ಯುರಿಟೀಸ್ ನಿಯಮಗಳ ಉಲ್ಲಂಘನೆಗಾಗಿ ಪಿತೂರಿ ನಡೆಸಿದ್ದಾರೆ ಎಂದು ದೋಷಾರೋಪಣೆಯಲ್ಲಿ ಆರೋಪಿಸಲಾಗಿದೆ. ಅದಾನಿ ಗ್ರೀನ್ ಎನರ್ಜಿ ಕಾರ್ಯನಿರ್ವಾಹಕರು ಅಂತರಾಷ್ಟ್ರೀಯ ನಿಧಿಯನ್ನು ಪಡೆಯಲು ಲಂಚದ ಆಮಿಷ ನೀಡಿದ್ದರು ಎಂದು ಅದು ಆರೋಪಿಸಿದೆ.

ಅದಾನಿ ಮತ್ತು ಅವರ ಸಹಚರರು 2021 ಮತ್ತು 2023 ರ ನಡುವೆ ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ 2,200 ಕೋಟಿ ರೂಪಾಯಿಗಳನ್ನು ಲಂಚವಾಗಿ ಪಾವತಿಸಲು ಸಂಚು ರೂಪಿಸಿದ್ದಾರೆ ಎಂದು ಅಮೆರಿಕದ ಪ್ರಾಸಿಕ್ಯೂಟರ್‌ಗಳು ಪ್ರತಿಪಾದಿಸಿದ್ದಾರೆ. ಅಲ್ಲದೆ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಛತ್ತೀಸ್‌ಗಢ ಮತ್ತು ಜಮ್ಮು ಕಾಶ್ಮೀರದ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎನ್ನಲಾಗಿದೆ.

“ಸಾಕಷ್ಟು ಸ್ಥಾಪಿತ ವರದಿಗಳ ಹೊರತಾಗಿಯೂ, ಅದಾನಿ ಕಡೆಯಿಂದ ‘ವಿದೇಶಿ ಭ್ರಷ್ಟ ಆಚರಣೆಗಳ ಕಾಯ್ದೆ’ಯ ಉಲ್ಲಂಘನೆ ಆಗಿದೆ ಎಂದು ಯಾರೋಬ್ಬರೂ ಆರೋಪ ಮಾಡಿಲ್ಲ. ಜೊತೆಗೆ ನ್ಯಾಯಕ್ಕೆ ಅಡ್ಡಿಪಡಿಸುವ ಪಿತೂರಿ ನಡೆಸಲಾಗಿದೆ ಎಂಬ ಆರೋಪ ಹೊರಿಸಲಾಗಿಲ್ಲ. ಆದರೂ, ಇಂದಿನ ಜಗತ್ತಿನಲ್ಲಿ ನಕಾರಾತ್ಮಕತೆಯು ಸತ್ಯಗಳಿಗಿಂತ ವೇಗವಾಗಿ ಹರಡುತ್ತದೆ” ಎಂದು ಅದಾನಿ ಶನಿವಾರ ಹೇಳಿದ್ದಾರೆ.

ಜೊತೆಗೆ ಹಿಂಡೆನ್‌ಬರ್ಗ್ ವರದಿಯನ್ನು ಉಲ್ಲೇಖಿಸಿರುವ ಅದಾನಿ, ಪಟ್ಟಭದ್ರ ಮಾಧ್ಯಮ ಹಿತಾಸಕ್ತಿಗಳಿಂದ ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಅಮೆರಿಕದ ಅಧಿಕಾರಿಗಳು ಮಾಡಿರುವ ಆರೋಪಗಳನ್ನು ಅದಾನಿ ಗ್ರೂಪ್ ನಿರಾಕರಿಸಿದ್ದು, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ.

ವಿದೇಶಿ ಭ್ರಷ್ಟ ಆಚರಣೆಗಳ ಕಾಯಿದೆಯು ಅಮೆರಿಕದ ಕಾನೂನಾಗಿದ್ದು, ಹೆಚ್ಚಿನ ವ್ಯಾಪಾರ ವ್ಯವಹಾರಗಳಿಗಾಗಿ ವಿದೇಶಿ ಅಧಿಕಾರಿಗಳಿಗೆ ಲಂಚ ಪಾವತಿಸುವುದನ್ನು ಕಾಯಿದೆಯು ನಿಷೇಧಿಸುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತದಾನದ ಅಂಕಿ ಅಂಶಗಳಲ್ಲಿ ವ್ಯತ್ಯಾಸ; ಕಾಂಗ್ರೆಸ್‌ ಪ್ರತಿಪಾದನೆ ತಿರಸ್ಕರಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...