Homeಅಂತರಾಷ್ಟ್ರೀಯಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

- Advertisement -
- Advertisement -

ಭಾರತ ಮೂಲದ ಕಾಶ್ ಪಟೇಲ್ ಅವರು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಕಾಶ್ ಪಟೇಲ್‌ ಅವರು ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು ಎನ್ನಲಾಗಿದೆ. ಅಮೆರಿಕ

ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿತು. ಎಫ್​ಬಿಐನ 9ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಟ್ರಂಪ್‌ ಅವರು ಸಹಿ ಹಾಕಿದ್ದಾರೆ ಎಂದು ಯುಎಸ್‌ ಸೆನೆಟ್‌ ಖಚಿತಪಡಿಸಿದೆ.

ಕಾಶ್ ಪಟೇಲ್ ಇನ್ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಎಫ್​ಬಿಐನ 9ನೇ ನಿರ್ದೇಶಕರನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ತುಂಬಾ ಸಂತೋಷವಾಗಿದೆ. ನನ್ನ ಮೇಲಿಟ್ಟಿರುವ ನಿಮ್ಮ ನಂಬಿಕೆಗೆ ಧನ್ಯವಾದಗಳು. ಅಮೆರಿಕದ ಜನರಿಗೆ ಪಾರದರ್ಶಕ, ಜವಾಬ್ದಾರಿಯುತ ಮತ್ತು ನ್ಯಾಯಕ್ಕೆ ಬದ್ಧವಾಗಿರುವ ಎಫ್‌ಬಿಐ ಅಗತ್ಯವಿದೆ’’ ಎಂದು ಹೇಳಿದ್ದಾರೆ. ಅಮೆರಿಕ

ಕಾಶ್ ಪಟೇಲ್ ಯಾರು?

ಭಾರತ ಮೂಲದ ಅಮೇರಿಕನ್ ಪ್ರಜೆಯಾಗಿರುವ ಕಾಶ್ ಪಟೇಲ್ ಅವರು ನ್ಯೂಯಾರ್ಕ್‌ನ ಹ್ಯಾಗರ್ಡನ್ ನಗರದ ನಿವಾಸಿ. ಕಾಶ್ ಪಟೇಲ್ ಅವರ ಪೋಷಕರು ಗುಜರಾತ್‌ನವರಾಗಿದ್ದು, ಅವರ ಕುಟುಂಬ 1970 ರ ದಶಕದ ಆರಂಭದಲ್ಲಿ ವಿದೇಶಕ್ಕೆ ಸ್ಥಳಾಂತರಗೊಂಡಿತ್ತು. ಮೊದಲು ಉಗಾಂಡಾದಲ್ಲಿ ವಾಸಿಸುತ್ತಿದ್ದ ಅವರು, ನಂತರ, ಜನಾಂಗೀಯ ತಾರತಮ್ಯದಿಂದಾಗಿ, ಉಗಾಂಡಾವನ್ನು ತೊರೆದು ಕೆನಡಾದಲ್ಲಿ ನೆಲೆಸಿದ್ದರು.

ಅವರ ತಂದೆಗೆ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಸಿಕ್ಕ ನಂತರ ಅವರ ಕುಟುಂಬ ಅಮೆರಿಕಕ್ಕೆ ಸ್ಥಳಾಂತರಗೊಂಡಿತ್ತು. ಕಾಶ್ ಪಟೇಲ್‌ ಅವರು ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಎಂದು ಹೇಳಲಾಗುತ್ತಿದ್ದು, ಅವರು ರಿಚ್ಮಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ಅಧ್ಯಯನ ಮಾಡಿದ್ದಾರೆ.

ಕಾಶ್ ಪಟೇಲ್ ಅವರಿಗೆ ಡೊನಾಲ್ಡ್ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿತ್ತು. ನಂತರ ಅವರು ಐಸಿಸ್, ಅಲ್-ಬಾಗ್ದಾದಿ ಮತ್ತು ಖಾಸಿಮ್ ಅಲ್-ರಿಮಿಯಂತಹ ಅಲ್-ಖೈದಾ ನಾಯಕರನ್ನು ನಿರ್ಮೂಲನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಮೆರಿಕದ ಒತ್ತೆಯಾಳುಗಳನ್ನು ದೇಶಕ್ಕೆ ಮರಳಿ ಕರೆತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಇದಲ್ಲದೆ, ಕಾಶ್ ಪಟೇಲ್ ಗುಪ್ತಚರ ಕುರಿತ ಸದನದ ಶಾಶ್ವತ ಆಯ್ಕೆ ಸಮಿತಿಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಹಿರಿಯ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಅಮೆರಿಕದ ರಾಜ್ಯ ಮತ್ತು ಫೆಡರಲ್ ನ್ಯಾಯಾಲಯಗಳಲ್ಲಿ ಕೊಲೆ, ಕಳ್ಳಸಾಗಣೆ ಮುಂತಾದ ಪ್ರಕರಣಗಳನ್ನು ನಿಭಾಯಿಸಿದ್ದಾರೆ. ಟ್ರಂಪ್ ಅವರ ದೊಡ್ಡ ಅಭಿಮಾನಿಯಾಗಿರುವ ಅವರು, ಟ್ರಂಪ್‌ಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ಎಂದೇ ಪರಿಗಣಿಸಲ್ಪಟ್ಟವರು ಎಂದು ವರದಿ ಸೂಚಿಸಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...