Homeಅಂತರಾಷ್ಟ್ರೀಯಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

- Advertisement -
- Advertisement -

ಭಾರತ ಮೂಲದ ಕಾಶ್ ಪಟೇಲ್ ಅವರು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಕಾಶ್ ಪಟೇಲ್‌ ಅವರು ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು ಎನ್ನಲಾಗಿದೆ. ಅಮೆರಿಕ

ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿತು. ಎಫ್​ಬಿಐನ 9ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಟ್ರಂಪ್‌ ಅವರು ಸಹಿ ಹಾಕಿದ್ದಾರೆ ಎಂದು ಯುಎಸ್‌ ಸೆನೆಟ್‌ ಖಚಿತಪಡಿಸಿದೆ.

ಕಾಶ್ ಪಟೇಲ್ ಇನ್ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಎಫ್​ಬಿಐನ 9ನೇ ನಿರ್ದೇಶಕರನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ತುಂಬಾ ಸಂತೋಷವಾಗಿದೆ. ನನ್ನ ಮೇಲಿಟ್ಟಿರುವ ನಿಮ್ಮ ನಂಬಿಕೆಗೆ ಧನ್ಯವಾದಗಳು. ಅಮೆರಿಕದ ಜನರಿಗೆ ಪಾರದರ್ಶಕ, ಜವಾಬ್ದಾರಿಯುತ ಮತ್ತು ನ್ಯಾಯಕ್ಕೆ ಬದ್ಧವಾಗಿರುವ ಎಫ್‌ಬಿಐ ಅಗತ್ಯವಿದೆ’’ ಎಂದು ಹೇಳಿದ್ದಾರೆ. ಅಮೆರಿಕ

ಕಾಶ್ ಪಟೇಲ್ ಯಾರು?

ಭಾರತ ಮೂಲದ ಅಮೇರಿಕನ್ ಪ್ರಜೆಯಾಗಿರುವ ಕಾಶ್ ಪಟೇಲ್ ಅವರು ನ್ಯೂಯಾರ್ಕ್‌ನ ಹ್ಯಾಗರ್ಡನ್ ನಗರದ ನಿವಾಸಿ. ಕಾಶ್ ಪಟೇಲ್ ಅವರ ಪೋಷಕರು ಗುಜರಾತ್‌ನವರಾಗಿದ್ದು, ಅವರ ಕುಟುಂಬ 1970 ರ ದಶಕದ ಆರಂಭದಲ್ಲಿ ವಿದೇಶಕ್ಕೆ ಸ್ಥಳಾಂತರಗೊಂಡಿತ್ತು. ಮೊದಲು ಉಗಾಂಡಾದಲ್ಲಿ ವಾಸಿಸುತ್ತಿದ್ದ ಅವರು, ನಂತರ, ಜನಾಂಗೀಯ ತಾರತಮ್ಯದಿಂದಾಗಿ, ಉಗಾಂಡಾವನ್ನು ತೊರೆದು ಕೆನಡಾದಲ್ಲಿ ನೆಲೆಸಿದ್ದರು.

ಅವರ ತಂದೆಗೆ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಸಿಕ್ಕ ನಂತರ ಅವರ ಕುಟುಂಬ ಅಮೆರಿಕಕ್ಕೆ ಸ್ಥಳಾಂತರಗೊಂಡಿತ್ತು. ಕಾಶ್ ಪಟೇಲ್‌ ಅವರು ಡೊನಾಲ್ಡ್ ಟ್ರಂಪ್ ಅವರ ಆಪ್ತ ಮಿತ್ರ ಎಂದು ಹೇಳಲಾಗುತ್ತಿದ್ದು, ಅವರು ರಿಚ್ಮಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ ಅಧ್ಯಯನ ಮಾಡಿದ್ದಾರೆ.

ಕಾಶ್ ಪಟೇಲ್ ಅವರಿಗೆ ಡೊನಾಲ್ಡ್ ಟ್ರಂಪ್ ಅವರ ಮೊದಲ ಅವಧಿಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನೀಡಲಾಗಿತ್ತು. ನಂತರ ಅವರು ಐಸಿಸ್, ಅಲ್-ಬಾಗ್ದಾದಿ ಮತ್ತು ಖಾಸಿಮ್ ಅಲ್-ರಿಮಿಯಂತಹ ಅಲ್-ಖೈದಾ ನಾಯಕರನ್ನು ನಿರ್ಮೂಲನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಮೆರಿಕದ ಒತ್ತೆಯಾಳುಗಳನ್ನು ದೇಶಕ್ಕೆ ಮರಳಿ ಕರೆತರುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಇದಲ್ಲದೆ, ಕಾಶ್ ಪಟೇಲ್ ಗುಪ್ತಚರ ಕುರಿತ ಸದನದ ಶಾಶ್ವತ ಆಯ್ಕೆ ಸಮಿತಿಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ಹಿರಿಯ ಸಲಹೆಗಾರರಾಗಿಯೂ ಕೆಲಸ ಮಾಡಿದ್ದಾರೆ. ಅಮೆರಿಕದ ರಾಜ್ಯ ಮತ್ತು ಫೆಡರಲ್ ನ್ಯಾಯಾಲಯಗಳಲ್ಲಿ ಕೊಲೆ, ಕಳ್ಳಸಾಗಣೆ ಮುಂತಾದ ಪ್ರಕರಣಗಳನ್ನು ನಿಭಾಯಿಸಿದ್ದಾರೆ. ಟ್ರಂಪ್ ಅವರ ದೊಡ್ಡ ಅಭಿಮಾನಿಯಾಗಿರುವ ಅವರು, ಟ್ರಂಪ್‌ಗಾಗಿ ಏನು ಬೇಕಾದರೂ ಮಾಡುವ ವ್ಯಕ್ತಿ ಎಂದೇ ಪರಿಗಣಿಸಲ್ಪಟ್ಟವರು ಎಂದು ವರದಿ ಸೂಚಿಸಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...