Homeಅಂತರಾಷ್ಟ್ರೀಯಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

- Advertisement -
- Advertisement -

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ.

ದಿ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯವು ಮಾರ್ಚ್ 13ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನಮೀಬಿಯಾ, ಯುನೈಟೆಡ್ ಸ್ಟೇಟ್ಸ್, ಹಂಗೇರಿ ಮತ್ತು ಫಿಜಿ ದೇಶಗಳು ನ್ಯಾಯಾಲಯದ ಶಾಸನದ 63 ನೇ ವಿಧಿಯ ಅಡಿಯಲ್ಲಿ ಪ್ರಕರಣದಲ್ಲಿ ಮಧ್ಯಪ್ರವೇಶದ ಅರ್ಜಿಗಳನ್ನು ಸಲ್ಲಿಸಿವೆ.

ನೆದರ್ಲ್ಯಾಂಡ್ಸ್ ಮತ್ತು ಐಸ್‌ಲ್ಯಾಂಡ್ ರಾಷ್ಟ್ರಗಳು ನ್ಯಾಯಾಲಯದ ಶಾಸನದ 63ನೇ ವಿಧಿಯ ಅಡಿಯಲ್ಲಿ ಮಧ್ಯಪ್ರವೇಶದ ಅರ್ಜಿಗಳನ್ನು ಸಲ್ಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಈ ಪ್ರಕರಣವನ್ನು ಅಧಿಕೃತವಾಗಿ ‘ಗಾಝಾ ಪಟ್ಟಿಯಲ್ಲಿ ಹತ್ಯಾಕಾಂಡದ ತಡೆಗಟ್ಟುವಿಕೆ ಮತ್ತು ಶಿಕ್ಷೆ’ (ದಕ್ಷಿಣ ಆಫ್ರಿಕಾ vs ಇಸ್ರೇಲ್) ಎಂದು ಕರೆಯಲಾಗುತ್ತದೆ. ದಕ್ಷಿಣ ಆಫ್ರಿಕಾ 2023ರ ಡಿಸೆಂಬರ್‌ನಲ್ಲಿ ಇಸ್ರೇಲ್ ವಿರುದ್ಧ ಈ ದೂರನ್ನು ದಾಖಲಿಸಿದೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧವು ಅಲ್ಲಿನ ಫ್ಯಾಲೆಸ್ತೀನಿಯರ ಹತ್ಯಾಕಾಂಡಕ್ಕೆ ಕಾರಣವಾಗುತ್ತಿದೆ ಎಂಬುವುದು ದಕ್ಷಿಣ ಆಫ್ರಿಕಾದ ಮುಖ್ಯ ಆರೋಪವಾಗಿದೆ.

ನರಮೇಧ ಆರೋಪ ಅಲ್ಲಗಳೆದ ಅಮೆರಿಕ

ತನ್ನ ಮಧ್ಯ ಪ್ರವೇಶದ ಅರ್ಜಿಯಲ್ಲಿ ಇಸ್ರೇಲನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಅಮೆರಿಕ, ಇಸ್ರೇಲ್ ಗಾಝಾದಲ್ಲಿ ನರಮೇಧ ನಡೆಸಿದೆ ಎಂಬ ಆರೋಪಗಳನ್ನು ಆಧಾರರಹಿತ ಎಂದು ತಿರಸ್ಕರಿಸಿದೆ. ಇಸ್ರೇಲ್ ವಿರುದ್ಧದ ನರಮೇಧದ ಆರೋಪಗಳು ಸುಳ್ಳು ಎಂದಿರುವ ಅಮೆರಿಕ, ಇಸ್ರೇಲ್ ದೇಶದ ಕಾನೂನುಬದ್ಧತೆಯನ್ನು ಹಾಳುಮಾಡುವ ಪ್ರಯತ್ನದ ಭಾಗವಾಗಿ ಇಂತಹ ಆರೋಪಗಳನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪದೇ ಪದೇ ಮಾಡಲಾಗುತ್ತದೆ ಎಂದು ಹೇಳಿದೆ.

ಅಮೆರಿಕ ಇಸ್ರೇಲ್ ಪರ ವಕಾಲತ್ತು ವಹಿಸಿದರೂ, ವಿಶ್ವಸಂಸ್ಥೆಯ ತಜ್ಞರು ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಇಸ್ರೇಲ್ ಮೇಲೆ ನರಮೇಧದ ಆರೋಪ ಹೊರಿಸಿವೆ. ಗಾಝಾದಲ್ಲಿ ಕನಿಷ್ಠ 72,000 ಪ್ಯಾಲೆಸ್ತೀನಿಯರ ಹತ್ಯೆ ಮಾಡಲಾಗಿದೆ ಮತ್ತು ಅಲ್ಲಿನ ಬಹುತೇಕ ಸಂಪೂರ್ಣ ಜನಸಂಖ್ಯೆಯನ್ನು ಸ್ಥಳಾಂತರಗೊಳ್ಳುವಂತೆ ಅಥವಾ ಬಲವಂತವಾಗಿ ಸ್ಥಳಾಂತರಿಸಲಾಗಿದೆ ಎಂದು ಈ ಗುಂಪುಗಳು ದೂರಿವೆ.

ಇಸ್ರೇಲ್ ಪರ ವಕಾಲತ್ತು ವಹಿಸಿರುವ ಅಮೆರಿಕ, ಯಾವುದನ್ನಾದರೂ ನರಮೇಧ ಎಂದು ಕರೆಯಬೇಕಾದರೆ, ಒಂದು ನಿರ್ದಿಷ್ಟ ಗುಂಪಿನ ಜನರನ್ನು ಪೂರ್ತಿಯಾಗಿ ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ನಾಶಪಡಿಸುವ ಉದ್ದೇಶ ಇತ್ತು ಎಂಬುವುದು ಸಾಬೀತಾಗಬೇಕು ಎಂದಿದೆ.

ಯುದ್ಧದ ಸಮಯದಲ್ಲಿ ಸಾಮಾನ್ಯ ಜನರು ಸಾವನ್ನಪ್ಪುವುದು ಸಹಜ. ಅಂತಹ ಸಾವುಗಳು ಸಂಭವಿಸಿದ ತಕ್ಷಣ ಅದನ್ನು ನರಮೇಧ ಎನ್ನಲು ಬರುವುದಿಲ್ಲ ಎಂದು ಪ್ರತಿಪಾದಿಸಿದೆ.

ಜನರನ್ನು ಕೊಲ್ಲುವುದು ಇಸ್ರೇಲ್‌ನ ಮುಖ್ಯ ಗುರಿಯಾಗಿತ್ತು ಎಂದು ಖಚಿತವಾಗಿ ಸಾಬೀತುಪಡಿಸದ ಹೊರತು, ಅದನ್ನು ಅಪರಾಧ ಎಂದು ಪರಿಗಣಿಸಬಾರದು ಎಂಬುವುದು ಅಮೆರಿಕದ ವಾದವಾಗಿದೆ.

ನರಮೇಧದಂತಹ ದೊಡ್ಡ ಆರೋಪ ಮಾಡುವಾಗ ನ್ಯಾಯಾಲಯವು ಸಾಧಾರಣ ಸಾಕ್ಷ್ಯಗಳನ್ನು ನಂಬಬಾರದು, ಬದಲಿಗೆ ಅತ್ಯಂತ ಪ್ರಬಲವಾದ ಮತ್ತು ಕಟ್ಟುನಿಟ್ಟಾದ ಸಾಕ್ಷ್ಯಗಳನ್ನು ಕೇಳಬೇಕು. ಒಂದು ದೇಶದ ನಡವಳಿಕೆಯನ್ನು ನೋಡಿದಾಗ, ‘ಇವರು ಜನರನ್ನು ನಾಶಪಡಿಸಲೆಂದೇ ಹೀಗೆ ಮಾಡುತ್ತಿದ್ದಾರೆ’ ಎಂಬ ತೀರ್ಮಾನಕ್ಕೆ ಬರಲು ಬೇರೆ ಯಾವುದೇ ಕಾರಣಗಳು ಇಲ್ಲದಿದ್ದಾಗ ಮಾತ್ರ ಅದನ್ನು ನರಮೇಧ ಎಂದು ಕರೆಯಬೇಕು. ಇಸ್ರೇಲ್‌ನ ಕ್ರಮಗಳು ಕೇವಲ ಯುದ್ಧದ ಭಾಗವಾಗಿರದೆ, ಒಂದು ಜನಾಂಗವನ್ನು ಮುಗಿಸುವ ಸಂಚು ಎಂಬುವುದು ಪಕ್ಕಾ ಸಾಬೀತಾಗಬೇಕು ಎಂದು ಅಮೆರಿಕದ ಹೇಳಿದೆ.

ನರಮೇಧದ ಆರೋಪಗಳನ್ನು ಪರಿಶೀಲಿಸುವಾಗ, ಅಲ್ಲಿ ನಡೆಯುತ್ತಿರುವ ಯುದ್ಧದ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಅಮೆರಿಕ ಒತ್ತಿ ಹೇಳಿದೆ. ನಗರಗಳಂತಹ ಜನನಿಬಿಡ ಪ್ರದೇಶಗಳಲ್ಲಿ ಯುದ್ಧ ನಡೆಯುವಾಗ ನಾಗರಿಕರಿಗೆ ಹಾನಿಯಾಗುವುದು ಸಹಜ. ಅಂತಹ ಸಾವುಗಳು ಸಂಭವಿಸಿದ ತಕ್ಷಣ ಅದನ್ನು ನರಮೇಧ ಮಾಡುವ ಉದ್ದೇಶ ಎಂದು ಕರೆಯಲು ಬರುವುದಿಲ್ಲ. ಯುದ್ಧದಲ್ಲಿ ‘ಪಕ್ಷಪಾತವಿಲ್ಲದ ದಾಳಿ’ ಮತ್ತು ‘ಅಗತ್ಯಕ್ಕೆ ತಕ್ಕಷ್ಟು ಬಲಪ್ರಯೋಗ’ ಎಂಬ ನಿಯಮಗಳಿವೆ. ಇಸ್ರೇಲ್ ಈ ನಿಯಮಗಳ ಅಡಿಯಲ್ಲೇ ಕಾರ್ಯನಿರ್ವಹಿಸುತ್ತಿದೆ ಹೊರತು, ಜನರನ್ನು ನಾಶಪಡಿಸುವ ಉದ್ದೇಶದಿಂದಲ್ಲ ಎಂದು ಅಮೆರಿಕ ವಾದಿಸಿದೆ.

ನರಮೇಧ ಆರೋಪದ ಪ್ರಮುಖ ನಿಯಮಗಳನ್ನು (ವಿಧಿ 1, 2 ಮತ್ತು 3) ನ್ಯಾಯಾಲಯವು ಹೇಗೆ ಅರ್ಥೈಸಬೇಕು ಎಂಬುವುದರ ಮೇಲೆ ಪ್ರಭಾವ ಬೀರಲು ಅಮೆರಿಕ ಪ್ರಯತ್ನಿಸುತ್ತಿದೆ. ನರಮೇಧ ಎಂದರೇನು? ಅದನ್ನು ಹೇಗೆ ನಿರ್ಧರಿಸಬೇಕು? ಮತ್ತು ಅದಕ್ಕೆ ಯಾವ ಪುರಾವೆಗಳು ಬೇಕು? ಎಂಬ ವಿಷಯಗಳಲ್ಲಿ ಇಸ್ರೇಲ್‌ಗೆ ಅನುಕೂಲವಾಗುವಂತೆ ಕಾನೂನು ವಿವರಣೆ ನೀಡಲು ಅಮೆರಿಕ ಮುಂದಾಗಿದೆ. ನರಮೇಧವನ್ನು ಅಪರಾಧ ಎಂದು ಪರಿಗಣಿಸುವ ಮಾನದಂಡಗಳನ್ನು ಹೆಚ್ಚು ಕಠಿಣಗೊಳಿಸುವುದು ಅಮೆರಿಕದ ಉದ್ದೇಶವಾಗಿದೆ, ಇದರಿಂದ ಇಸ್ರೇಲ್ ಮೇಲಿನ ಆರೋಪಗಳು ಸಾಬೀತಾಗುವುದು ಕಷ್ಟವಾಗುತ್ತದೆ.

ಪ್ರಕರಣದಲ್ಲಿ ಜಾಗತಿಕ ಪಾಲ್ಗೊಳ್ಳುವಿಕೆ

ಈ ಪ್ರಕರಣವು ಎಷ್ಟು ಮುಖ್ಯವಾಗಿದೆಯೆಂದರೆ, ವಿಶ್ವದ ಅನೇಕ ದೇಶಗಳು ಇದರಲ್ಲಿ ಭಾಗಿಯಾಗಲು ಆಸಕ್ತಿ ತೋರಿಸಿವೆ. ಕೊಲಂಬಿಯಾ, ಮೆಕ್ಸಿಕೋ, ಟರ್ಕಿ, ಸ್ಪೇನ್, ಐರ್ಲೆಂಡ್, ಬ್ರೆಝಿಲ್ ಮತ್ತು ಬೆಲ್ಜಿಯಂ ಸೇರಿದಂತೆ ಹಲವಾರು ರಾಷ್ಟ್ರಗಳು ಈಗಾಗಲೇ ಮಧ್ಯಪ್ರವೇಶದ ಅರ್ಜಿಗಳನ್ನು ಸಲ್ಲಿಸಿವೆ.

ಕಳೆದ ಕೆಲವು ತಿಂಗಳುಗಳಲ್ಲಿ ಈ ದೇಶಗಳು ತಮ್ಮ ನಿಲುವನ್ನು ನ್ಯಾಯಾಲಯಕ್ಕೆ ತಿಳಿಸಿವೆ. ಇದು ಕೇವಲ ಎರಡು ದೇಶಗಳ ನಡುವಿನ ಸಮಸ್ಯೆಯಾಗಿ ಉಳಿಯದೆ, ಇಡೀ ವಿಶ್ವದ ಗಮನ ಸೆಳೆದಿರುವ ಪ್ರಕರಣವಾಗಿದೆ.

ನ್ಯಾಯಾಲಯದ ನಿಯಮಗಳ ಪ್ರಕಾರ, ಹೊಸದಾಗಿ ಸಲ್ಲಿಕೆಯಾಗಿರುವ ಈ ಮಧ್ಯಪ್ರವೇಶದ ಅರ್ಜಿಗಳ ಕುರಿತು ತಮ್ಮ ಲಿಖಿತ ಅಭಿಪ್ರಾಯವನ್ನು ಸಲ್ಲಿಸುವಂತೆ ಇಸ್ರೇಲ್ ಮತ್ತು ದಕ್ಷಿಣ ಆಫ್ರಿಕಾ ಎರಡೂ ದೇಶಗಳಿಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚಿಸಿದೆ.

ಅಂತಾರಾಷ್ಟ್ರೀಯ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆದೇಶಗಳನ್ನು ನೀಡಿದೆ.

ಜನವರಿ 2024ರಂದು ನರಮೇಧ ಎಂದು ಪರಿಗಣಿಸುವ ಯಾವುದೇ ಕೃತ್ಯಗಳು ನಡೆಯದಂತೆ ತಡೆಯಲು ಇಸ್ರೇಲ್‌ಗೆ ನ್ಯಾಯಾಲಯ ಸೂಚಿಸಿತ್ತು. ಗಾಝಾದ ಜನರಿಗೆ ತುರ್ತಾಗಿ ಅಗತ್ಯವಿರುವ ಮೂಲಭೂತ ಸೇವೆಗಳು ಮತ್ತು ಮಾನವೀಯ ಸಹಾಯವನ್ನು ಒದಗಿಸಲು ಇಸ್ರೇಲ್ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಪುರಾವೆಗಳು ಅಥವಾ ಸಾಕ್ಷ್ಯಗಳು ನಾಶವಾಗದಂತೆ ನೋಡಿಕೊಳ್ಳಲು ಮತ್ತು ಅವುಗಳನ್ನು ಸಂರಕ್ಷಿಸಲು ಸೂಚಿಸಿತ್ತು. ಈ ಆದೇಶಗಳನ್ನು ಜಾರಿಗೆ ತರಲು ತಾನು ಕೈಗೊಂಡ ಕ್ರಮಗಳ ಬಗ್ಗೆ ಒಂದು ತಿಂಗಳೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಇಸ್ರೇಲ್‌ಗೆ ತಿಳಿಸಿತ್ತು.

ಇನ್ನು, ಇದು ಅತ್ಯಂತ ಸಂಕೀರ್ಣವಾದ ಪ್ರಕರಣವಾಗಿದ್ದು, ಅಂತಿಮ ತೀರ್ಪು ಹೊರಬರಲು ಹಲವು ವರ್ಷಗಳು (ಬಹುಶಃ 2028ರವರೆಗೆ) ಹಿಡಿಯಬಹುದು ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...