Homeಅಂತರಾಷ್ಟ್ರೀಯಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

- Advertisement -
- Advertisement -

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ.

ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಮತ್ತು ಇರಾನ್ ಪರವಾಗಿ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗ ಶಾಂತಿ ಮಾತುಕತೆಯಲ್ಲಿ ಭಾಗವಹಿಸುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಅಲ್ಲಿನ ವಿದೇಶಾಂಗ ಸಚಿವರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ.

ಜೆ.ಡಿ ವ್ಯಾನ್ಸ್ ನಿಯೋಗದಲ್ಲಿ ಅಧ್ಯಕ್ಷ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಅಧ್ಯಕ್ಷ ಟ್ರಂಪ್ ಅವರ ಅಳಿಯ ಮತ್ತು ಸಲಹೆಗಾರ ಜೇರೆಡ್ ಕುಶ್ನರ್, ರಕ್ಷಣಾ ಇಲಾಖೆ ಅಥವಾ ನೌಕಾಪಡೆಯ ಉನ್ನತ ಅಧಿಕಾರಿ ಬ್ರಾಡ್ ಕೂಪರ್ ಮತ್ತು ಹೆಚ್ಚುವರಿಯಾಗಿ, ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ) ಮತ್ತು ವಿದೇಶಾಂಗ ಇಲಾಖೆಯ ತಜ್ಞರು ಇರಲಿದ್ದಾರೆ.

ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಕಾರ್ಯದರ್ಶಿ ಅಲಿ ಅಕ್ಬರ್ ಅಹ್ಮದಿಯಾನ್, ಇರಾನ್ ಕೇಂದ್ರೀಯ ಬ್ಯಾಂಕ್ ಗವರ್ನರ್ (ಆರ್ಥಿಕ ನಿರ್ಬಂಧಗಳ ಚರ್ಚೆಗಾಗಿ) ಅಬ್ದೋಲ್ನಾಸರ್ ಹೆಮ್ಮತಿ, ಹಿರಿಯ ರಾಜತಾಂತ್ರಿಕ ಮಜಿದ್ ತಖ್ತ್ ರಾವಂಚಿ ಮತ್ತು ಮಾಜಿ ಐಆರ್‌ಜಿಸಿ ಕಮಾಂಡರ್ ಮೊಹಮ್ಮದ್ ಬಘೇರ್ ಜೊಲ್ಘಾದರ್ ಇರಲಿದ್ದಾರೆ.

ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ಪರವಾಗಿ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಜೊತೆ ವಿದೇಶಾಂಗ ಸಚಿವ ಇಶಾಕ್ ದಾರ್, ಸೇನಾ ಮುಖ್ಯಸ್ಥ (ಭದ್ರತೆ ಮತ್ತು ಕಾರ್ಯತಂತ್ರದ ಮಾತುಕತೆಗಾಗಿ) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಝ್ ಸಾದಿಕ್ ಮತ್ತು ಆಂತರಿಕ ಸಚಿವ (ಭದ್ರತಾ ವ್ಯವಸ್ಥೆಗಳ ಉಸ್ತುವಾರಿ) ಮೊಹ್ಸಿನ್ ನಖ್ವಿ ಇರಲಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ ಸಂಘರ್ಷ ಪ್ರಾರಂಭಗೊಂಡಿತ್ತು. ನಂತರ ಏಪ್ರಿಲ್ 7ರಂದು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಘೋಷಿಸಲಾದ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಪ್ರಸ್ತುತ ಜಾರಿಯಲ್ಲಿದೆ.

ತಾತ್ಕಾಲಿಕ ಕದನ ವಿರಾಮಕ್ಕೆ ಎರಡು ಬೃಹತ್ ಮಿಲಿಟರಿ ಶಕ್ತಿಯ ರಾಷ್ಟ್ರಗಳನ್ನು ಒಪ್ಪಿಸಿರುವುದೇ ಪಾಕಿಸ್ತಾನದ ರಾಜತಾಂತ್ರಿಕತೆಗೆ ದೊರೆತ ದೊಡ್ಡ ಗೆಲವು ಎಂದು ಹೇಳಲಾಗ್ತಿದೆ. ಹಾಗಾಗಿ, ಶಾಶ್ವತ ಕದನ ವಿರಾಮಕ್ಕಾಗಿ ಶಾಂತಿ ಮಾತುಕತೆ ವಿಚಾರದಲ್ಲಿ ಪಾಕಿಸ್ತಾನ ಬಹಳ ಮುತುವರ್ಜಿ ವಹಿಸಿದೆ.

ಅಮೆರಿಕವು ಮುಖ್ಯವಾಗಿ ಇರಾನ್‌ನ ಪರಮಾಣು ಅಸ್ತ್ರ ತಯಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಹಾರ್ಮುಝ್  ಜಲಸಂಧಿಯನ್ನು ಅಂತಾರಾಷ್ಟ್ರೀಯ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ. ಇದಕ್ಕೆ ಪ್ರತಿಯಾಗಿ, ಇರಾನ್ ತನ್ನ ಮೇಲಿನ ಆರ್ಥಿಕ ನಿರ್ಬಂಧಗಳ ತೆರವು ಮತ್ತು ಅಮೆರಿಕದಲ್ಲಿ ಸ್ಥಗಿತಗೊಂಡಿರುವ ತನ್ನ ಆಸ್ತಿಗಳ ಬಿಡುಗಡೆಗೆ ಒತ್ತಾಯಿಸುತ್ತಿದೆ. ಆದರೆ, ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಈ ಮಾತುಕತೆಗೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದ್ದು, ಲೆಬನಾನ್‌ನಲ್ಲಿ ಸಂಪೂರ್ಣ ಕದನ ವಿರಾಮ ಏರ್ಪಡುವವರೆಗೂ ಶಾಶ್ವತ ಒಪ್ಪಂದ ಸಾಧ್ಯವಿಲ್ಲ ಎಂದು ಇರಾನ್ ಪಟ್ಟು ಹಿಡಿದಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಈ ಮಾತುಕತೆಯನ್ನು “ಮಾಡು ಇಲ್ಲವೇ ಮಡಿ” (make-or-break) ಕ್ಷಣವೆಂದು ಬಣ್ಣಿಸಿದ್ದು, ಇಡೀ ವಿಶ್ವದ ಗಮನ ಈಗ ಇಸ್ಲಾಮಾಬಾದ್‌ನತ್ತ ನೆಟ್ಟಿದೆ. ಮಾತುಕತೆಯನ್ನು ಯಶಸ್ವಿಗೊಳಿಸಲು ಪಾಕಿಸ್ತಾನದ ಉನ್ನತ ಸೇನಾ ಅಧಿಕಾರಿಗಳು ಕೂಡ ಭದ್ರತೆ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನೇರ ಮಾತುಕತೆ ಇಲ್ಲ

ಅಮೆರಿಕ ಮತ್ತು ಇರಾನ್ ನಡುವೆ ನೇರ ಮುಖಾಮುಖಿ ಮಾತುಕತೆ ನಡೆಯುತ್ತಿಲ್ಲ. ಬದಲಾಗಿ, ಈ ಮಾತುಕತೆಯು ‘ಪರೋಕ್ಷ’ ರೂಪದಲ್ಲಿರಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಪ್ರತಿನಿಧಿಗಳು ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವೆ ಸಂದೇಶಗಳನ್ನು ರವಾನಿಸಲಿದ್ದಾರೆ.

ವರದಿಗಳ ಪ್ರಕಾರ, ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ಇರಾನ್‌ನ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ಅವರು ಒಂದೇ ವೇದಿಕೆಯಲ್ಲಿ ಕುಳಿತು ಮಾತನಾಡುತ್ತಿಲ್ಲ. ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿದ್ದು, ಮಧ್ಯಸ್ಥಿಕೆದಾರರ ಮೂಲಕ ತಮ್ಮ ಬೇಡಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಅಮೆರಿಕದೊಂದಿಗೆ ನೇರವಾಗಿ ಮಾತನಾಡಲು ಇರಾನ್ ನಿರಾಕರಿಸಿದೆ. ತನ್ನ ಮೇಲಿನ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕುವವರೆಗೂ ಮತ್ತು ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ನಿಲ್ಲುವವರೆಗೂ ನೇರ ಮಾತುಕತೆಗೆ ಅವಕಾಶವಿಲ್ಲ ಎಂಬುದು ಇರಾನ್‌ನ ನಿಲುವಾಗಿದೆ.

ಈ ಹಿಂದೆಯೂ (ಉದಾಹರಣೆಗೆ ವಿಯೆನ್ನಾ ಮಾತುಕತೆಗಳಲ್ಲಿ) ಇರಾನ್ ಮತ್ತು ಅಮೆರಿಕ ನಡುವೆ ಐರೋಪ್ಯ ಒಕ್ಕೂಟ ಅಥವಾ ಇತರ ದೇಶಗಳ ಮೂಲಕ ಇಂತಹ ಪರೋಕ್ಷ ಮಾತುಕತೆಗಳೇ ನಡೆದಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...