Homeಅಂತರಾಷ್ಟ್ರೀಯಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

- Advertisement -
- Advertisement -

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ.

ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಮತ್ತು ಇರಾನ್ ಪರವಾಗಿ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗ ಶಾಂತಿ ಮಾತುಕತೆಯಲ್ಲಿ ಭಾಗವಹಿಸುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಅಲ್ಲಿನ ವಿದೇಶಾಂಗ ಸಚಿವರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ.

ಜೆ.ಡಿ ವ್ಯಾನ್ಸ್ ನಿಯೋಗದಲ್ಲಿ ಅಧ್ಯಕ್ಷ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಅಧ್ಯಕ್ಷ ಟ್ರಂಪ್ ಅವರ ಅಳಿಯ ಮತ್ತು ಸಲಹೆಗಾರ ಜೇರೆಡ್ ಕುಶ್ನರ್, ರಕ್ಷಣಾ ಇಲಾಖೆ ಅಥವಾ ನೌಕಾಪಡೆಯ ಉನ್ನತ ಅಧಿಕಾರಿ ಬ್ರಾಡ್ ಕೂಪರ್ ಮತ್ತು ಹೆಚ್ಚುವರಿಯಾಗಿ, ರಾಷ್ಟ್ರೀಯ ಭದ್ರತಾ ಮಂಡಳಿ (ಎನ್‌ಎಸ್‌ಸಿ) ಮತ್ತು ವಿದೇಶಾಂಗ ಇಲಾಖೆಯ ತಜ್ಞರು ಇರಲಿದ್ದಾರೆ.

ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಕಾರ್ಯದರ್ಶಿ ಅಲಿ ಅಕ್ಬರ್ ಅಹ್ಮದಿಯಾನ್, ಇರಾನ್ ಕೇಂದ್ರೀಯ ಬ್ಯಾಂಕ್ ಗವರ್ನರ್ (ಆರ್ಥಿಕ ನಿರ್ಬಂಧಗಳ ಚರ್ಚೆಗಾಗಿ) ಅಬ್ದೋಲ್ನಾಸರ್ ಹೆಮ್ಮತಿ, ಹಿರಿಯ ರಾಜತಾಂತ್ರಿಕ ಮಜಿದ್ ತಖ್ತ್ ರಾವಂಚಿ ಮತ್ತು ಮಾಜಿ ಐಆರ್‌ಜಿಸಿ ಕಮಾಂಡರ್ ಮೊಹಮ್ಮದ್ ಬಘೇರ್ ಜೊಲ್ಘಾದರ್ ಇರಲಿದ್ದಾರೆ.

ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ಪರವಾಗಿ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಜೊತೆ ವಿದೇಶಾಂಗ ಸಚಿವ ಇಶಾಕ್ ದಾರ್, ಸೇನಾ ಮುಖ್ಯಸ್ಥ (ಭದ್ರತೆ ಮತ್ತು ಕಾರ್ಯತಂತ್ರದ ಮಾತುಕತೆಗಾಗಿ) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಝ್ ಸಾದಿಕ್ ಮತ್ತು ಆಂತರಿಕ ಸಚಿವ (ಭದ್ರತಾ ವ್ಯವಸ್ಥೆಗಳ ಉಸ್ತುವಾರಿ) ಮೊಹ್ಸಿನ್ ನಖ್ವಿ ಇರಲಿದ್ದಾರೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ ಸಂಘರ್ಷ ಪ್ರಾರಂಭಗೊಂಡಿತ್ತು. ನಂತರ ಏಪ್ರಿಲ್ 7ರಂದು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಘೋಷಿಸಲಾದ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಪ್ರಸ್ತುತ ಜಾರಿಯಲ್ಲಿದೆ.

ತಾತ್ಕಾಲಿಕ ಕದನ ವಿರಾಮಕ್ಕೆ ಎರಡು ಬೃಹತ್ ಮಿಲಿಟರಿ ಶಕ್ತಿಯ ರಾಷ್ಟ್ರಗಳನ್ನು ಒಪ್ಪಿಸಿರುವುದೇ ಪಾಕಿಸ್ತಾನದ ರಾಜತಾಂತ್ರಿಕತೆಗೆ ದೊರೆತ ದೊಡ್ಡ ಗೆಲವು ಎಂದು ಹೇಳಲಾಗ್ತಿದೆ. ಹಾಗಾಗಿ, ಶಾಶ್ವತ ಕದನ ವಿರಾಮಕ್ಕಾಗಿ ಶಾಂತಿ ಮಾತುಕತೆ ವಿಚಾರದಲ್ಲಿ ಪಾಕಿಸ್ತಾನ ಬಹಳ ಮುತುವರ್ಜಿ ವಹಿಸಿದೆ.

ಅಮೆರಿಕವು ಮುಖ್ಯವಾಗಿ ಇರಾನ್‌ನ ಪರಮಾಣು ಅಸ್ತ್ರ ತಯಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಹಾರ್ಮುಝ್  ಜಲಸಂಧಿಯನ್ನು ಅಂತಾರಾಷ್ಟ್ರೀಯ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ. ಇದಕ್ಕೆ ಪ್ರತಿಯಾಗಿ, ಇರಾನ್ ತನ್ನ ಮೇಲಿನ ಆರ್ಥಿಕ ನಿರ್ಬಂಧಗಳ ತೆರವು ಮತ್ತು ಅಮೆರಿಕದಲ್ಲಿ ಸ್ಥಗಿತಗೊಂಡಿರುವ ತನ್ನ ಆಸ್ತಿಗಳ ಬಿಡುಗಡೆಗೆ ಒತ್ತಾಯಿಸುತ್ತಿದೆ. ಆದರೆ, ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಗಳು ಈ ಮಾತುಕತೆಗೆ ದೊಡ್ಡ ಅಡ್ಡಿಯಾಗಿ ಪರಿಣಮಿಸಿದ್ದು, ಲೆಬನಾನ್‌ನಲ್ಲಿ ಸಂಪೂರ್ಣ ಕದನ ವಿರಾಮ ಏರ್ಪಡುವವರೆಗೂ ಶಾಶ್ವತ ಒಪ್ಪಂದ ಸಾಧ್ಯವಿಲ್ಲ ಎಂದು ಇರಾನ್ ಪಟ್ಟು ಹಿಡಿದಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಈ ಮಾತುಕತೆಯನ್ನು “ಮಾಡು ಇಲ್ಲವೇ ಮಡಿ” (make-or-break) ಕ್ಷಣವೆಂದು ಬಣ್ಣಿಸಿದ್ದು, ಇಡೀ ವಿಶ್ವದ ಗಮನ ಈಗ ಇಸ್ಲಾಮಾಬಾದ್‌ನತ್ತ ನೆಟ್ಟಿದೆ. ಮಾತುಕತೆಯನ್ನು ಯಶಸ್ವಿಗೊಳಿಸಲು ಪಾಕಿಸ್ತಾನದ ಉನ್ನತ ಸೇನಾ ಅಧಿಕಾರಿಗಳು ಕೂಡ ಭದ್ರತೆ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನೇರ ಮಾತುಕತೆ ಇಲ್ಲ

ಅಮೆರಿಕ ಮತ್ತು ಇರಾನ್ ನಡುವೆ ನೇರ ಮುಖಾಮುಖಿ ಮಾತುಕತೆ ನಡೆಯುತ್ತಿಲ್ಲ. ಬದಲಾಗಿ, ಈ ಮಾತುಕತೆಯು ‘ಪರೋಕ್ಷ’ ರೂಪದಲ್ಲಿರಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಪ್ರತಿನಿಧಿಗಳು ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವೆ ಸಂದೇಶಗಳನ್ನು ರವಾನಿಸಲಿದ್ದಾರೆ.

ವರದಿಗಳ ಪ್ರಕಾರ, ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮತ್ತು ಇರಾನ್‌ನ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ಅವರು ಒಂದೇ ವೇದಿಕೆಯಲ್ಲಿ ಕುಳಿತು ಮಾತನಾಡುತ್ತಿಲ್ಲ. ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿದ್ದು, ಮಧ್ಯಸ್ಥಿಕೆದಾರರ ಮೂಲಕ ತಮ್ಮ ಬೇಡಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಅಮೆರಿಕದೊಂದಿಗೆ ನೇರವಾಗಿ ಮಾತನಾಡಲು ಇರಾನ್ ನಿರಾಕರಿಸಿದೆ. ತನ್ನ ಮೇಲಿನ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕುವವರೆಗೂ ಮತ್ತು ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ನಿಲ್ಲುವವರೆಗೂ ನೇರ ಮಾತುಕತೆಗೆ ಅವಕಾಶವಿಲ್ಲ ಎಂಬುದು ಇರಾನ್‌ನ ನಿಲುವಾಗಿದೆ.

ಈ ಹಿಂದೆಯೂ (ಉದಾಹರಣೆಗೆ ವಿಯೆನ್ನಾ ಮಾತುಕತೆಗಳಲ್ಲಿ) ಇರಾನ್ ಮತ್ತು ಅಮೆರಿಕ ನಡುವೆ ಐರೋಪ್ಯ ಒಕ್ಕೂಟ ಅಥವಾ ಇತರ ದೇಶಗಳ ಮೂಲಕ ಇಂತಹ ಪರೋಕ್ಷ ಮಾತುಕತೆಗಳೇ ನಡೆದಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...