Homeಅಂತರಾಷ್ಟ್ರೀಯಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

- Advertisement -
- Advertisement -

ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಶೇಕಡ 50ಕ್ಕೆ ಹೆಚ್ಚಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ಘೋಷಿಸಿದ್ದರು. ಅದರಂತೆ, ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ಜಾರಿಗೆ ತರುವ ಕುರಿತು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (ಸಿಬಿಪಿ) ಕರಡು ಅಧಿಸೂಚನೆ ಹೊರಡಿಸಿದೆ ಎಂದು ವರದಿಯಾಗಿದೆ.

“ರಷ್ಯನ್ ಒಕ್ಕೂಟದ ಸರ್ಕಾರದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಇರುವ ಬೆದರಿಕೆಗಳನ್ನು ಪರಿಹರಿಸುವುದು” ಎಂಬ ಶೀರ್ಷಿಕೆಯ, ಆಗಸ್ಟ್ 6, 2025ರಂದು ಟ್ರಂಪ್ ಸಹಿ ಹಾಕಿದ ಕಾರ್ಯಕಾರಿ ಆದೇಶ ಸಂಖ್ಯೆ 14329 ಅನ್ನು ಜಾರಿಗೆ ತರಲು ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಧಿಸೂಚನೆಯು ಭಾರತದ ಉತ್ಪನ್ನಗಳಾದ ವಸ್ತುಗಳ ಆಮದಿನ ಮೇಲೆ ಹೊಸ ಸುಂಕ ದರವನ್ನು ನಿರ್ದಿಷ್ಟಪಡಿಸಿದೆ ಎಂದು ವರದಿಗಳು ಹೇಳಿವೆ.

ಆಗಸ್ಟ್ 27, 2025ರಂದು ಪ್ರಕಟಿಸಲು ನಿರ್ಧರಿಸಲಾದ ಕರಡು ಅಧಿಸೂಚನೆಯಲ್ಲಿ, ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅನುಗುಣವಾಗಿ ಯುನೈಟೆಡ್ ಸ್ಟೇಟ್ಸ್‌ನ ಹಾರ್ಮೋನೈಸ್ಡ್ ಟ್ಯಾರಿಫ್ ವೇಳಾಪಟ್ಟಿಯನ್ನು (HTSUS) ಮಾರ್ಪಡಿಸುವುದು ಅಗತ್ಯವೆಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಹೊಸ ಸುಂಕಗಳು ಆಗಸ್ಟ್ 27, 2025ರಿಂದ ಜಾರಿಗೆ ಬರಲಿವೆ ಎಂದು ಸಿಬಿಪಿ ಸ್ಪಷ್ಟಪಡಿಸಿದೆ. ಆಗಸ್ಟ್ 27ರ ತಡರಾತ್ರಿ 12:01ರಿಂದ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಬಳಕೆಗಾಗಿ ಆಮದು ಮಾಡಿಕೊಳ್ಳುವ ಅಥವಾ ಬಳಕೆಗಾಗಿ ಗೋದಾಮುಗಳಿಂದ ಪಡೆದುಕೊಳ್ಳುವ ಭಾರತದ ಎಲ್ಲಾ ಉತ್ಪನ್ನಗಳಿಗೆ ಹೆಚ್ಚಿನ ಸುಂಕಗಳು ಅನ್ವಯಿಸುತ್ತವೆ ಎಂದು ತಿಳಿಸಲಾಗಿದೆ.

ಜುಲೈ 30, 2025ರಂದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ಘೋಷಿಸಿದ್ದರು.

“ನೆನಪಿಡಿ, ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ, ವಿಶ್ವದಲ್ಲೇ ಅತ್ಯಧಿಕವಾಗಿವೆ ಮತ್ತು ಅವರು ಇತರ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರವಾದ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ”ಎಂದು ಟ್ರಂಪ್ ಟ್ರುತ್ ಸೋಶಿಯಲ್‌ನ ಪೋಸ್ಟ್‌ನಲ್ಲಿ ಹೇಳಿದ್ದರು.

“ಅಲ್ಲದೆ, ಅವರು ಯಾವಾಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದಲೇ ಖರೀದಿಸಿದ್ದಾರೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರು ಹೌದು. ಉಕ್ರೇನ್‌ನಲ್ಲಿ ನಡೆಯುತ್ತಿರುವ ಹತ್ಯೆಯನ್ನು ರಷ್ಯಾ ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಸಮಯದಲ್ಲಿ ಇದು ಒಳ್ಳೆಯದಲ್ಲ. ಆದ್ದರಿಂದ ಭಾರತವು ಆಗಸ್ಟ್‌ನಿಂದ ಪ್ರಾರಂಭಿಸಿ ಶೇಕಡ 25ರಷ್ಟು ಸುಂಕವನ್ನು ಮತ್ತು ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಿದರೆ ದಂಡವನ್ನೂ ಪಾವತಿಸಬೇಕು” ಎಂದು ಬರೆದುಕೊಂಡಿದ್ದರು.

ಆಗಸ್ಟ್ 27ರಿಂದ ಜಾರಿಗೆ ಬರುವಂತೆ ಭಾರತೀಯ ಸರಕುಗಳ ಮೇಲೆ ಅಮೆರಿಕ ಶೇ. 50ರಷ್ಟು ಸುಂಕ ಹೇರುವ ಬಗ್ಗೆ ಸೋಮವಾರ (ಆಗಸ್ಟ್ 25, 2025) ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, “ಅಮೆರಿಕದ ಆರ್ಥಿಕ ಒತ್ತಡವನ್ನು ಲೆಕ್ಕಿಸದೆ ತಮ್ಮ ಸರ್ಕಾರವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

“ಎಷ್ಟೇ ಒತ್ತಡ ಬಂದರೂ, ಅದನ್ನು ತಡೆದುಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳುತ್ತಲೇ ಇರುತ್ತೇವೆ. ಇಂದು, ಆತ್ಮನಿರ್ಭರ ಭಾರತ ಅಭಿಯಾನವು ಗುಜರಾತ್‌ನಿಂದ ಸಾಕಷ್ಟು ಶಕ್ತಿಯನ್ನು ಪಡೆಯುತ್ತಿದೆ ಮತ್ತು ಇದರ ಹಿಂದೆ ಎರಡು ದಶಕಗಳ ಕಠಿಣ ಪರಿಶ್ರಮವಿದೆ” ಎಂದು ಸೋಮವಾರ ಅಹಮದಾಬಾದ್‌ನಲ್ಲಿ ಮಾಡಿದ ಸಾರ್ವಜನಿಕ ಭಾಷಣದಲ್ಲಿ ಮೋದಿ ಹೇಳಿಕೆ ನೀಡಿದ್ದಾರೆ.

ಹೆಚ್ಚುವರಿ ಸುಂಕದ ಪರಿಣಾಮವೇನು? 

2024ರಲ್ಲಿ ಅಮೆರಿಕವು ಭಾರತಕ್ಕೆ ಪ್ರಮುಖ ರಫ್ತು ತಾಣವಾಗಿದ್ದು, 87.3 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಕಳಿಸಿಕೊಟ್ಟಿದೆ.

ಶೇ. 50ರಷ್ಟು ಸುಂಕ ‘ವ್ಯಾಪಾರ ನಿರ್ಬಂಧಕ್ಕೆ ಸಮಾನವಾದುದು’ ಎಂದು ಆರ್ಥಿಕ ಸೇವೆಗಳ ಸಂಸ್ಥೆ ನೋಮುರಾದ ವಿಶ್ಲೇಷಕರು ಎಚ್ಚರಿಸಿದ್ದಾರೆ. ಇದು ‘ಕಡಿಮೆ ಮೌಲ್ಯವರ್ಧನೆ ಮತ್ತು ಲಾಭ’ ಹೊಂದಿರುವ ಸಣ್ಣ ಸಂಸ್ಥೆಗಳನ್ನು ನಾಶಪಡಿಸುತ್ತದೆ ಎಂಬುವುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

“ಇಷ್ಟೊಂದು ಭಾರವಾದ ಆಮದು ತೆರಿಗೆಳ ಅಡಿಯಲ್ಲಿ ಯಾವುದೇ ಭಾರತೀಯ ಉತ್ಪನ್ನವು ಯಾವುದೇ ಸ್ಪರ್ಧಾತ್ಮಕ ಅಂಚನ್ನು ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಮತ್ತೊಂದು ಆರ್ಥಿಕ ಸೇವೆಗಳ ಸಂಸ್ಥೆ ಎಲಾರಾ ಸೆಕ್ಯುರಿಟೀಸ್‌ನ ಗರಿಮಾ ಕಪೂರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಗಾಜಾದಲ್ಲಿ ಇಸ್ರೇಲ್ ದಾಳಿ: ನಾಲ್ವರು ಪತ್ರಕರ್ತರು ಸೇರಿ 15 ಜನರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...