Homeಅಂತರಾಷ್ಟ್ರೀಯಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

- Advertisement -
- Advertisement -

ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಶೇಕಡ 50ಕ್ಕೆ ಹೆಚ್ಚಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ಘೋಷಿಸಿದ್ದರು. ಅದರಂತೆ, ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ಜಾರಿಗೆ ತರುವ ಕುರಿತು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (ಸಿಬಿಪಿ) ಕರಡು ಅಧಿಸೂಚನೆ ಹೊರಡಿಸಿದೆ ಎಂದು ವರದಿಯಾಗಿದೆ.

“ರಷ್ಯನ್ ಒಕ್ಕೂಟದ ಸರ್ಕಾರದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಇರುವ ಬೆದರಿಕೆಗಳನ್ನು ಪರಿಹರಿಸುವುದು” ಎಂಬ ಶೀರ್ಷಿಕೆಯ, ಆಗಸ್ಟ್ 6, 2025ರಂದು ಟ್ರಂಪ್ ಸಹಿ ಹಾಕಿದ ಕಾರ್ಯಕಾರಿ ಆದೇಶ ಸಂಖ್ಯೆ 14329 ಅನ್ನು ಜಾರಿಗೆ ತರಲು ಹೆಚ್ಚುವರಿ ಸುಂಕಗಳನ್ನು ವಿಧಿಸಲಾಗುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಧಿಸೂಚನೆಯು ಭಾರತದ ಉತ್ಪನ್ನಗಳಾದ ವಸ್ತುಗಳ ಆಮದಿನ ಮೇಲೆ ಹೊಸ ಸುಂಕ ದರವನ್ನು ನಿರ್ದಿಷ್ಟಪಡಿಸಿದೆ ಎಂದು ವರದಿಗಳು ಹೇಳಿವೆ.

ಆಗಸ್ಟ್ 27, 2025ರಂದು ಪ್ರಕಟಿಸಲು ನಿರ್ಧರಿಸಲಾದ ಕರಡು ಅಧಿಸೂಚನೆಯಲ್ಲಿ, ಟ್ರಂಪ್ ಅವರ ಕಾರ್ಯಕಾರಿ ಆದೇಶಕ್ಕೆ ಅನುಗುಣವಾಗಿ ಯುನೈಟೆಡ್ ಸ್ಟೇಟ್ಸ್‌ನ ಹಾರ್ಮೋನೈಸ್ಡ್ ಟ್ಯಾರಿಫ್ ವೇಳಾಪಟ್ಟಿಯನ್ನು (HTSUS) ಮಾರ್ಪಡಿಸುವುದು ಅಗತ್ಯವೆಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಹೊಸ ಸುಂಕಗಳು ಆಗಸ್ಟ್ 27, 2025ರಿಂದ ಜಾರಿಗೆ ಬರಲಿವೆ ಎಂದು ಸಿಬಿಪಿ ಸ್ಪಷ್ಟಪಡಿಸಿದೆ. ಆಗಸ್ಟ್ 27ರ ತಡರಾತ್ರಿ 12:01ರಿಂದ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಬಳಕೆಗಾಗಿ ಆಮದು ಮಾಡಿಕೊಳ್ಳುವ ಅಥವಾ ಬಳಕೆಗಾಗಿ ಗೋದಾಮುಗಳಿಂದ ಪಡೆದುಕೊಳ್ಳುವ ಭಾರತದ ಎಲ್ಲಾ ಉತ್ಪನ್ನಗಳಿಗೆ ಹೆಚ್ಚಿನ ಸುಂಕಗಳು ಅನ್ವಯಿಸುತ್ತವೆ ಎಂದು ತಿಳಿಸಲಾಗಿದೆ.

ಜುಲೈ 30, 2025ರಂದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ಘೋಷಿಸಿದ್ದರು.

“ನೆನಪಿಡಿ, ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ವರ್ಷಗಳಲ್ಲಿ ಅವರೊಂದಿಗೆ ತುಲನಾತ್ಮಕವಾಗಿ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕಗಳು ತುಂಬಾ ಹೆಚ್ಚಿವೆ, ವಿಶ್ವದಲ್ಲೇ ಅತ್ಯಧಿಕವಾಗಿವೆ ಮತ್ತು ಅವರು ಇತರ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರವಾದ ವಿತ್ತೀಯವಲ್ಲದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ”ಎಂದು ಟ್ರಂಪ್ ಟ್ರುತ್ ಸೋಶಿಯಲ್‌ನ ಪೋಸ್ಟ್‌ನಲ್ಲಿ ಹೇಳಿದ್ದರು.

“ಅಲ್ಲದೆ, ಅವರು ಯಾವಾಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದಲೇ ಖರೀದಿಸಿದ್ದಾರೆ. ಚೀನಾದೊಂದಿಗೆ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರರು ಹೌದು. ಉಕ್ರೇನ್‌ನಲ್ಲಿ ನಡೆಯುತ್ತಿರುವ ಹತ್ಯೆಯನ್ನು ರಷ್ಯಾ ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಸಮಯದಲ್ಲಿ ಇದು ಒಳ್ಳೆಯದಲ್ಲ. ಆದ್ದರಿಂದ ಭಾರತವು ಆಗಸ್ಟ್‌ನಿಂದ ಪ್ರಾರಂಭಿಸಿ ಶೇಕಡ 25ರಷ್ಟು ಸುಂಕವನ್ನು ಮತ್ತು ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸಿದರೆ ದಂಡವನ್ನೂ ಪಾವತಿಸಬೇಕು” ಎಂದು ಬರೆದುಕೊಂಡಿದ್ದರು.

ಆಗಸ್ಟ್ 27ರಿಂದ ಜಾರಿಗೆ ಬರುವಂತೆ ಭಾರತೀಯ ಸರಕುಗಳ ಮೇಲೆ ಅಮೆರಿಕ ಶೇ. 50ರಷ್ಟು ಸುಂಕ ಹೇರುವ ಬಗ್ಗೆ ಸೋಮವಾರ (ಆಗಸ್ಟ್ 25, 2025) ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, “ಅಮೆರಿಕದ ಆರ್ಥಿಕ ಒತ್ತಡವನ್ನು ಲೆಕ್ಕಿಸದೆ ತಮ್ಮ ಸರ್ಕಾರವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

“ಎಷ್ಟೇ ಒತ್ತಡ ಬಂದರೂ, ಅದನ್ನು ತಡೆದುಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳುತ್ತಲೇ ಇರುತ್ತೇವೆ. ಇಂದು, ಆತ್ಮನಿರ್ಭರ ಭಾರತ ಅಭಿಯಾನವು ಗುಜರಾತ್‌ನಿಂದ ಸಾಕಷ್ಟು ಶಕ್ತಿಯನ್ನು ಪಡೆಯುತ್ತಿದೆ ಮತ್ತು ಇದರ ಹಿಂದೆ ಎರಡು ದಶಕಗಳ ಕಠಿಣ ಪರಿಶ್ರಮವಿದೆ” ಎಂದು ಸೋಮವಾರ ಅಹಮದಾಬಾದ್‌ನಲ್ಲಿ ಮಾಡಿದ ಸಾರ್ವಜನಿಕ ಭಾಷಣದಲ್ಲಿ ಮೋದಿ ಹೇಳಿಕೆ ನೀಡಿದ್ದಾರೆ.

ಹೆಚ್ಚುವರಿ ಸುಂಕದ ಪರಿಣಾಮವೇನು? 

2024ರಲ್ಲಿ ಅಮೆರಿಕವು ಭಾರತಕ್ಕೆ ಪ್ರಮುಖ ರಫ್ತು ತಾಣವಾಗಿದ್ದು, 87.3 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಕಳಿಸಿಕೊಟ್ಟಿದೆ.

ಶೇ. 50ರಷ್ಟು ಸುಂಕ ‘ವ್ಯಾಪಾರ ನಿರ್ಬಂಧಕ್ಕೆ ಸಮಾನವಾದುದು’ ಎಂದು ಆರ್ಥಿಕ ಸೇವೆಗಳ ಸಂಸ್ಥೆ ನೋಮುರಾದ ವಿಶ್ಲೇಷಕರು ಎಚ್ಚರಿಸಿದ್ದಾರೆ. ಇದು ‘ಕಡಿಮೆ ಮೌಲ್ಯವರ್ಧನೆ ಮತ್ತು ಲಾಭ’ ಹೊಂದಿರುವ ಸಣ್ಣ ಸಂಸ್ಥೆಗಳನ್ನು ನಾಶಪಡಿಸುತ್ತದೆ ಎಂಬುವುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

“ಇಷ್ಟೊಂದು ಭಾರವಾದ ಆಮದು ತೆರಿಗೆಳ ಅಡಿಯಲ್ಲಿ ಯಾವುದೇ ಭಾರತೀಯ ಉತ್ಪನ್ನವು ಯಾವುದೇ ಸ್ಪರ್ಧಾತ್ಮಕ ಅಂಚನ್ನು ತಡೆದುಕೊಳ್ಳಲು ಸಾಧ್ಯವಿಲ್ಲ” ಎಂದು ಮತ್ತೊಂದು ಆರ್ಥಿಕ ಸೇವೆಗಳ ಸಂಸ್ಥೆ ಎಲಾರಾ ಸೆಕ್ಯುರಿಟೀಸ್‌ನ ಗರಿಮಾ ಕಪೂರ್ ಹೇಳಿದ್ದಾಗಿ ವರದಿ ವಿವರಿಸಿದೆ.

ಗಾಜಾದಲ್ಲಿ ಇಸ್ರೇಲ್ ದಾಳಿ: ನಾಲ್ವರು ಪತ್ರಕರ್ತರು ಸೇರಿ 15 ಜನರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...