Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...