Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...