Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....