Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...