Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...