Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....