Homeಫ್ಯಾಕ್ಟ್‌ಚೆಕ್ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತ ಜಿಡಿಪಿ ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು.

- Advertisement -
- Advertisement -

‘ಬಿದ್ರೂ ಮೀಸೆ ಮಣ್ಣಾಗಿಲ್ಲ ಅಂತಾರೆ’ ಅನ್ನೋದು ಹಳೆ ಗಾದೇ. ‘ಮಣ್ಣಲೇ ಹೂತು ಹಾಕಿದರೂ ಮೀಸೆ ಮಣ್ಣಾಗಲಿಲ್ಲ ಅಂತಾರೆ’ ಅನ್ನೋದು ಹೊಸ ಗಾದೆ. ಇದು ಬಿಜೆಪಿ ಮತ್ತು ಪೋಸ್ಟ್‌ ಕಾರ್ಡ್‌ ಕನ್ನಡಕ್ಕೆ ಯಥಾವತ್ ಅನ್ವಯಿಸುತ್ತದೆ. ಕೆಟ್ಟ ಆರ್ಥಿಕ ನೀತಿಗಳ ಕಾರಣದಿಂದಾಗಿ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ -23.9ರ ಋಣಾತ್ಮಕ ಬೆಳವಳಿಗೆಯೊಂದಿಗೆ ಪಾತಾಳಕ್ಕೆ ಕುಸಿದಿದ್ದರೂ ಈ ವಿಚಾರವಾಗಿ ಪೋಸ್ಟ್ ಕಾರ್ಡ್ ಸುಳ್ಳು ಹೇಳುವುದನ್ನು ಬಿಟ್ಟಿಲ್ಲ.

ಇಂದು ಪೋಸ್ಟ್ ಕಾರ್ಡ್ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಎರಡು ಪೋಸ್ಟ್‌ಗಳನ್ನು ಹಂಚಿಕೊಂಡಿದೆ. ಆ ಪೋಸ್ಟರ್ ಪ್ರಕಾರ ಭಾರತಕ್ಕಿಂತಲೂ ಜಪಾನ್(-27.8), ಅಮೆರಿಕ(-32.9) ಮತ್ತು ಕೆನಡಾ(-38.7) ಜಿಡಿಪಿ ಹೆಚ್ಚು ಕುಸಿದಿದೆ. ಆದರೆ ಬ್ಯುಸಿನೆಸ್ ಟುಡೆ ಪತ್ರಿಕೆಯು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದು ತಪ್ಪು ಪ್ರಕಟಿಸಿದೆ. ನಂತರ ಆ ಪೋಸ್ಟರ್‌ ಅನ್ನು ಬ್ಯುಸಿನೆಸ್ ಟುಡೆ ಡಿಲೀಟ್ ಮಾಡಿದೆ ಎಂದು ಪೋಸ್ಟ್ ಕಾರ್ಡ್ ಹೇಳಿದೆ.

Posted by Postcard ಕನ್ನಡ on Tuesday, September 1, 2020

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ.

ಫ್ಯಾಕ್ಟ್‌ಚೆಕ್:

ಮೊಟ್ಟ ಮೊದಲನೇಯದಾಗಿ ಬ್ಯುಸಿನೆಸ್ ಟುಡೆ ಪತ್ರಿಕೆಯು ತನ್ನ ಲೇಖನ ಮತ್ತು ಪೋಸ್ಟರ್ ಅನ್ನು ಡಿಲೀಟ್ ಮಾಡಿಲ್ಲ. ಹಾಗೆಂದು ಪೋಸ್ಟ್‌ ಕಾರ್ಡ್ ಸುಳ್ಳು ಹೇಳಿದೆ ಅಷ್ಟೇ. ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.

ಎರಡನೇದಾಗಿ ನೀವು ಯಾವ ಅಂಕಿ ಅಂಶ ಹುಡುಕಿದರೂ ಭಾರತಕ್ಕಿಂತ ಅಮೆರಿಕ, ಕೆನಡಾ ಮತ್ತು ಜಪಾನ್ ಜಿಡಿಪಿ ಕೆಳಮಟ್ಟದಲ್ಲಿಲ್ಲ ಎಂದು ತಿಳಿಯುತ್ತದೆ.

Census and Economic Information Center ಪ್ರಪಂಚದ ಜಿಡಿಪಿ ಲೆಕ್ಕ ಹಾಕುವ ವಿಶ್ವಾಸಾರ್ಹ ಸಂಸ್ಥೆಯಾಗಿದ್ದು, ಅದು ಅಮೆರಿಕ (-9.1), ಜಪಾನ್ (-9.9), ಕೆನಡಾ(-13) ಮತ್ತು ಭಾರತ (-23.9) ಎಂದೇ ಜೂನ್‌ನಲ್ಲಿ ವರದಿ ನೀಡಿದೆ.

ಐಎಂಎಫ್, ವರ್ಲ್ಡ್ ಎಕಾನಾಮಿಕ ಫೋರಂ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಿದಂತೆ ಹಲವು ಸಂಸ್ಥೇಗಳು ಜೂನ್‌ನಲ್ಲಿ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿಯೂ ಸಹ ಪೋಸ್ಟ್ ಕಾರ್ಡ್ ಹೇಳಿರುವುದು ಸುಳ್ಳು ಎಂದು ಸಾಬೀತಾಗುವಂತಹ ಅಂಕಿ ಅಂಶಗಳಿವೆ. ಹಾಗಾಗಿ ಪೋಸ್ಟ್‌ ಕಾರ್ಡ್ ಸುಳ್ಳು ಸುದ್‌ದಿ ಹರಡಿರುವುದು ಸ್ಪಷ್ಟ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಋಣಾತ್ಮಕ ಬೆಳವಣಿಗೆಯನ್ನು ದಾಖಲಿಸುವುದರೊಂದಿಗೆ ವಿಶ್ವದ ಪ್ರಮುಖ ಆರ್ಥಿಕತೆಗಳು ದೊಡ್ಡಮಟ್ಟದ ಹೊಡೆತವನ್ನು…

Posted by BJP Karnataka on Sunday, August 23, 2020

ಅದೇ ರೀತಿಯಾಗಿ ಆಗಸ್ಟ್ 23 ರಂದು ಬಿಜೆಪಿ ಪಕ್ಷವು ತನ್ನ ಅಧಿಕೃತ ಫೇಸ್ ಬುಕ್ ಪುಟದಲ್ಲಿ ವಿಶ್ವದ ಆರ್ಥಿಕತೆಗಳಲ್ಲಾ ಕುಸಿದಿದ್ದರೂ ಭಾರತವು ಅಭಿವೃದ್ದಿ ಸಾಧಿಸುತ್ತಿದೆ ಎಂದು ಸುಳ್ಳು ಪ್ರಕಟ ಮಾಡಿತ್ತು. ಅದನ್ನು ಸುಳ್ಳು ಎಂದು ನಾನುಗೌರಿ.ಕಾಂ ಬಯಲುಗೊಳಿಸಿತ್ತು. ವರದಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...