Homeಅಂತರಾಷ್ಟ್ರೀಯಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

- Advertisement -
- Advertisement -

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಿಟಲ್‌ಸನ್ ರಸ್ತೆ ಬದಿ ನಿಂತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ.

ಇರಾಕ್‌ನ ಆಂತರಿಕ ಸಚಿವಾಲಯವು ಅಪಹರಣವನ್ನು ಖಚಿತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಮತ್ತು ಅವರು ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಅಪಹರಣದಲ್ಲಿ ಇರಾನ್ ಬೆಂಬಲಿತ ಮಿಲಿಟರಿ ಗುಂಪಾದ ಕತೈಬ್ ಹೆಜ್ಬುಲ್ಲಾ ಕೈವಾಡವಿರುವ ಸಾಧ್ಯತೆಯಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಕಿಟಲ್‌ಸನ್ ಅವರು ಐಸಿಸ್ (ISIS) ಮತ್ತು ಅಫ್ಘಾನಿಸ್ತಾನದ ಸಂಘರ್ಷಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ್ದರು. ಅಪಾಯದ ಮುನ್ಸೂಚನೆ ಇದ್ದರೂ ಅವರು ವರದಿಗಾರಿಕೆಗಾಗಿ ಇರಾಕ್‌ಗೆ ತೆರಳಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ಪತ್ರಕರ್ತೆಯ ಅಪಹರಣದ ದೃಶ್ಯವನ್ನು ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇರಾಕ್‌ ಅಧಿಕಾರಿಗಳು ಅಪಹರಣದ ಸುದ್ದಿ ತಿಳಿದು ಕಾರನ್ನು ಹಿಂಬಾಲಿಸಿದ್ದರು. ಕಾರು ಪತ್ತೆಯಾಗಿದೆ. ಆದರೆ, ಅದರಲ್ಲಿ ಶೆಲ್ಲಿ ಕಿಟಲ್‌ಸನ್ ಇರಲಿಲ್ಲ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಹೇಳಿದೆ.

ಪತ್ರಕರ್ತೆ ಜಿಲ್ ಕ್ಯಾರೊಲ್ ಅಪಹರಣ

ಈ ಹಿಂದೆ, ಜನವರಿ 7, 2006ರಂದು ‘ದಿ ಕ್ರಿಶ್ಚಿಯನ್ ಸೈನ್ಸ್ ಮಾನಿಟರ್’ ಪತ್ರಿಕೆಯ ವರದಿಗಾರ್ತಿಯಾಗಿದ್ದ ಜಿಲ್ ಕ್ಯಾರೊಲ್ ಅವರನ್ನು ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಈ ಸಮಯದಲ್ಲಿ ಕ್ಯಾರೊಲ್ ಅವರ ಇರಾಕಿ ಭಾಷಾಂತರಕಾರ ಅಲಾನ್ ಎನ್ವಿಯಾ ಅವರನ್ನು ಅಪಹರಣಕಾರರು ಹತ್ಯೆ ಮಾಡಿದ್ದರು.

ಸುಮಾರು 82 ದಿನಗಳ ಕಾಲ ಒತ್ತೆಯಾಳಾಗಿ ಇರಿಸಲ್ಪಟ್ಟಿದ್ದ ಕ್ಯಾರೊಲ್ ಅವರನ್ನು ಮಾರ್ಚ್ 30, 2006 ರಂದು ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿತ್ತು.

ಸಂಶೋಧಕಿ ಎಲಿಜಬೆತ್ ತರ್ಕೋವ್ ಅಪಹರಣ

2023ರಲ್ಲಿ ಇಸ್ರೇಲಿ-ರಷ್ಯನ್ ಸಂಶೋಧಕಿ ಎಲಿಜಬೆತ್ ತರ್ಕೋವ್ ಅವರನ್ನು ಕೂಡ ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಎಲಿಜಬೆತ್ ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದು, ತಮ್ಮ ಸಂಶೋಧನೆಗಾಗಿ ಮಾರ್ಚ್ 2023ರಲ್ಲಿ ಬಗ್ದಾದ್‌ಗೆ ಭೇಟಿ ನೀಡಿದ್ದರು. ಬಗ್ದಾದ್‌ನ ಕರ್ರಾಡಾ ಜಿಲ್ಲೆಯ ಕೆಫೆಯೊಂದರಿಂದ ಹೊರಬರುವಾಗ ಅವರನ್ನು ಅಪಹರಣ ಮಾಡಲಾಗಿತ್ತು.

ಎಲಿಜಬೆತ್ ಅವರನ್ನೂ ಕೂಡ ಕತೈಬ್ ಹೆಜ್ಬುಲ್ಲಾ ಗುಂಪು ಅಪಹರಿಸಿತ್ತು. ಈ ಗುಂಪು ಎಲಿಜಬೆತ್ ಅವರನ್ನು ಅಮೆರಿಕದ ಸಿಐಎ ಮತ್ತು ಇಸ್ರೇಲ್‌ನ ಮೊಸಾದ್ ಗುಪ್ತಚರ ಏಜೆಂಟ್ ಎಂದು ಆರೋಪಿಸಿತ್ತು.

ಒಟ್ಟು 903 ದಿನಗಳ ಕಾಲ (ಸುಮಾರು ಎರಡೂವರೆ ವರ್ಷ) ಎಲಿಜಬೆತ್ ಅವರು ಕತೈಬ್ ಹೆಜ್ಬುಲ್ಲಾದ ವಶದಲ್ಲಿದ್ದರು. ಈ ಸಮಯದಲ್ಲಿ ಅವರು ತೀವ್ರ ದೈಹಿಕ ಹಿಂಸೆ, ಚಾವಟಿ ಏಟು ಮತ್ತು ಎಲೆಕ್ಟ್ರಿಕ್ ಶಾಕ್‌ಗಳಂತಹ ಚಿತ್ರಹಿಂಸೆಗಳನ್ನು ಅನುಭವಿಸಿದ್ದಾಗಿ ಬಿಡುಗಡೆಯ ನಂತರ ಹೇಳಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಒತ್ತಡ ಮತ್ತು ಅಮೆರಿಕದ ಮಧ್ಯಸ್ಥಿಕೆಯ ನಂತರ, ಸೆಪ್ಟೆಂಬರ್ 2025ರಲ್ಲಿ ಎಲಿಜಬೆತ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಈ ಬಿಡುಗಡೆಯನ್ನು ಅಧಿಕೃತವಾಗಿ ಘೋಷಿಸಿದ್ದರು.

ಪ್ರಸ್ತುತ ಅವರು ಸುರಕ್ಷಿತವಾಗಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನೆಯನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...