Homeಅಂತರಾಷ್ಟ್ರೀಯಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

- Advertisement -
- Advertisement -

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಿಟಲ್‌ಸನ್ ರಸ್ತೆ ಬದಿ ನಿಂತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ.

ಇರಾಕ್‌ನ ಆಂತರಿಕ ಸಚಿವಾಲಯವು ಅಪಹರಣವನ್ನು ಖಚಿತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಮತ್ತು ಅವರು ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಈ ಅಪಹರಣದಲ್ಲಿ ಇರಾನ್ ಬೆಂಬಲಿತ ಮಿಲಿಟರಿ ಗುಂಪಾದ ಕತೈಬ್ ಹೆಜ್ಬುಲ್ಲಾ ಕೈವಾಡವಿರುವ ಸಾಧ್ಯತೆಯಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಕಿಟಲ್‌ಸನ್ ಅವರು ಐಸಿಸ್ (ISIS) ಮತ್ತು ಅಫ್ಘಾನಿಸ್ತಾನದ ಸಂಘರ್ಷಗಳ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ್ದರು. ಅಪಾಯದ ಮುನ್ಸೂಚನೆ ಇದ್ದರೂ ಅವರು ವರದಿಗಾರಿಕೆಗಾಗಿ ಇರಾಕ್‌ಗೆ ತೆರಳಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ಪತ್ರಕರ್ತೆಯ ಅಪಹರಣದ ದೃಶ್ಯವನ್ನು ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇರಾಕ್‌ ಅಧಿಕಾರಿಗಳು ಅಪಹರಣದ ಸುದ್ದಿ ತಿಳಿದು ಕಾರನ್ನು ಹಿಂಬಾಲಿಸಿದ್ದರು. ಕಾರು ಪತ್ತೆಯಾಗಿದೆ. ಆದರೆ, ಅದರಲ್ಲಿ ಶೆಲ್ಲಿ ಕಿಟಲ್‌ಸನ್ ಇರಲಿಲ್ಲ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಹೇಳಿದೆ.

ಪತ್ರಕರ್ತೆ ಜಿಲ್ ಕ್ಯಾರೊಲ್ ಅಪಹರಣ

ಈ ಹಿಂದೆ, ಜನವರಿ 7, 2006ರಂದು ‘ದಿ ಕ್ರಿಶ್ಚಿಯನ್ ಸೈನ್ಸ್ ಮಾನಿಟರ್’ ಪತ್ರಿಕೆಯ ವರದಿಗಾರ್ತಿಯಾಗಿದ್ದ ಜಿಲ್ ಕ್ಯಾರೊಲ್ ಅವರನ್ನು ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಈ ಸಮಯದಲ್ಲಿ ಕ್ಯಾರೊಲ್ ಅವರ ಇರಾಕಿ ಭಾಷಾಂತರಕಾರ ಅಲಾನ್ ಎನ್ವಿಯಾ ಅವರನ್ನು ಅಪಹರಣಕಾರರು ಹತ್ಯೆ ಮಾಡಿದ್ದರು.

ಸುಮಾರು 82 ದಿನಗಳ ಕಾಲ ಒತ್ತೆಯಾಳಾಗಿ ಇರಿಸಲ್ಪಟ್ಟಿದ್ದ ಕ್ಯಾರೊಲ್ ಅವರನ್ನು ಮಾರ್ಚ್ 30, 2006 ರಂದು ಯಾವುದೇ ಹಾನಿಯಿಲ್ಲದೆ ಬಿಡುಗಡೆ ಮಾಡಲಾಗಿತ್ತು.

ಸಂಶೋಧಕಿ ಎಲಿಜಬೆತ್ ತರ್ಕೋವ್ ಅಪಹರಣ

2023ರಲ್ಲಿ ಇಸ್ರೇಲಿ-ರಷ್ಯನ್ ಸಂಶೋಧಕಿ ಎಲಿಜಬೆತ್ ತರ್ಕೋವ್ ಅವರನ್ನು ಕೂಡ ಬಗ್ದಾದ್‌ನಲ್ಲಿ ಅಪಹರಿಸಲಾಗಿತ್ತು.

ಎಲಿಜಬೆತ್ ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದು, ತಮ್ಮ ಸಂಶೋಧನೆಗಾಗಿ ಮಾರ್ಚ್ 2023ರಲ್ಲಿ ಬಗ್ದಾದ್‌ಗೆ ಭೇಟಿ ನೀಡಿದ್ದರು. ಬಗ್ದಾದ್‌ನ ಕರ್ರಾಡಾ ಜಿಲ್ಲೆಯ ಕೆಫೆಯೊಂದರಿಂದ ಹೊರಬರುವಾಗ ಅವರನ್ನು ಅಪಹರಣ ಮಾಡಲಾಗಿತ್ತು.

ಎಲಿಜಬೆತ್ ಅವರನ್ನೂ ಕೂಡ ಕತೈಬ್ ಹೆಜ್ಬುಲ್ಲಾ ಗುಂಪು ಅಪಹರಿಸಿತ್ತು. ಈ ಗುಂಪು ಎಲಿಜಬೆತ್ ಅವರನ್ನು ಅಮೆರಿಕದ ಸಿಐಎ ಮತ್ತು ಇಸ್ರೇಲ್‌ನ ಮೊಸಾದ್ ಗುಪ್ತಚರ ಏಜೆಂಟ್ ಎಂದು ಆರೋಪಿಸಿತ್ತು.

ಒಟ್ಟು 903 ದಿನಗಳ ಕಾಲ (ಸುಮಾರು ಎರಡೂವರೆ ವರ್ಷ) ಎಲಿಜಬೆತ್ ಅವರು ಕತೈಬ್ ಹೆಜ್ಬುಲ್ಲಾದ ವಶದಲ್ಲಿದ್ದರು. ಈ ಸಮಯದಲ್ಲಿ ಅವರು ತೀವ್ರ ದೈಹಿಕ ಹಿಂಸೆ, ಚಾವಟಿ ಏಟು ಮತ್ತು ಎಲೆಕ್ಟ್ರಿಕ್ ಶಾಕ್‌ಗಳಂತಹ ಚಿತ್ರಹಿಂಸೆಗಳನ್ನು ಅನುಭವಿಸಿದ್ದಾಗಿ ಬಿಡುಗಡೆಯ ನಂತರ ಹೇಳಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಒತ್ತಡ ಮತ್ತು ಅಮೆರಿಕದ ಮಧ್ಯಸ್ಥಿಕೆಯ ನಂತರ, ಸೆಪ್ಟೆಂಬರ್ 2025ರಲ್ಲಿ ಎಲಿಜಬೆತ್ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾಕ್ ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಈ ಬಿಡುಗಡೆಯನ್ನು ಅಧಿಕೃತವಾಗಿ ಘೋಷಿಸಿದ್ದರು.

ಪ್ರಸ್ತುತ ಅವರು ಸುರಕ್ಷಿತವಾಗಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸಂಶೋಧನೆಯನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...