Homeಅಂತರಾಷ್ಟ್ರೀಯಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

- Advertisement -
- Advertisement -

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ.

ಡಿಸೆಂಬರ್ 13ರಂದು ಸಿರಿಯಾದಲ್ಲಿ ಅಮೆರಿಕದ ಪಡೆಗಳ ಮೇಲೆ ಐಎಸ್ ನಡೆಸಿದ ಮಾರಕ ದಾಳಿಗೆ ಪ್ರತೀಕಾರವಾಗಿ, ‘ಆಪರೇಷನ್ ಹಾಕೈ ಸ್ಟ್ರೈಕ್‌ನ (Operation Hawkeye Strike) ಭಾಗವಾಗಿರುವ ಈ ದಾಳಿಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ (ಜ.12) ನಿರ್ದೇಶಿಸಿದ್ದಾರೆ ಎಂದು ಸೆಂಟ್‌ಕಾಮ್ ಎಕ್ಸ್‌ನಲ್ಲಿ ಬರೆದಿದೆ.

ಸೆಂಟ್‌ಕಾಮ್ ಪ್ರಕಾರ, ಭಯೋತ್ಪಾದನೆಯನ್ನು ಎದುರಿಸಲು ಮತ್ತು ಈ ಪ್ರದೇಶದಲ್ಲಿ ಅಮೆರಿಕ ಮತ್ತು ಪಾಲುದಾರ ಪಡೆಗಳನ್ನು ರಕ್ಷಿಸುವ ಪ್ರಯತ್ನವಾಗಿ ಈ ದಾಳಿಗಳನ್ನು ನಡೆಸಲಾಗಿದೆ.

“ನಮ್ಮ ಸಂದೇಶವು ಪ್ರಬಲವಾಗಿದೆ: ನೀವು ನಮ್ಮ ಯುದ್ಧ ಯೋಧರಿಗೆ ಹಾನಿ ಮಾಡಿದರೆ, ನೀವು ನ್ಯಾಯದಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ನಾವು ನಿಮ್ಮನ್ನು ಜಗತ್ತಿನ ಎಲ್ಲಿಯಾದರೂ ಹುಡುಕಿ ಕೊಲ್ಲುತ್ತೇವೆ” ಎಂದು ಸೆಂಟ್‌ಕಾಮ್ ಹೇಳಿದೆ.

20ಕ್ಕೂ ಹೆಚ್ಚು ವಿಮಾನಗಳನ್ನು ಒಳಗೊಂಡ ಕಾರ್ಯಾಚರಣೆಯಲ್ಲಿ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು 35ಕ್ಕೂ ಹೆಚ್ಚು ಐಎಸ್ ತಾಣಗಳ ಮೇಲೆ 90ಕ್ಕೂ ಹೆಚ್ಚು ನಿಖರ ಯುದ್ಧಸಾಮಗ್ರಿಗಳನ್ನು ಹಾರಿಸಿವೆ ಎಂದು ಅಧಿಕಾರಿಯೊಬ್ಬರು ತನ್ನ ಯುಎಸ್ ಪಾಲುದಾರ ಸಿಬಿಎಸ್ ನ್ಯೂಸ್‌ಗೆ ತಿಳಿಸಿದ್ದಾಗಿ ಬಿಬಿಸಿ ವರದಿ ಮಾಡಿದೆ.

ಎಫ್-15ಇ, ಎ-10, ಎಸಿ-130ಜೆ, ಎಂಕ್ಯೂ-9 ಮತ್ತು ಜೋರ್ಡಾನ್ ಎಫ್-16 ಸೇರಿದಂತೆ ಹಲವು ವಿಮಾನಗಳು ದಾಳಿಯಲ್ಲಿ ಭಾಗವಹಿಸಿದ್ದವು ಎಂದು ಅಧಿಕಾರಿ ತಿಳಿಸಿದ್ದಾರೆ. ದಾಳಿ ನಡೆದ ಸ್ಥಳ ಮತ್ತು ಸಾವುನೋವುಗಳ ಪ್ರಮಾಣ ಇನ್ನೂ ಸ್ಪಷ್ಟವಾಗಿಲ್ಲ.

“ನಾವು ಎಂದಿಗೂ ಮರೆಯುವುದಿಲ್ಲ, ಮತ್ತು ಎಂದಿಗೂ ಪಶ್ಚಾತ್ತಾಪ ಪಡುವುದಿಲ್ಲ” ಎಂದು ಯುಎಸ್‌ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಶನಿವಾರ ಎಕ್ಸ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಬರೆದಿದ್ದರು.

ಡಿಸೆಂಬರ್‌ನಲ್ಲಿ ಸಿರಿಯಾದ ಮಧ್ಯಭಾಗದಲ್ಲಿರುವ ಪಾಲ್ಮಿರಾದಲ್ಲಿ ಐಎಸ್ ಬಂದೂಕುಧಾರಿಯೊಬ್ಬ ಇಬ್ಬರು ಅಮೆರಿಕನ್ ಸೈನಿಕರು ಮತ್ತು ಅಮೆರಿಕನ್ ನಾಗರಿಕ ಭಾಷಾಂತರಕಾರನನ್ನು ಹೊಂಚುದಾಳಿಯಲ್ಲಿ ಕೊಂದ ನಂತರ, ಟ್ರಂಪ್ ಆಡಳಿತವು ಮೊದಲು ‘ಆಪರೇಷನ್ ಹಾಕೈ ಸ್ಟ್ರೈಕ್’ ಅನ್ನು ಘೋಷಿಸಿತ್ತು.

“ಇದು ಯುದ್ಧದ ಆರಂಭವಲ್ಲ – ಇದು ಪ್ರತೀಕಾರದ ಘೋಷಣೆ” ಎಂದು ಡಿಸೆಂಬರ್‌ನಲ್ಲಿ ಕಾರ್ಯಾಚರಣೆಯನ್ನು ಘೋಷಿಸುವಾಗ ಹೆಗ್ಸೆತ್ ಹೇಳಿದ್ದರು.

“ಅಧ್ಯಕ್ಷ ಟ್ರಂಪ್ ಅವರ ನಾಯಕತ್ವದಲ್ಲಿ, ಅಮೆರಿಕ ಸಂಯುಕ್ತ ಸಂಸ್ಥಾನವು ನಮ್ಮ ಜನರನ್ನು ರಕ್ಷಿಸಲು ಎಂದಿಗೂ ಹಿಂಜರಿಯುವುದಿಲ್ಲ ಮತ್ತು ಎಂದಿಗೂ ಪಶ್ಚಾತ್ತಾಪ ಪಡುವುದಿಲ್ಲ” ಎಂದಿದ್ದರು.

ಶನಿವಾರದ ಇತ್ತೀಚಿನ ದಾಳಿಗಳಿಗೂ ಮುನ್ನ, ಆಪರೇಷನ್ ಹಾಕೈ ಸ್ಟ್ರೈಕ್‌ನ ಭಾಗವಾಗಿ ಡಿಸೆಂಬರ್ 20 ಮತ್ತು ಡಿಸೆಂಬರ್ 29 ರ ನಡುವೆ 11 ಕಾರ್ಯಾಚರಣೆಗಳಲ್ಲಿ ಅಮೆರಿಕ ಪಡೆಗಳು ಸುಮಾರು 25 ಐಎಸ್ ಗುಂಪಿನ ಸದಸ್ಯರನ್ನು ಕೊಂದಿವೆ ಅಥವಾ ಸೆರೆಹಿಡಿದಿವೆ ಎಂದು ಸೆಂಟ್‌ಕಾಮ್ ತಿಳಿಸಿದೆ.

ಡಿಸೆಂಬರ್ 19ರಂದು ನಡೆದ ಕಾರ್ಯಾಚರಣೆಯ ಮೊದಲ ಹಂತದಲ್ಲಿ, ಅಮೆರಿಕ ಮತ್ತು ಜೋರ್ಡಾನ್ ಪಡೆಗಳು ಐಎಸ್ ಗುಂಪಿನ ವಿರುದ್ಧ ‘ಬೃಹತ್ ದಾಳಿ’ ನಡೆಸಿದ್ದವು. ಮಧ್ಯ ಸಿರಿಯಾದಾದ್ಯಂತ ಅನೇಕ ಸ್ಥಳಗಳಲ್ಲಿ 70ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ಮಾಡಲು ಫೈಟರ್ ಜೆಟ್‌ಗಳು, ದಾಳಿ ಹೆಲಿಕಾಪ್ಟರ್‌ಗಳು ಮತ್ತು ಫಿರಂಗಿಗಳನ್ನು ನಿಯೋಜಿಸಿದ್ದವು ಎಂದು ಸೆಂಟ್‌ಕಾಮ್ ವರದಿ ಮಾಡಿದೆ.

ಈ ಕಾರ್ಯಾಚರಣೆಯಲ್ಲಿ, ಐಎಸ್ ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ತಾಣಗಳನ್ನು ಗುರಿಯಾಗಿಸಿಕೊಂಡು 100ಕ್ಕೂ ಹೆಚ್ಚು ನಿಖರ ಯುದ್ಧಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

ಡಿಸೆಂಬರ್ 2024ರಲ್ಲಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್ ಅವರ ಆಡಳಿತ ಪತನವಾದಾಗಿನಿಂದ ಸಿರಿಯಾ ದುರ್ಬಲ ಸ್ಥಿತಿಯಲ್ಲಿದೆ. ಅಸ್ಸಾದ್ ಆಡಳಿತದ ಪತನ 13 ವರ್ಷಗಳ ಕಾಲ ದೇಶವನ್ನು ಧ್ವಂಸಗೊಳಿಸಿದ್ದ ಅಂತರ್ಯುದ್ಧವನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸಿದೆ ಎನ್ನಲಾಗಿದೆ.

ಅಬು ಮೊಹಮ್ಮದ್ ಅಲ್-ಜೊಲಾನಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಹ್ಮದ್ ಅಲ್-ಶರಾ, ಅವರ ಬಂಡಾಯ ಗುಂಪು ಅಸ್ಸಾದ್ ಅವರನ್ನು ಪದಚ್ಯುತಗೊಳಿಸಿ ಸಿರಿಯಾ ನಿಯಂತ್ರಣವನ್ನು ಗಟ್ಟಿಗೊಳಿಸಿದಾಗಿನಿಂದ ದೇಶದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಿರಿಯಾದಲ್ಲಿ ಐಎಸ್ ದುರ್ಬಲಗೊಂಡಿದೆ, ಆದರೆ ಇನ್ನೂ ಸಕ್ರಿಯವಾಗಿದೆ. 2025ರಲ್ಲಿ ಈಶಾನ್ಯದಲ್ಲಿ ಕುರ್ದಿಶ್ ನೇತೃತ್ವದ ಪಡೆಗಳ ವಿರುದ್ಧ ಪ್ರಧಾನವಾಗಿ ದಾಳಿಗಳನ್ನು ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...