Homeಅಂತರಾಷ್ಟ್ರೀಯಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

- Advertisement -
- Advertisement -

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ. 

ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್ ಜಲಸಂಧಿಯನ್ನು ಪ್ರವೇಶಿಸುವ ಅಥವಾ ಅಲ್ಲಿಂದ ಹೊರಹೋಗುವ ಎಲ್ಲಾ ಹಡಗುಗಳನ್ನು ತಡೆಯಲು ಅಮೆರಿಕ ನೌಕಾಪಡೆಗೆ ಸೂಚಿಸಿದ್ದಾರೆ. ಈ ದಿಗ್ಬಂಧನವು ಇರಾನ್‌ನ ಬಂದರುಗಳಿಗೆ ಹೋಗುವ ಅಥವಾ ಅಲ್ಲಿಂದ ಬರುವ ಹಡಗುಗಳಿಗೆ ಅನ್ವಯಿಸುತ್ತದೆ.

ಇರಾನ್‌ಗೆ ‘ಕಾನೂನುಬಾಹಿರ ಸುಂಕ’ ಪಾವತಿಸಿ ಪ್ರಯಾಣಿಸುವ ಯಾವುದೇ ಹಡಗುಗಳಿಗೆ ಸುರಕ್ಷಿತ ಮಾರ್ಗ ನೀಡುವುದಿಲ್ಲ ಎಂದು ಅಮೆರಿಕ ಘೋಷಿಸಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಇಂತಹ ಹಡಗುಗಳನ್ನು ತಡೆಹಿಡಿಯಲು ನೌಕಾಪಡೆಗೆ ಆದೇಶಿಸಲಾಗಿದೆ.

ಅಮೆರಿಕದ ಈ ನಡೆಯನ್ನು ಇರಾನ್ ತೀವ್ರವಾಗಿ ಖಂಡಿಸಿದೆ. ಹಾರ್ಮುಝ್ ಜಲಸಂಧಿಯತ್ತ ಬರುವ ಯಾವುದೇ ಮಿಲಿಟರಿ ಹಡಗುಗಳನ್ನು ಕದನ ವಿರಾಮದ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಮತ್ತು ಅವುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಎಚ್ಚರಿಸಿದೆ.

ಜಲಸಂಧಿಯ ನೀರಿನಾಳದಲ್ಲಿ ಇರಾನ್ ಅಳವಡಿಸಿರುವ ಸ್ಪೋಟಕಗಳನ್ನು ನಾಶಪಡಿಸುವ ಪ್ರಕ್ರಿಯೆಯನ್ನು ಅಮೆರಿಕದ ನೌಕಾಪಡೆ ಆರಂಭಿಸಿದೆ. ಎರಡು ಅಮೆರಿಕನ್ ಯುದ್ಧನೌಕೆಗಳು ಈಗಾಗಲೇ ಜಲಸಂಧಿಯನ್ನು ದಾಟಿ ತೆರವು ಕಾರ್ಯದಲ್ಲಿ ತೊಡಗಿವೆ ಎಂದು ವರದಿಯಾಗಿದೆ.

ಐಆರ್‌ಜಿಸಿ ಹಾರ್ಮುಝ್ ಜಲಸಂಧಿಯು ತನ್ನ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಘೋಷಿಸಿದೆ. ಶತ್ರು ನೌಕೆಗಳು ಯಾವುದೇ ‘ತಪ್ಪು ಹೆಜ್ಜೆ’ ಇಟ್ಟರೆ ಅವುಗಳನ್ನು ಮರಣ ಸುಳಿಯೊಳಗೆ ಸಿಲುಕಿಸುವುದಾಗಿ ಎಚ್ಚರಿಸಿದೆ.

ಜಲಸಂಧಿಯತ್ತ ಬರುವ ಅಮೆರಿಕದ ಯಾವುದೇ ಮಿಲಿಟರಿ ಹಡಗುಗಳನ್ನು ಏಪ್ರಿಲ್ 22ರವರೆಗೆ ಜಾರಿಯಲ್ಲಿರುವ ಕದನ ವಿರಾಮದ ಸ್ಪಷ್ಟ ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಮತ್ತು ಅವುಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಜಲಸಂಧಿಯು ಕೇವಲ ನಾಗರಿಕ ಮತ್ತು ವಾಣಿಜ್ಯ ಹಡಗುಗಳ ಸಂಚಾರಕ್ಕೆ ಮಾತ್ರ ಮುಕ್ತವಾಗಿದೆ, ಆದರೆ ಅವುಗಳು ಇರಾನ್‌ನ ನಿಯಮಗಳಿಗೆ ಒಳಪಟ್ಟಿರಬೇಕು ಎಂದು ಸ್ಪಷ್ಟಪಡಿಸಿದೆ.

ಇರಾನ್‌ನ ಸಂಸತ್ತಿನ ಉಪ ಸಭಾಪತಿ ಹಾಜಿ ಬಾಬಾಯಿ ಅವರು ಹಾರ್ಮುಝ್ ಜಲಸಂಧಿಯನ್ನು ಬಳಸುವ ಹಡಗುಗಳು ಇರಾನ್‌ನ ಕರೆನ್ಸಿಯಾದ ರಿಯಾಲ್’ನಲ್ಲಿ ಸುಂಕ ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಮೆರಿಕದ ನೌಕಾಪಡೆ ಈಗಾಗಲೇ ಜಲಸಂಧಿಯನ್ನು ದಾಟಿ ಸ್ಪೋಟಕ ತೆರವು ಕಾರ್ಯಾಚರಣೆ ಆರಂಭಿಸಿದೆ ಎಂಬ ವರದಿಗಳನ್ನು ಇರಾನ್ ಸುಳ್ಳು ಎಂದು ತಳ್ಳಿಹಾಕಿದೆ.

ಇರಾನ್ ಸಂಸತ್ತಿನ ಸಭಾಪತಿ ಮೊಹಮ್ಮದ್ ಬಾಘರ್ ಘಾಲಿಬಾಫ್ ಅವರು ಅಮೆರಿಕದ ದಿಗ್ಬಂಧನದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಲಿವೆ ಮತ್ತು ಅಮೆರಿಕದ ಜನರೇ ಇದರ ಬಿಸಿ ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

ವಿಶ್ವದ ಸುಮಾರು ಶೇ. 20ರಷ್ಟು ತೈಲ ಸಾಗಣೆಯಾಗುವ ಈ ಮಾರ್ಗದಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಬೆಲೆ ಏರಿಕೆಯಾಗುವ ಮತ್ತು ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುವ ಭೀತಿ ಎದುರಾಗಿದೆ.

ಇಸ್ಲಾಮಾಬಾದ್‌ನಲ್ಲಿ ಸುಮಾರು 21 ಗಂಟೆಗಳ ಕಾಲ ನಡೆದ ಶಾಂತಿ ಮಾತುಕತೆ ವಿಫಲವಾಗಲು, ಇರಾನ್ ತನ್ನ ಪರಮಾಣು ಕಾರ್ಯಕ್ರಮವನ್ನು ತ್ಯಜಿಸಲು ಒಪ್ಪದಿದ್ದದ್ದು ಮತ್ತು ಹಾರ್ಮುಝ್ ಜಲಸಂಧಿಯ ಮೇಲಿನ ನಿಯಂತ್ರಣವನ್ನು ಬಿಟ್ಟುಕೊಡಲು ನಿರಾಕರಿಸಿದ್ದೇ ಮುಖ್ಯ ಕಾರಣ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಹೇಳಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...