Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

- Advertisement -
- Advertisement -

ಯುಎಸ್‌ (ಅಮೆರಿಕ) ನ ಮುಂದಿನ ಅಧ್ಯಕ್ಷರ ಆಯ್ಕೆಗೆ ಮಂಗಳವಾರ (ನ.5) ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಮತ್ತು ಹಾಲಿ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರು ಕಮಲಾ ಹ್ಯಾರಿಸ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ, ನಿರ್ಣಾಯಕ ಏಳು ರಾಜ್ಯಗಳ ಪೈಕಿ ಐದರಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಸಮರ ಏರ್ಪಟ್ಟಿದೆ. ಟ್ರಂಪ್ ಅವರು ಈಗಾಗಲೇ ಉತ್ತರ ಕೆರೊಲಿನಾವನ್ನು ಗೆದ್ದುಕೊಂಡಿದ್ದಾರೆ.

ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಶೇಕಡಾ 50.8, ಅಂದರೆ 25,71,258 ಮತಗಳನ್ನು ಗಳಿಸಿದರೆ, ಕಮಲಾ ಹ್ಯಾರಿಸ್ 24,36,454 ( ಶೇ. 48.1) ಮತಗಳನ್ನು ಗಳಿಸಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಗೆಲ್ಲಲು ಒಟ್ಟು 270 ಸ್ಥಾನಗಳ ಅಗತ್ಯವಿದ್ದು, ಪ್ರಸ್ತುತ ಕಮಲಾ ಹ್ಯಾರಿಸ್ ಎದುರು ಟ್ರಂಪ್ 230-210 ಅಂತರದ ಮುನ್ನಡೆಯಲ್ಲಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾರಿಸ್ ಅವರು ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಮೊದಲ ಮಹಿಳೆ ಎಂದು ಎನಿಸಿಕೊಳ್ಳಲು ಆಶಿಸಿದ್ದಾರೆ. ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಇತಿಹಾಸ ನಿರ್ಮಿಸುವ ಪ್ರಯತ್ನದಲ್ಲಿದ್ದಾರೆ.

ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನ? ( ಬೆಳಿಗ್ಗೆ 11 ಗಂಟೆ- IST)

ಡೊನಾಲ್ಡ್‌ ಟ್ರಂಪ್‌ : ಯೊಮಿಂಗ್‌ (3), ವೆಸ್ಟ್ ವರ್ಜೀನಿಯಾ (4), ಉತಾಹ್‌ (6), ಟೆಕ್ಸಾಸ್‌ (40), ಟೆನೆಸ್ಸೀ (11), ದಕ್ಷಿಣ ಕರೋಲಿನಾ (9), ಒಕ್ಲಾಹೊಮಾ (7), ಒಹಿಯೊ (17), ನೆಬ್ರಸ್ಕಾ (3), ಉತ್ತರ ಡಕೋಟ (3), ಮೊಂಟಾನ (4), ಮಿಸ್ಸಿಸ್ಸಿಪ್ಪಿ (6), ಮಿಸ್ಸೌರಿ (10), ಲೂಸಿಯಾನಾ (8), ಕೆಂಟುಕಿ (8), ಕಾನ್ಸಾಸ್‌ (6), ಇಂಡಿಯಾನಾ (11), ಲೋವಾ (6), ಫ್ಲೋರಿಡಾ (30), ಅರ್ಕಾನ್ಸಸ್‌ (6), ಅಲಬಾಮ (9).

ಕಮಲಾ ಹ್ಯಾರಿಸ್‌ : ಕೊಲೊರಾಡೊ (10), ಕನೆಕ್ಟಿಕಟ್ (7), ವಾಷಿಂಗ್ಟನ್‌ (3), ಡೆಲವೇರ್‌ (3), ಇಲಿನಿಯೊಸ್‌ (19), ಮಸ್ಸಾಚುಸೆಟ್ಸ್‌ (11), ಮೇರಿಲ್ಯಾಂಡ್‌ (10), ನ್ಯೂಜೆರ್ಸಿ (14), ನ್ಯೂಯಾರ್ಕ್‌ (28), ರೋಡ್ ಐಸ್‌ಲ್ಯಾಂಡ್ (4), ವೆರ್ಮಾಂಟ್‌ (3).

ನಿರೀಕ್ಷೆಯಂತೆ ಟ್ರಂಪ್ ಅವರು ‘ಕೆಂಪು ರಾಜ್ಯಗಳು’ ಎಂದು ಗುರುತಿಸಲ್ಪಡುವ ಸಾಂಪ್ರಾದಾಯಿಕ ಅಮೆರಿಕನ್ನರು ಹೆಚ್ಚಿರುವ ಕಡೆಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ. ಈ ರಾಜ್ಯಗಳ ಪೈಕಿ ಇಂಡಿಯಾನಾ, ಕೆಂಟುಕಿ ಮತ್ತು ವೆಸ್ಟ್ ವರ್ಜೀನಿಯಾದಲ್ಲಿ ಗೆಲುವು ಸಾಧಿಸಿದ್ದಾರೆ.

ಟೆಕ್ಸಾಸ್‌ನಲ್ಲಿ 40 ಸ್ಥಾನಗಳನ್ನು ಟ್ರಂಪ್ ಪಡೆದಿದ್ದಾರೆ. 2016 ರಿಂದಲೂ ಪ್ರತಿ ಚುನಾವಣೆಗಳಲ್ಲಿ ಅವರು ಇಲ್ಲಿ ಇಷ್ಟು ಸ್ಥಾನಗಳನ್ನು ಪಡೆಯುತ್ತಿದ್ದಾರೆ. ಓಹಿಯೋದಲ್ಲಿ 17 ಸ್ಥಾನಗಳನ್ನು ಪಡೆಯುವ ಮೂಲಕ ಟ್ರಂಪ್ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ.

ಮತ್ತೊಂದೆಡೆ, ಹ್ಯಾರಿಸ್ ಅವರು ಡೆಮಾಕ್ರಟಿಕ್ ಭದ್ರಕೋಟೆಗಳಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ, ನ್ಯೂಯಾರ್ಕ್‌ನಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ. ಅಲ್ಲಿ ಅವರು 28 ಸ್ಥಾನಗಳನ್ನು ಪಡೆದಿದ್ದಾರೆ. ‘ನೀಲಿ ರಾಜ್ಯಗಳು’ ಎಂದು ಗುರುತಿಸಲ್ಪಡುವ ಉದಾರವಾದಿ ಅಮೆರಿಕನ್ನರು ಹೆಚ್ಚಿರುವ ಪ್ರದೇಶಗಳಾದ ಇಲಿನಿಯೊಸ್‌ (19) ನ್ಯೂಜೆರ್ಸಿ(14) ಮತ್ತು ಕೊಲೊರಾಡೋ ಮತ್ತು ವಾಷಿಂಗ್ಟನ್ ಡಿ.ಸಿ ಸೇರಿದಂತೆ ಈಶಾನ್ಯದ ಇತರ ರಾಜ್ಯಗಳಲ್ಲಿ ಹ್ಯಾರಿಸ್ ಪ್ರಾಬಲ್ಯ ಸಾಧಿಸಿದ್ದಾರೆ.

ಇದನ್ನೂ ಓದಿ : ದೀಪಾವಳಿಯಂದು ದೇವಸ್ಥಾನದ ಮೇಲೆ ದಾಳಿ; ಕೆನಡಾದಲ್ಲಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...