Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

- Advertisement -
- Advertisement -

ಯುಎಸ್‌ (ಅಮೆರಿಕ) ನ ಮುಂದಿನ ಅಧ್ಯಕ್ಷರ ಆಯ್ಕೆಗೆ ಮಂಗಳವಾರ (ನ.5) ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಮತ್ತು ಹಾಲಿ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರು ಕಮಲಾ ಹ್ಯಾರಿಸ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ, ನಿರ್ಣಾಯಕ ಏಳು ರಾಜ್ಯಗಳ ಪೈಕಿ ಐದರಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಸಮರ ಏರ್ಪಟ್ಟಿದೆ. ಟ್ರಂಪ್ ಅವರು ಈಗಾಗಲೇ ಉತ್ತರ ಕೆರೊಲಿನಾವನ್ನು ಗೆದ್ದುಕೊಂಡಿದ್ದಾರೆ.

ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಶೇಕಡಾ 50.8, ಅಂದರೆ 25,71,258 ಮತಗಳನ್ನು ಗಳಿಸಿದರೆ, ಕಮಲಾ ಹ್ಯಾರಿಸ್ 24,36,454 ( ಶೇ. 48.1) ಮತಗಳನ್ನು ಗಳಿಸಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಗೆಲ್ಲಲು ಒಟ್ಟು 270 ಸ್ಥಾನಗಳ ಅಗತ್ಯವಿದ್ದು, ಪ್ರಸ್ತುತ ಕಮಲಾ ಹ್ಯಾರಿಸ್ ಎದುರು ಟ್ರಂಪ್ 230-210 ಅಂತರದ ಮುನ್ನಡೆಯಲ್ಲಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾರಿಸ್ ಅವರು ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಮೊದಲ ಮಹಿಳೆ ಎಂದು ಎನಿಸಿಕೊಳ್ಳಲು ಆಶಿಸಿದ್ದಾರೆ. ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಇತಿಹಾಸ ನಿರ್ಮಿಸುವ ಪ್ರಯತ್ನದಲ್ಲಿದ್ದಾರೆ.

ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನ? ( ಬೆಳಿಗ್ಗೆ 11 ಗಂಟೆ- IST)

ಡೊನಾಲ್ಡ್‌ ಟ್ರಂಪ್‌ : ಯೊಮಿಂಗ್‌ (3), ವೆಸ್ಟ್ ವರ್ಜೀನಿಯಾ (4), ಉತಾಹ್‌ (6), ಟೆಕ್ಸಾಸ್‌ (40), ಟೆನೆಸ್ಸೀ (11), ದಕ್ಷಿಣ ಕರೋಲಿನಾ (9), ಒಕ್ಲಾಹೊಮಾ (7), ಒಹಿಯೊ (17), ನೆಬ್ರಸ್ಕಾ (3), ಉತ್ತರ ಡಕೋಟ (3), ಮೊಂಟಾನ (4), ಮಿಸ್ಸಿಸ್ಸಿಪ್ಪಿ (6), ಮಿಸ್ಸೌರಿ (10), ಲೂಸಿಯಾನಾ (8), ಕೆಂಟುಕಿ (8), ಕಾನ್ಸಾಸ್‌ (6), ಇಂಡಿಯಾನಾ (11), ಲೋವಾ (6), ಫ್ಲೋರಿಡಾ (30), ಅರ್ಕಾನ್ಸಸ್‌ (6), ಅಲಬಾಮ (9).

ಕಮಲಾ ಹ್ಯಾರಿಸ್‌ : ಕೊಲೊರಾಡೊ (10), ಕನೆಕ್ಟಿಕಟ್ (7), ವಾಷಿಂಗ್ಟನ್‌ (3), ಡೆಲವೇರ್‌ (3), ಇಲಿನಿಯೊಸ್‌ (19), ಮಸ್ಸಾಚುಸೆಟ್ಸ್‌ (11), ಮೇರಿಲ್ಯಾಂಡ್‌ (10), ನ್ಯೂಜೆರ್ಸಿ (14), ನ್ಯೂಯಾರ್ಕ್‌ (28), ರೋಡ್ ಐಸ್‌ಲ್ಯಾಂಡ್ (4), ವೆರ್ಮಾಂಟ್‌ (3).

ನಿರೀಕ್ಷೆಯಂತೆ ಟ್ರಂಪ್ ಅವರು ‘ಕೆಂಪು ರಾಜ್ಯಗಳು’ ಎಂದು ಗುರುತಿಸಲ್ಪಡುವ ಸಾಂಪ್ರಾದಾಯಿಕ ಅಮೆರಿಕನ್ನರು ಹೆಚ್ಚಿರುವ ಕಡೆಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ. ಈ ರಾಜ್ಯಗಳ ಪೈಕಿ ಇಂಡಿಯಾನಾ, ಕೆಂಟುಕಿ ಮತ್ತು ವೆಸ್ಟ್ ವರ್ಜೀನಿಯಾದಲ್ಲಿ ಗೆಲುವು ಸಾಧಿಸಿದ್ದಾರೆ.

ಟೆಕ್ಸಾಸ್‌ನಲ್ಲಿ 40 ಸ್ಥಾನಗಳನ್ನು ಟ್ರಂಪ್ ಪಡೆದಿದ್ದಾರೆ. 2016 ರಿಂದಲೂ ಪ್ರತಿ ಚುನಾವಣೆಗಳಲ್ಲಿ ಅವರು ಇಲ್ಲಿ ಇಷ್ಟು ಸ್ಥಾನಗಳನ್ನು ಪಡೆಯುತ್ತಿದ್ದಾರೆ. ಓಹಿಯೋದಲ್ಲಿ 17 ಸ್ಥಾನಗಳನ್ನು ಪಡೆಯುವ ಮೂಲಕ ಟ್ರಂಪ್ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ.

ಮತ್ತೊಂದೆಡೆ, ಹ್ಯಾರಿಸ್ ಅವರು ಡೆಮಾಕ್ರಟಿಕ್ ಭದ್ರಕೋಟೆಗಳಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ, ನ್ಯೂಯಾರ್ಕ್‌ನಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ. ಅಲ್ಲಿ ಅವರು 28 ಸ್ಥಾನಗಳನ್ನು ಪಡೆದಿದ್ದಾರೆ. ‘ನೀಲಿ ರಾಜ್ಯಗಳು’ ಎಂದು ಗುರುತಿಸಲ್ಪಡುವ ಉದಾರವಾದಿ ಅಮೆರಿಕನ್ನರು ಹೆಚ್ಚಿರುವ ಪ್ರದೇಶಗಳಾದ ಇಲಿನಿಯೊಸ್‌ (19) ನ್ಯೂಜೆರ್ಸಿ(14) ಮತ್ತು ಕೊಲೊರಾಡೋ ಮತ್ತು ವಾಷಿಂಗ್ಟನ್ ಡಿ.ಸಿ ಸೇರಿದಂತೆ ಈಶಾನ್ಯದ ಇತರ ರಾಜ್ಯಗಳಲ್ಲಿ ಹ್ಯಾರಿಸ್ ಪ್ರಾಬಲ್ಯ ಸಾಧಿಸಿದ್ದಾರೆ.

ಇದನ್ನೂ ಓದಿ : ದೀಪಾವಳಿಯಂದು ದೇವಸ್ಥಾನದ ಮೇಲೆ ದಾಳಿ; ಕೆನಡಾದಲ್ಲಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....