Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

- Advertisement -
- Advertisement -

ಯುಎಸ್‌ (ಅಮೆರಿಕ) ನ ಮುಂದಿನ ಅಧ್ಯಕ್ಷರ ಆಯ್ಕೆಗೆ ಮಂಗಳವಾರ (ನ.5) ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಮತ್ತು ಹಾಲಿ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರು ಕಮಲಾ ಹ್ಯಾರಿಸ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ, ನಿರ್ಣಾಯಕ ಏಳು ರಾಜ್ಯಗಳ ಪೈಕಿ ಐದರಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಸಮರ ಏರ್ಪಟ್ಟಿದೆ. ಟ್ರಂಪ್ ಅವರು ಈಗಾಗಲೇ ಉತ್ತರ ಕೆರೊಲಿನಾವನ್ನು ಗೆದ್ದುಕೊಂಡಿದ್ದಾರೆ.

ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಶೇಕಡಾ 50.8, ಅಂದರೆ 25,71,258 ಮತಗಳನ್ನು ಗಳಿಸಿದರೆ, ಕಮಲಾ ಹ್ಯಾರಿಸ್ 24,36,454 ( ಶೇ. 48.1) ಮತಗಳನ್ನು ಗಳಿಸಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಗೆಲ್ಲಲು ಒಟ್ಟು 270 ಸ್ಥಾನಗಳ ಅಗತ್ಯವಿದ್ದು, ಪ್ರಸ್ತುತ ಕಮಲಾ ಹ್ಯಾರಿಸ್ ಎದುರು ಟ್ರಂಪ್ 230-210 ಅಂತರದ ಮುನ್ನಡೆಯಲ್ಲಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾರಿಸ್ ಅವರು ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಮೊದಲ ಮಹಿಳೆ ಎಂದು ಎನಿಸಿಕೊಳ್ಳಲು ಆಶಿಸಿದ್ದಾರೆ. ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಇತಿಹಾಸ ನಿರ್ಮಿಸುವ ಪ್ರಯತ್ನದಲ್ಲಿದ್ದಾರೆ.

ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನ? ( ಬೆಳಿಗ್ಗೆ 11 ಗಂಟೆ- IST)

ಡೊನಾಲ್ಡ್‌ ಟ್ರಂಪ್‌ : ಯೊಮಿಂಗ್‌ (3), ವೆಸ್ಟ್ ವರ್ಜೀನಿಯಾ (4), ಉತಾಹ್‌ (6), ಟೆಕ್ಸಾಸ್‌ (40), ಟೆನೆಸ್ಸೀ (11), ದಕ್ಷಿಣ ಕರೋಲಿನಾ (9), ಒಕ್ಲಾಹೊಮಾ (7), ಒಹಿಯೊ (17), ನೆಬ್ರಸ್ಕಾ (3), ಉತ್ತರ ಡಕೋಟ (3), ಮೊಂಟಾನ (4), ಮಿಸ್ಸಿಸ್ಸಿಪ್ಪಿ (6), ಮಿಸ್ಸೌರಿ (10), ಲೂಸಿಯಾನಾ (8), ಕೆಂಟುಕಿ (8), ಕಾನ್ಸಾಸ್‌ (6), ಇಂಡಿಯಾನಾ (11), ಲೋವಾ (6), ಫ್ಲೋರಿಡಾ (30), ಅರ್ಕಾನ್ಸಸ್‌ (6), ಅಲಬಾಮ (9).

ಕಮಲಾ ಹ್ಯಾರಿಸ್‌ : ಕೊಲೊರಾಡೊ (10), ಕನೆಕ್ಟಿಕಟ್ (7), ವಾಷಿಂಗ್ಟನ್‌ (3), ಡೆಲವೇರ್‌ (3), ಇಲಿನಿಯೊಸ್‌ (19), ಮಸ್ಸಾಚುಸೆಟ್ಸ್‌ (11), ಮೇರಿಲ್ಯಾಂಡ್‌ (10), ನ್ಯೂಜೆರ್ಸಿ (14), ನ್ಯೂಯಾರ್ಕ್‌ (28), ರೋಡ್ ಐಸ್‌ಲ್ಯಾಂಡ್ (4), ವೆರ್ಮಾಂಟ್‌ (3).

ನಿರೀಕ್ಷೆಯಂತೆ ಟ್ರಂಪ್ ಅವರು ‘ಕೆಂಪು ರಾಜ್ಯಗಳು’ ಎಂದು ಗುರುತಿಸಲ್ಪಡುವ ಸಾಂಪ್ರಾದಾಯಿಕ ಅಮೆರಿಕನ್ನರು ಹೆಚ್ಚಿರುವ ಕಡೆಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ. ಈ ರಾಜ್ಯಗಳ ಪೈಕಿ ಇಂಡಿಯಾನಾ, ಕೆಂಟುಕಿ ಮತ್ತು ವೆಸ್ಟ್ ವರ್ಜೀನಿಯಾದಲ್ಲಿ ಗೆಲುವು ಸಾಧಿಸಿದ್ದಾರೆ.

ಟೆಕ್ಸಾಸ್‌ನಲ್ಲಿ 40 ಸ್ಥಾನಗಳನ್ನು ಟ್ರಂಪ್ ಪಡೆದಿದ್ದಾರೆ. 2016 ರಿಂದಲೂ ಪ್ರತಿ ಚುನಾವಣೆಗಳಲ್ಲಿ ಅವರು ಇಲ್ಲಿ ಇಷ್ಟು ಸ್ಥಾನಗಳನ್ನು ಪಡೆಯುತ್ತಿದ್ದಾರೆ. ಓಹಿಯೋದಲ್ಲಿ 17 ಸ್ಥಾನಗಳನ್ನು ಪಡೆಯುವ ಮೂಲಕ ಟ್ರಂಪ್ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ.

ಮತ್ತೊಂದೆಡೆ, ಹ್ಯಾರಿಸ್ ಅವರು ಡೆಮಾಕ್ರಟಿಕ್ ಭದ್ರಕೋಟೆಗಳಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ, ನ್ಯೂಯಾರ್ಕ್‌ನಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ. ಅಲ್ಲಿ ಅವರು 28 ಸ್ಥಾನಗಳನ್ನು ಪಡೆದಿದ್ದಾರೆ. ‘ನೀಲಿ ರಾಜ್ಯಗಳು’ ಎಂದು ಗುರುತಿಸಲ್ಪಡುವ ಉದಾರವಾದಿ ಅಮೆರಿಕನ್ನರು ಹೆಚ್ಚಿರುವ ಪ್ರದೇಶಗಳಾದ ಇಲಿನಿಯೊಸ್‌ (19) ನ್ಯೂಜೆರ್ಸಿ(14) ಮತ್ತು ಕೊಲೊರಾಡೋ ಮತ್ತು ವಾಷಿಂಗ್ಟನ್ ಡಿ.ಸಿ ಸೇರಿದಂತೆ ಈಶಾನ್ಯದ ಇತರ ರಾಜ್ಯಗಳಲ್ಲಿ ಹ್ಯಾರಿಸ್ ಪ್ರಾಬಲ್ಯ ಸಾಧಿಸಿದ್ದಾರೆ.

ಇದನ್ನೂ ಓದಿ : ದೀಪಾವಳಿಯಂದು ದೇವಸ್ಥಾನದ ಮೇಲೆ ದಾಳಿ; ಕೆನಡಾದಲ್ಲಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...