Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ : ಟ್ರಂಪ್-ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ

- Advertisement -
- Advertisement -

ಯುಎಸ್‌ (ಅಮೆರಿಕ) ನ ಮುಂದಿನ ಅಧ್ಯಕ್ಷರ ಆಯ್ಕೆಗೆ ಮಂಗಳವಾರ (ನ.5) ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಮತ್ತು ಹಾಲಿ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರು ಕಮಲಾ ಹ್ಯಾರಿಸ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ, ನಿರ್ಣಾಯಕ ಏಳು ರಾಜ್ಯಗಳ ಪೈಕಿ ಐದರಲ್ಲಿ ಇಬ್ಬರ ನಡುವೆ ಜಿದ್ದಾಜಿದ್ದಿನ ಸಮರ ಏರ್ಪಟ್ಟಿದೆ. ಟ್ರಂಪ್ ಅವರು ಈಗಾಗಲೇ ಉತ್ತರ ಕೆರೊಲಿನಾವನ್ನು ಗೆದ್ದುಕೊಂಡಿದ್ದಾರೆ.

ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಶೇಕಡಾ 50.8, ಅಂದರೆ 25,71,258 ಮತಗಳನ್ನು ಗಳಿಸಿದರೆ, ಕಮಲಾ ಹ್ಯಾರಿಸ್ 24,36,454 ( ಶೇ. 48.1) ಮತಗಳನ್ನು ಗಳಿಸಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಗೆಲ್ಲಲು ಒಟ್ಟು 270 ಸ್ಥಾನಗಳ ಅಗತ್ಯವಿದ್ದು, ಪ್ರಸ್ತುತ ಕಮಲಾ ಹ್ಯಾರಿಸ್ ಎದುರು ಟ್ರಂಪ್ 230-210 ಅಂತರದ ಮುನ್ನಡೆಯಲ್ಲಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾರಿಸ್ ಅವರು ರಾಷ್ಟ್ರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಮೊದಲ ಮಹಿಳೆ ಎಂದು ಎನಿಸಿಕೊಳ್ಳಲು ಆಶಿಸಿದ್ದಾರೆ. ಟ್ರಂಪ್ ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಇತಿಹಾಸ ನಿರ್ಮಿಸುವ ಪ್ರಯತ್ನದಲ್ಲಿದ್ದಾರೆ.

ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನ? ( ಬೆಳಿಗ್ಗೆ 11 ಗಂಟೆ- IST)

ಡೊನಾಲ್ಡ್‌ ಟ್ರಂಪ್‌ : ಯೊಮಿಂಗ್‌ (3), ವೆಸ್ಟ್ ವರ್ಜೀನಿಯಾ (4), ಉತಾಹ್‌ (6), ಟೆಕ್ಸಾಸ್‌ (40), ಟೆನೆಸ್ಸೀ (11), ದಕ್ಷಿಣ ಕರೋಲಿನಾ (9), ಒಕ್ಲಾಹೊಮಾ (7), ಒಹಿಯೊ (17), ನೆಬ್ರಸ್ಕಾ (3), ಉತ್ತರ ಡಕೋಟ (3), ಮೊಂಟಾನ (4), ಮಿಸ್ಸಿಸ್ಸಿಪ್ಪಿ (6), ಮಿಸ್ಸೌರಿ (10), ಲೂಸಿಯಾನಾ (8), ಕೆಂಟುಕಿ (8), ಕಾನ್ಸಾಸ್‌ (6), ಇಂಡಿಯಾನಾ (11), ಲೋವಾ (6), ಫ್ಲೋರಿಡಾ (30), ಅರ್ಕಾನ್ಸಸ್‌ (6), ಅಲಬಾಮ (9).

ಕಮಲಾ ಹ್ಯಾರಿಸ್‌ : ಕೊಲೊರಾಡೊ (10), ಕನೆಕ್ಟಿಕಟ್ (7), ವಾಷಿಂಗ್ಟನ್‌ (3), ಡೆಲವೇರ್‌ (3), ಇಲಿನಿಯೊಸ್‌ (19), ಮಸ್ಸಾಚುಸೆಟ್ಸ್‌ (11), ಮೇರಿಲ್ಯಾಂಡ್‌ (10), ನ್ಯೂಜೆರ್ಸಿ (14), ನ್ಯೂಯಾರ್ಕ್‌ (28), ರೋಡ್ ಐಸ್‌ಲ್ಯಾಂಡ್ (4), ವೆರ್ಮಾಂಟ್‌ (3).

ನಿರೀಕ್ಷೆಯಂತೆ ಟ್ರಂಪ್ ಅವರು ‘ಕೆಂಪು ರಾಜ್ಯಗಳು’ ಎಂದು ಗುರುತಿಸಲ್ಪಡುವ ಸಾಂಪ್ರಾದಾಯಿಕ ಅಮೆರಿಕನ್ನರು ಹೆಚ್ಚಿರುವ ಕಡೆಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ. ಈ ರಾಜ್ಯಗಳ ಪೈಕಿ ಇಂಡಿಯಾನಾ, ಕೆಂಟುಕಿ ಮತ್ತು ವೆಸ್ಟ್ ವರ್ಜೀನಿಯಾದಲ್ಲಿ ಗೆಲುವು ಸಾಧಿಸಿದ್ದಾರೆ.

ಟೆಕ್ಸಾಸ್‌ನಲ್ಲಿ 40 ಸ್ಥಾನಗಳನ್ನು ಟ್ರಂಪ್ ಪಡೆದಿದ್ದಾರೆ. 2016 ರಿಂದಲೂ ಪ್ರತಿ ಚುನಾವಣೆಗಳಲ್ಲಿ ಅವರು ಇಲ್ಲಿ ಇಷ್ಟು ಸ್ಥಾನಗಳನ್ನು ಪಡೆಯುತ್ತಿದ್ದಾರೆ. ಓಹಿಯೋದಲ್ಲಿ 17 ಸ್ಥಾನಗಳನ್ನು ಪಡೆಯುವ ಮೂಲಕ ಟ್ರಂಪ್ ಹ್ಯಾರಿಸ್ ಅವರನ್ನು ಸೋಲಿಸಿದ್ದಾರೆ.

ಮತ್ತೊಂದೆಡೆ, ಹ್ಯಾರಿಸ್ ಅವರು ಡೆಮಾಕ್ರಟಿಕ್ ಭದ್ರಕೋಟೆಗಳಲ್ಲಿ ಯಶಸ್ಸನ್ನು ಕಂಡುಕೊಂಡಿದ್ದಾರೆ, ನ್ಯೂಯಾರ್ಕ್‌ನಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ. ಅಲ್ಲಿ ಅವರು 28 ಸ್ಥಾನಗಳನ್ನು ಪಡೆದಿದ್ದಾರೆ. ‘ನೀಲಿ ರಾಜ್ಯಗಳು’ ಎಂದು ಗುರುತಿಸಲ್ಪಡುವ ಉದಾರವಾದಿ ಅಮೆರಿಕನ್ನರು ಹೆಚ್ಚಿರುವ ಪ್ರದೇಶಗಳಾದ ಇಲಿನಿಯೊಸ್‌ (19) ನ್ಯೂಜೆರ್ಸಿ(14) ಮತ್ತು ಕೊಲೊರಾಡೋ ಮತ್ತು ವಾಷಿಂಗ್ಟನ್ ಡಿ.ಸಿ ಸೇರಿದಂತೆ ಈಶಾನ್ಯದ ಇತರ ರಾಜ್ಯಗಳಲ್ಲಿ ಹ್ಯಾರಿಸ್ ಪ್ರಾಬಲ್ಯ ಸಾಧಿಸಿದ್ದಾರೆ.

ಇದನ್ನೂ ಓದಿ : ದೀಪಾವಳಿಯಂದು ದೇವಸ್ಥಾನದ ಮೇಲೆ ದಾಳಿ; ಕೆನಡಾದಲ್ಲಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...