Homeಮುಖಪುಟಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

ಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

- Advertisement -
- Advertisement -

ಅಕ್ರಮ ಬಂದೂಕು ಖರೀದಿ ಮತ್ತು ತೆರಿಗೆ ವಂಚನೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತನ್ನ ಮಗ ಹಂಟರ್ ಬೈಡನ್‌ಗೆ ಕ್ಷಮಾದಾನ ನೀಡುವ ಅರ್ಜಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ (ಡಿ.1) ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಾವಧಿಯ ಕೊನೆಯಲ್ಲಿ ಬೈಡನ್‌ ತೆಗೆದುಕೊಂಡ ಈ ನಿಲುವು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಬೈಡನ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಆದರೆ, ಬೈಡನ್‌ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, “ನನ್ನ ಮಗನನ್ನು ‘ರಾಜಕೀಯವಾಗಿ ಗುರಿಪಡಿಸಲಾಗಿದೆ. ಅನ್ಯಾಯವಾಗಿ ಶಿಕ್ಷೆಗೆ ಒಳಪಡಿಸಲಾಗಿದೆ” ಎಂದಿದ್ದಾರೆ.

“ಇಂದು, ನಾನು ನನ್ನ ಮಗ ಹಂಟರ್‌ ಕ್ಷಮಾದಾನಕ್ಕೆ ಸಹಿ ಹಾಕಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ದಿನದಿಂದ ಇದುವರೆಗೆ ನ್ಯಾಯಾಂಗದ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದೇನೆ. ಆದೇ ರೀತಿ ನಡೆದುಕೊಂಡಿದ್ದೇನೆ. ಮಗನನ್ನು ಅನ್ಯಾಯವಾಗಿ ವಿಚಾರಣೆಗೆ ಒಳಪಡಿಸಿದಾಗಲೂ ನನ್ನ ಮಾತನ್ನು ಉಳಿಸಿದ್ದೇನೆ. ಸದ್ಯ ಆತನ (ಹಂಟರ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ” ಎಂದು ಶ್ವೇತಭವನ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬೈಡನ್ ತಿಳಿಸಿದ್ದಾರೆ.

ಬೈಡನ್ ಪುತ್ರ ಹಂಟರ್ ಒಬ್ಬ ಮಾದಕ ವ್ಯಸನಿಯಾಗಿದ್ದಾನೆ. ಆತನನ್ನು ಕ್ಷಮಿಸುವುದಾಗಲಿ ಅಥವಾ ಶಿಕ್ಷೆಯನ್ನು ಕಡಿಮೆ ಮಾಡುವುದಾಗಲಿ ಮಾಡುವುದಿಲ್ಲ ಎಂದು ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಿಪಬ್ಲಿಕನ್ ಪಕ್ಷದ ನಾಯಕರು ಪದೇ ಪದೇ ಹೇಳಿದ್ದರು.

ಇದೀಗ ಬೈಡನ್‌ ಮಗನ ಕ್ಷಮಾದಾನಕ್ಕೆ ಸಹಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಇದು ಕಾನೂನಿನ ದುರ್ಬಳಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ : ಅಕ್ರಮವಾಗಿ ಬಂದೂಕು ಖರೀದಿಸಿದ್ದ ಪ್ರಕರಣದಲ್ಲಿ ಹಂಟರ್‌ ಬೈಡನ್‌ ವಿರುದ್ಧ 2023ರ ಸೆಪ್ಟೆಂಬರ್‌ 15ರಂದು ದೋಷಾರೋಪ ಹೊರಿಸಲಾಗಿತ್ತು.

ಡೆಲವೇರ್‌ನಲ್ಲಿ ಕೋಲ್ಟ್‌ ರಿವಾಲ್ವರ್‌ ಖರೀದಿಸಿದ್ದ ಸಮಯದಲ್ಲಿ ತಾನು ಡ್ರಗ್ಸ್‌ ಬಳಸುತ್ತಿರಲಿಲ್ಲ ಎಂದು ಹಂಟರ್ ಬೈಡನ್‌ ಸುಳ್ಳು ಹೇಳಿಕೆ ನೀಡಿದ್ದರು ಎಂದು ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸುಳ್ಳು ಹೇಳಿಕೆಗಳ ಆಧಾರದಲ್ಲಿ ಅಕ್ರಮ ಬಂದೂಕು ಹೊಂದಿದ್ದರು ಎಂಬ ಮೂರನೇ ದೊಷಾರೋಪವೂ ಹಂಟರ್‌ ಬೈಡನ್‌ ಮೇಲೆ ಇತ್ತು.

ಅಕ್ರಮವಾಗಿ ಬಂದೂಕು ಖರೀದಿಸಿದ ಪ್ರಕರಣದಲ್ಲಿ ಡಿಸೆಂಬರ್ 12 ರಂದು ಶಿಕ್ಷೆ ವಿಧಿಸಲು ನಿರ್ಧರಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಫೆಡರಲ್ ತೆರಿಗೆ ವಂಚನೆ ಆರೋಪಗಳಿಗೆ ಅವರು ತಪ್ಪೊಪ್ಪಿಕೊಂಡ ಪ್ರತ್ಯೇಕ ಕ್ರಿಮಿನಲ್ ಪ್ರಕರಣದಲ್ಲಿ, ಇದೇ ಡಿಸೆಂಬರ್ 16ರಂದು ಶಿಕ್ಷೆ ಘೋಷಣೆಯಾಗಲಿತ್ತು. ಆದರೆ, ಬೈಡನ್ ಕ್ಷಮಾದಾನ ನೀಡುವ ಮೂಲಕ ಮಗನಿಗೆ ರಕ್ಷಣೆ ಒದಗಿಸಿದ್ದಾರೆ.

ಇದನ್ನೂ ಓದಿ : ‘ಹೆದ್ದಾರಿ ತಡೆದು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ..’; ಪ್ರತಿಭಟನಾ ನಿರತ ರೈತ ಮುಖಂಡರಿಗೆ ಸುಪ್ರೀಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...