Homeಮುಖಪುಟಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

ಕ್ರಿಮಿನಲ್‌ ಪ್ರಕರಣಗಳಲ್ಲಿ ಮಗನಿಗೆ ಕ್ಷಮಾದಾನ : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಡೆಗೆ ಭಾರೀ ಟೀಕೆ

- Advertisement -
- Advertisement -

ಅಕ್ರಮ ಬಂದೂಕು ಖರೀದಿ ಮತ್ತು ತೆರಿಗೆ ವಂಚನೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತನ್ನ ಮಗ ಹಂಟರ್ ಬೈಡನ್‌ಗೆ ಕ್ಷಮಾದಾನ ನೀಡುವ ಅರ್ಜಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ (ಡಿ.1) ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಾವಧಿಯ ಕೊನೆಯಲ್ಲಿ ಬೈಡನ್‌ ತೆಗೆದುಕೊಂಡ ಈ ನಿಲುವು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ. ಬೈಡನ್ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜನರು ಆರೋಪಿಸಿದ್ದಾರೆ.

ಆದರೆ, ಬೈಡನ್‌ ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದು, “ನನ್ನ ಮಗನನ್ನು ‘ರಾಜಕೀಯವಾಗಿ ಗುರಿಪಡಿಸಲಾಗಿದೆ. ಅನ್ಯಾಯವಾಗಿ ಶಿಕ್ಷೆಗೆ ಒಳಪಡಿಸಲಾಗಿದೆ” ಎಂದಿದ್ದಾರೆ.

“ಇಂದು, ನಾನು ನನ್ನ ಮಗ ಹಂಟರ್‌ ಕ್ಷಮಾದಾನಕ್ಕೆ ಸಹಿ ಹಾಕಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ದಿನದಿಂದ ಇದುವರೆಗೆ ನ್ಯಾಯಾಂಗದ ನಿರ್ಧಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದೇನೆ. ಆದೇ ರೀತಿ ನಡೆದುಕೊಂಡಿದ್ದೇನೆ. ಮಗನನ್ನು ಅನ್ಯಾಯವಾಗಿ ವಿಚಾರಣೆಗೆ ಒಳಪಡಿಸಿದಾಗಲೂ ನನ್ನ ಮಾತನ್ನು ಉಳಿಸಿದ್ದೇನೆ. ಸದ್ಯ ಆತನ (ಹಂಟರ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ” ಎಂದು ಶ್ವೇತಭವನ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬೈಡನ್ ತಿಳಿಸಿದ್ದಾರೆ.

ಬೈಡನ್ ಪುತ್ರ ಹಂಟರ್ ಒಬ್ಬ ಮಾದಕ ವ್ಯಸನಿಯಾಗಿದ್ದಾನೆ. ಆತನನ್ನು ಕ್ಷಮಿಸುವುದಾಗಲಿ ಅಥವಾ ಶಿಕ್ಷೆಯನ್ನು ಕಡಿಮೆ ಮಾಡುವುದಾಗಲಿ ಮಾಡುವುದಿಲ್ಲ ಎಂದು ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ರಿಪಬ್ಲಿಕನ್ ಪಕ್ಷದ ನಾಯಕರು ಪದೇ ಪದೇ ಹೇಳಿದ್ದರು.

ಇದೀಗ ಬೈಡನ್‌ ಮಗನ ಕ್ಷಮಾದಾನಕ್ಕೆ ಸಹಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಇದು ಕಾನೂನಿನ ದುರ್ಬಳಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ” ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ : ಅಕ್ರಮವಾಗಿ ಬಂದೂಕು ಖರೀದಿಸಿದ್ದ ಪ್ರಕರಣದಲ್ಲಿ ಹಂಟರ್‌ ಬೈಡನ್‌ ವಿರುದ್ಧ 2023ರ ಸೆಪ್ಟೆಂಬರ್‌ 15ರಂದು ದೋಷಾರೋಪ ಹೊರಿಸಲಾಗಿತ್ತು.

ಡೆಲವೇರ್‌ನಲ್ಲಿ ಕೋಲ್ಟ್‌ ರಿವಾಲ್ವರ್‌ ಖರೀದಿಸಿದ್ದ ಸಮಯದಲ್ಲಿ ತಾನು ಡ್ರಗ್ಸ್‌ ಬಳಸುತ್ತಿರಲಿಲ್ಲ ಎಂದು ಹಂಟರ್ ಬೈಡನ್‌ ಸುಳ್ಳು ಹೇಳಿಕೆ ನೀಡಿದ್ದರು ಎಂದು ಎರಡನೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸುಳ್ಳು ಹೇಳಿಕೆಗಳ ಆಧಾರದಲ್ಲಿ ಅಕ್ರಮ ಬಂದೂಕು ಹೊಂದಿದ್ದರು ಎಂಬ ಮೂರನೇ ದೊಷಾರೋಪವೂ ಹಂಟರ್‌ ಬೈಡನ್‌ ಮೇಲೆ ಇತ್ತು.

ಅಕ್ರಮವಾಗಿ ಬಂದೂಕು ಖರೀದಿಸಿದ ಪ್ರಕರಣದಲ್ಲಿ ಡಿಸೆಂಬರ್ 12 ರಂದು ಶಿಕ್ಷೆ ವಿಧಿಸಲು ನಿರ್ಧರಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಫೆಡರಲ್ ತೆರಿಗೆ ವಂಚನೆ ಆರೋಪಗಳಿಗೆ ಅವರು ತಪ್ಪೊಪ್ಪಿಕೊಂಡ ಪ್ರತ್ಯೇಕ ಕ್ರಿಮಿನಲ್ ಪ್ರಕರಣದಲ್ಲಿ, ಇದೇ ಡಿಸೆಂಬರ್ 16ರಂದು ಶಿಕ್ಷೆ ಘೋಷಣೆಯಾಗಲಿತ್ತು. ಆದರೆ, ಬೈಡನ್ ಕ್ಷಮಾದಾನ ನೀಡುವ ಮೂಲಕ ಮಗನಿಗೆ ರಕ್ಷಣೆ ಒದಗಿಸಿದ್ದಾರೆ.

ಇದನ್ನೂ ಓದಿ : ‘ಹೆದ್ದಾರಿ ತಡೆದು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ..’; ಪ್ರತಿಭಟನಾ ನಿರತ ರೈತ ಮುಖಂಡರಿಗೆ ಸುಪ್ರೀಂ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...