Homeಮುಖಪುಟಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಭೇಟಿಯಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಗಾಂಧಿ ತತ್ವದ ಅಗತ್ಯತೆಗಳನ್ನು ಸ್ಮರಿಸಿದ್ದಾರೆ.

“ಅಹಿಂಸೆ, ಸಹಿಷ್ಣುತೆ, ವೈವಿಧ್ಯತೆ” ಕುರಿತು ಮಾತನಾಡಿರುವ ಬೈಡನ್‌, “ಎರಡೂ ದೇಶಗಳು ಜೊತೆಯಾಗಿ ನಡೆದು ಗಟ್ಟಿಯಾಗಬೇಕಿದೆ” ಎಂದು ತಿಳಿಸಿದ್ದಾರೆ.

ಬೈಡನ್‌ ಅವರ ಹೇಳಿಕೆಯಿಂದಾಗಿ ಮೋದಿಯವರೊಂದಿಗೆ ಅಮೆರಿಕ ದೇಶವು ಪ್ರಜಾಪ್ರಭುತ್ವದ ಅಗತ್ಯತೆ ಕುರಿತು ಎರಡನೇ ಬಾರಿಗೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದಂತಾಗಿದೆ. “ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಸಂಸ್ಥೆಗಳನ್ನು ರಕ್ಷಿಸುವುದು ಅತ್ಯಗತ್ಯ” ಎಂದು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಹೇಳಿದ್ದರು.

ಭಾರತದಲ್ಲಿ ಮುಸ್ಲಿಂ ವಿರೋಧಿ ಧೋರಣೆಯ ಏರಿಕೆ ಮತ್ತು ಭಿನ್ನಾಭಿಪ್ರಾಯಗಳ ಮೇಲೆ ಕಡಿವಾಣ ಹಾಕುವ ಪ್ರವೃತ್ತಿಯ ಹಿನ್ನೆಲೆಯಲ್ಲಿ ವಿದೇಶಗಳು ತೋರುತ್ತಿರುವ ಕಾಳಜಿಯನ್ನು ಇಂತಹ ಬೆಳವಣಿಗೆಗಳು ತೋರುತ್ತವೆ.

“ಐತಿಹಾಸಿಕ ಭೇಟಿಯಲ್ಲಿ ಮಾನವ ಹಕ್ಕುಗಳ ಬಗ್ಗೆ ಮೋದಿಯವರಿಗೆ ಕಮಲಾ ಹ್ಯಾರೀಸ್‌ ಒತ್ತಿ ಹೇಳಿದರು” ಎಂದು ‘ಲಾಸ್‌ ಏಂಜೆಲ್ಸ್‌ ಟೈಮ್ಸ್‌’ನ ವರದಿಯ ತಲೆಬರಹವಿದೆ.

ಅಮೆರಿಕದ ನಾಯಕತ್ವ ಬದಲಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಬೈಡನ್‌ ಅವರು ಭಾರತದ ಪ್ರಧಾನಿ ಮೋದಿಯವರನ್ನು ವೈಟ್‌ ಹೌಸ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಭೇಟಿಯಾದರು. ಎರಡು ವರ್ಷಗಳ ಬಳಿಕ ಮೋದಿ ಅಮೆರಿಕಕ್ಕೆ ಭೇಟಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಿನ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರನ್ನು ಹೌಸ್‌ ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಶುಕ್ರವಾರದ ಭೇಟಿಯಲ್ಲಿ ಎರಡೂ ದೇಶದ ನಾಯಕರು ಒಟ್ಟಿಗೆ ಮುನ್ನಡೆಯುವ ಮಾತುಕತೆ ನಡೆಸಿದರು.

“ಎರಡು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಿಗೆ ಸಾಗಬೇಕಿದೆ. ಇದು ಇಡೀ ಜಗತ್ತಿಗೆ ಸಹಕಾರಿಯಾಗಲಿದೆ” ಎಂದು ಅವರು ಹೇಳಿದ್ದಾರೆ. ಕೋವಿಡ್‌‌ ಬಿಕ್ಕಟ್ಟನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಒಂದಾಗಿ ಎದುರಿಸುವ ಕುರಿತು ಮಾತನಾಡಿದರು.

ಕೋವಿಡ್‌-19, ಹವಾಮಾನ್ಯ ವೈಪರಿತ್ಯ, ಇಂಡೋ-ಫೆಸಿಪಿಕ್‌ ಇತ್ಯಾದಿ ವಿಷಯಗಳ ಕುರಿತು ಮಾತನಾಡಿದರು.

“ನಮ್ಮ ಪಾಲುದಾರಿಕೆ ನಾವು ಮಾಡಬೇಕೆಂದಿರುವುದಕ್ಕಿಂತ ಮಹತ್ವದ್ದಾಗಿದೆ. ನಾವು ಯಾರೆಂಬುದರ ಕುರಿತಾದ್ದಾಗಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ವೈವಿಧ್ಯತೆಯನ್ನು ಕಾಪಾಡುವ ಹೊಣೆಗಾರಿಯದ್ದಾಗಿದೆ. ಪ್ರತಿದಿನವೂ ಅಮೆರಿಕವನ್ನು ಬಲಿಷ್ಠ ಮಾಡುತ್ತಿರುವ 40 ಲಕ್ಷ ಅನಿವಾಸಿ ಭಾರತೀಯರೊಂದಿಗಿನ ಕೌಟುಂಬಿಕ ಬಾಂಧವ್ಯವಾಗಿದೆ” ಎಂದಿದ್ದಾರೆ.

ಸೌಹಾರ್ದತೆಯ ಅಗತ್ಯತೆಯ ಕುರಿತು ಹೇಳುತ್ತಾ ಮುಂದಿನ ವಾರ ಬರುವ ಗಾಂಧಿ ಜಯಂತಿಯನ್ನು ಬೈಡನ್‌ ಉಲ್ಲೇಖಿಸುತ್ತಾರೆ. “ಮುಂದಿನ ವಾರ ಇಡೀ ಜಗತ್ತು ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಗಾಂಧೀಜಿಯರ ಸಂದೇಶಗಳಾದ ಅಹಿಂಸೆ, ಗೌರವ, ಸಹಿಷ್ಣುತೆಯನ್ನು ನೆನೆಯುವುದು ಇಂದೆಂದಿಗಿಂತಲೂ ಇಂದು ಮುಖ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...