Homeಮುಖಪುಟಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಭೇಟಿಯಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಗಾಂಧಿ ತತ್ವದ ಅಗತ್ಯತೆಗಳನ್ನು ಸ್ಮರಿಸಿದ್ದಾರೆ.

“ಅಹಿಂಸೆ, ಸಹಿಷ್ಣುತೆ, ವೈವಿಧ್ಯತೆ” ಕುರಿತು ಮಾತನಾಡಿರುವ ಬೈಡನ್‌, “ಎರಡೂ ದೇಶಗಳು ಜೊತೆಯಾಗಿ ನಡೆದು ಗಟ್ಟಿಯಾಗಬೇಕಿದೆ” ಎಂದು ತಿಳಿಸಿದ್ದಾರೆ.

ಬೈಡನ್‌ ಅವರ ಹೇಳಿಕೆಯಿಂದಾಗಿ ಮೋದಿಯವರೊಂದಿಗೆ ಅಮೆರಿಕ ದೇಶವು ಪ್ರಜಾಪ್ರಭುತ್ವದ ಅಗತ್ಯತೆ ಕುರಿತು ಎರಡನೇ ಬಾರಿಗೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದಂತಾಗಿದೆ. “ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಸಂಸ್ಥೆಗಳನ್ನು ರಕ್ಷಿಸುವುದು ಅತ್ಯಗತ್ಯ” ಎಂದು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಹೇಳಿದ್ದರು.

ಭಾರತದಲ್ಲಿ ಮುಸ್ಲಿಂ ವಿರೋಧಿ ಧೋರಣೆಯ ಏರಿಕೆ ಮತ್ತು ಭಿನ್ನಾಭಿಪ್ರಾಯಗಳ ಮೇಲೆ ಕಡಿವಾಣ ಹಾಕುವ ಪ್ರವೃತ್ತಿಯ ಹಿನ್ನೆಲೆಯಲ್ಲಿ ವಿದೇಶಗಳು ತೋರುತ್ತಿರುವ ಕಾಳಜಿಯನ್ನು ಇಂತಹ ಬೆಳವಣಿಗೆಗಳು ತೋರುತ್ತವೆ.

“ಐತಿಹಾಸಿಕ ಭೇಟಿಯಲ್ಲಿ ಮಾನವ ಹಕ್ಕುಗಳ ಬಗ್ಗೆ ಮೋದಿಯವರಿಗೆ ಕಮಲಾ ಹ್ಯಾರೀಸ್‌ ಒತ್ತಿ ಹೇಳಿದರು” ಎಂದು ‘ಲಾಸ್‌ ಏಂಜೆಲ್ಸ್‌ ಟೈಮ್ಸ್‌’ನ ವರದಿಯ ತಲೆಬರಹವಿದೆ.

ಅಮೆರಿಕದ ನಾಯಕತ್ವ ಬದಲಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಬೈಡನ್‌ ಅವರು ಭಾರತದ ಪ್ರಧಾನಿ ಮೋದಿಯವರನ್ನು ವೈಟ್‌ ಹೌಸ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಭೇಟಿಯಾದರು. ಎರಡು ವರ್ಷಗಳ ಬಳಿಕ ಮೋದಿ ಅಮೆರಿಕಕ್ಕೆ ಭೇಟಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಿನ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರನ್ನು ಹೌಸ್‌ ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಶುಕ್ರವಾರದ ಭೇಟಿಯಲ್ಲಿ ಎರಡೂ ದೇಶದ ನಾಯಕರು ಒಟ್ಟಿಗೆ ಮುನ್ನಡೆಯುವ ಮಾತುಕತೆ ನಡೆಸಿದರು.

“ಎರಡು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಿಗೆ ಸಾಗಬೇಕಿದೆ. ಇದು ಇಡೀ ಜಗತ್ತಿಗೆ ಸಹಕಾರಿಯಾಗಲಿದೆ” ಎಂದು ಅವರು ಹೇಳಿದ್ದಾರೆ. ಕೋವಿಡ್‌‌ ಬಿಕ್ಕಟ್ಟನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಒಂದಾಗಿ ಎದುರಿಸುವ ಕುರಿತು ಮಾತನಾಡಿದರು.

ಕೋವಿಡ್‌-19, ಹವಾಮಾನ್ಯ ವೈಪರಿತ್ಯ, ಇಂಡೋ-ಫೆಸಿಪಿಕ್‌ ಇತ್ಯಾದಿ ವಿಷಯಗಳ ಕುರಿತು ಮಾತನಾಡಿದರು.

“ನಮ್ಮ ಪಾಲುದಾರಿಕೆ ನಾವು ಮಾಡಬೇಕೆಂದಿರುವುದಕ್ಕಿಂತ ಮಹತ್ವದ್ದಾಗಿದೆ. ನಾವು ಯಾರೆಂಬುದರ ಕುರಿತಾದ್ದಾಗಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ವೈವಿಧ್ಯತೆಯನ್ನು ಕಾಪಾಡುವ ಹೊಣೆಗಾರಿಯದ್ದಾಗಿದೆ. ಪ್ರತಿದಿನವೂ ಅಮೆರಿಕವನ್ನು ಬಲಿಷ್ಠ ಮಾಡುತ್ತಿರುವ 40 ಲಕ್ಷ ಅನಿವಾಸಿ ಭಾರತೀಯರೊಂದಿಗಿನ ಕೌಟುಂಬಿಕ ಬಾಂಧವ್ಯವಾಗಿದೆ” ಎಂದಿದ್ದಾರೆ.

ಸೌಹಾರ್ದತೆಯ ಅಗತ್ಯತೆಯ ಕುರಿತು ಹೇಳುತ್ತಾ ಮುಂದಿನ ವಾರ ಬರುವ ಗಾಂಧಿ ಜಯಂತಿಯನ್ನು ಬೈಡನ್‌ ಉಲ್ಲೇಖಿಸುತ್ತಾರೆ. “ಮುಂದಿನ ವಾರ ಇಡೀ ಜಗತ್ತು ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಗಾಂಧೀಜಿಯರ ಸಂದೇಶಗಳಾದ ಅಹಿಂಸೆ, ಗೌರವ, ಸಹಿಷ್ಣುತೆಯನ್ನು ನೆನೆಯುವುದು ಇಂದೆಂದಿಗಿಂತಲೂ ಇಂದು ಮುಖ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...