Homeಮುಖಪುಟಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಭೇಟಿಯಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಗಾಂಧಿ ತತ್ವದ ಅಗತ್ಯತೆಗಳನ್ನು ಸ್ಮರಿಸಿದ್ದಾರೆ.

“ಅಹಿಂಸೆ, ಸಹಿಷ್ಣುತೆ, ವೈವಿಧ್ಯತೆ” ಕುರಿತು ಮಾತನಾಡಿರುವ ಬೈಡನ್‌, “ಎರಡೂ ದೇಶಗಳು ಜೊತೆಯಾಗಿ ನಡೆದು ಗಟ್ಟಿಯಾಗಬೇಕಿದೆ” ಎಂದು ತಿಳಿಸಿದ್ದಾರೆ.

ಬೈಡನ್‌ ಅವರ ಹೇಳಿಕೆಯಿಂದಾಗಿ ಮೋದಿಯವರೊಂದಿಗೆ ಅಮೆರಿಕ ದೇಶವು ಪ್ರಜಾಪ್ರಭುತ್ವದ ಅಗತ್ಯತೆ ಕುರಿತು ಎರಡನೇ ಬಾರಿಗೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದಂತಾಗಿದೆ. “ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಸಂಸ್ಥೆಗಳನ್ನು ರಕ್ಷಿಸುವುದು ಅತ್ಯಗತ್ಯ” ಎಂದು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಹೇಳಿದ್ದರು.

ಭಾರತದಲ್ಲಿ ಮುಸ್ಲಿಂ ವಿರೋಧಿ ಧೋರಣೆಯ ಏರಿಕೆ ಮತ್ತು ಭಿನ್ನಾಭಿಪ್ರಾಯಗಳ ಮೇಲೆ ಕಡಿವಾಣ ಹಾಕುವ ಪ್ರವೃತ್ತಿಯ ಹಿನ್ನೆಲೆಯಲ್ಲಿ ವಿದೇಶಗಳು ತೋರುತ್ತಿರುವ ಕಾಳಜಿಯನ್ನು ಇಂತಹ ಬೆಳವಣಿಗೆಗಳು ತೋರುತ್ತವೆ.

“ಐತಿಹಾಸಿಕ ಭೇಟಿಯಲ್ಲಿ ಮಾನವ ಹಕ್ಕುಗಳ ಬಗ್ಗೆ ಮೋದಿಯವರಿಗೆ ಕಮಲಾ ಹ್ಯಾರೀಸ್‌ ಒತ್ತಿ ಹೇಳಿದರು” ಎಂದು ‘ಲಾಸ್‌ ಏಂಜೆಲ್ಸ್‌ ಟೈಮ್ಸ್‌’ನ ವರದಿಯ ತಲೆಬರಹವಿದೆ.

ಅಮೆರಿಕದ ನಾಯಕತ್ವ ಬದಲಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಬೈಡನ್‌ ಅವರು ಭಾರತದ ಪ್ರಧಾನಿ ಮೋದಿಯವರನ್ನು ವೈಟ್‌ ಹೌಸ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಭೇಟಿಯಾದರು. ಎರಡು ವರ್ಷಗಳ ಬಳಿಕ ಮೋದಿ ಅಮೆರಿಕಕ್ಕೆ ಭೇಟಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಿನ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರನ್ನು ಹೌಸ್‌ ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಶುಕ್ರವಾರದ ಭೇಟಿಯಲ್ಲಿ ಎರಡೂ ದೇಶದ ನಾಯಕರು ಒಟ್ಟಿಗೆ ಮುನ್ನಡೆಯುವ ಮಾತುಕತೆ ನಡೆಸಿದರು.

“ಎರಡು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಿಗೆ ಸಾಗಬೇಕಿದೆ. ಇದು ಇಡೀ ಜಗತ್ತಿಗೆ ಸಹಕಾರಿಯಾಗಲಿದೆ” ಎಂದು ಅವರು ಹೇಳಿದ್ದಾರೆ. ಕೋವಿಡ್‌‌ ಬಿಕ್ಕಟ್ಟನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಒಂದಾಗಿ ಎದುರಿಸುವ ಕುರಿತು ಮಾತನಾಡಿದರು.

ಕೋವಿಡ್‌-19, ಹವಾಮಾನ್ಯ ವೈಪರಿತ್ಯ, ಇಂಡೋ-ಫೆಸಿಪಿಕ್‌ ಇತ್ಯಾದಿ ವಿಷಯಗಳ ಕುರಿತು ಮಾತನಾಡಿದರು.

“ನಮ್ಮ ಪಾಲುದಾರಿಕೆ ನಾವು ಮಾಡಬೇಕೆಂದಿರುವುದಕ್ಕಿಂತ ಮಹತ್ವದ್ದಾಗಿದೆ. ನಾವು ಯಾರೆಂಬುದರ ಕುರಿತಾದ್ದಾಗಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ವೈವಿಧ್ಯತೆಯನ್ನು ಕಾಪಾಡುವ ಹೊಣೆಗಾರಿಯದ್ದಾಗಿದೆ. ಪ್ರತಿದಿನವೂ ಅಮೆರಿಕವನ್ನು ಬಲಿಷ್ಠ ಮಾಡುತ್ತಿರುವ 40 ಲಕ್ಷ ಅನಿವಾಸಿ ಭಾರತೀಯರೊಂದಿಗಿನ ಕೌಟುಂಬಿಕ ಬಾಂಧವ್ಯವಾಗಿದೆ” ಎಂದಿದ್ದಾರೆ.

ಸೌಹಾರ್ದತೆಯ ಅಗತ್ಯತೆಯ ಕುರಿತು ಹೇಳುತ್ತಾ ಮುಂದಿನ ವಾರ ಬರುವ ಗಾಂಧಿ ಜಯಂತಿಯನ್ನು ಬೈಡನ್‌ ಉಲ್ಲೇಖಿಸುತ್ತಾರೆ. “ಮುಂದಿನ ವಾರ ಇಡೀ ಜಗತ್ತು ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಗಾಂಧೀಜಿಯರ ಸಂದೇಶಗಳಾದ ಅಹಿಂಸೆ, ಗೌರವ, ಸಹಿಷ್ಣುತೆಯನ್ನು ನೆನೆಯುವುದು ಇಂದೆಂದಿಗಿಂತಲೂ ಇಂದು ಮುಖ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...