Homeಮುಖಪುಟಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

ಮೋದಿ ಎದುರು ಗಾಂಧಿತತ್ವಗಳ ಅಗತ್ಯತೆ ಸ್ಮರಿಸಿದ ಅಮೆರಿಕ ಅಧ್ಯಕ್ಷ ಬೈಡನ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಭೇಟಿಯಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಗಾಂಧಿ ತತ್ವದ ಅಗತ್ಯತೆಗಳನ್ನು ಸ್ಮರಿಸಿದ್ದಾರೆ.

“ಅಹಿಂಸೆ, ಸಹಿಷ್ಣುತೆ, ವೈವಿಧ್ಯತೆ” ಕುರಿತು ಮಾತನಾಡಿರುವ ಬೈಡನ್‌, “ಎರಡೂ ದೇಶಗಳು ಜೊತೆಯಾಗಿ ನಡೆದು ಗಟ್ಟಿಯಾಗಬೇಕಿದೆ” ಎಂದು ತಿಳಿಸಿದ್ದಾರೆ.

ಬೈಡನ್‌ ಅವರ ಹೇಳಿಕೆಯಿಂದಾಗಿ ಮೋದಿಯವರೊಂದಿಗೆ ಅಮೆರಿಕ ದೇಶವು ಪ್ರಜಾಪ್ರಭುತ್ವದ ಅಗತ್ಯತೆ ಕುರಿತು ಎರಡನೇ ಬಾರಿಗೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದಂತಾಗಿದೆ. “ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವ ತತ್ವಗಳನ್ನು ಮತ್ತು ಸಂಸ್ಥೆಗಳನ್ನು ರಕ್ಷಿಸುವುದು ಅತ್ಯಗತ್ಯ” ಎಂದು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಹೇಳಿದ್ದರು.

ಭಾರತದಲ್ಲಿ ಮುಸ್ಲಿಂ ವಿರೋಧಿ ಧೋರಣೆಯ ಏರಿಕೆ ಮತ್ತು ಭಿನ್ನಾಭಿಪ್ರಾಯಗಳ ಮೇಲೆ ಕಡಿವಾಣ ಹಾಕುವ ಪ್ರವೃತ್ತಿಯ ಹಿನ್ನೆಲೆಯಲ್ಲಿ ವಿದೇಶಗಳು ತೋರುತ್ತಿರುವ ಕಾಳಜಿಯನ್ನು ಇಂತಹ ಬೆಳವಣಿಗೆಗಳು ತೋರುತ್ತವೆ.

“ಐತಿಹಾಸಿಕ ಭೇಟಿಯಲ್ಲಿ ಮಾನವ ಹಕ್ಕುಗಳ ಬಗ್ಗೆ ಮೋದಿಯವರಿಗೆ ಕಮಲಾ ಹ್ಯಾರೀಸ್‌ ಒತ್ತಿ ಹೇಳಿದರು” ಎಂದು ‘ಲಾಸ್‌ ಏಂಜೆಲ್ಸ್‌ ಟೈಮ್ಸ್‌’ನ ವರದಿಯ ತಲೆಬರಹವಿದೆ.

ಅಮೆರಿಕದ ನಾಯಕತ್ವ ಬದಲಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಬೈಡನ್‌ ಅವರು ಭಾರತದ ಪ್ರಧಾನಿ ಮೋದಿಯವರನ್ನು ವೈಟ್‌ ಹೌಸ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಭೇಟಿಯಾದರು. ಎರಡು ವರ್ಷಗಳ ಬಳಿಕ ಮೋದಿ ಅಮೆರಿಕಕ್ಕೆ ಭೇಟಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ಅಂದಿನ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ ಅವರನ್ನು ಹೌಸ್‌ ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಶುಕ್ರವಾರದ ಭೇಟಿಯಲ್ಲಿ ಎರಡೂ ದೇಶದ ನಾಯಕರು ಒಟ್ಟಿಗೆ ಮುನ್ನಡೆಯುವ ಮಾತುಕತೆ ನಡೆಸಿದರು.

“ಎರಡು ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಿಗೆ ಸಾಗಬೇಕಿದೆ. ಇದು ಇಡೀ ಜಗತ್ತಿಗೆ ಸಹಕಾರಿಯಾಗಲಿದೆ” ಎಂದು ಅವರು ಹೇಳಿದ್ದಾರೆ. ಕೋವಿಡ್‌‌ ಬಿಕ್ಕಟ್ಟನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಒಂದಾಗಿ ಎದುರಿಸುವ ಕುರಿತು ಮಾತನಾಡಿದರು.

ಕೋವಿಡ್‌-19, ಹವಾಮಾನ್ಯ ವೈಪರಿತ್ಯ, ಇಂಡೋ-ಫೆಸಿಪಿಕ್‌ ಇತ್ಯಾದಿ ವಿಷಯಗಳ ಕುರಿತು ಮಾತನಾಡಿದರು.

“ನಮ್ಮ ಪಾಲುದಾರಿಕೆ ನಾವು ಮಾಡಬೇಕೆಂದಿರುವುದಕ್ಕಿಂತ ಮಹತ್ವದ್ದಾಗಿದೆ. ನಾವು ಯಾರೆಂಬುದರ ಕುರಿತಾದ್ದಾಗಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ವೈವಿಧ್ಯತೆಯನ್ನು ಕಾಪಾಡುವ ಹೊಣೆಗಾರಿಯದ್ದಾಗಿದೆ. ಪ್ರತಿದಿನವೂ ಅಮೆರಿಕವನ್ನು ಬಲಿಷ್ಠ ಮಾಡುತ್ತಿರುವ 40 ಲಕ್ಷ ಅನಿವಾಸಿ ಭಾರತೀಯರೊಂದಿಗಿನ ಕೌಟುಂಬಿಕ ಬಾಂಧವ್ಯವಾಗಿದೆ” ಎಂದಿದ್ದಾರೆ.

ಸೌಹಾರ್ದತೆಯ ಅಗತ್ಯತೆಯ ಕುರಿತು ಹೇಳುತ್ತಾ ಮುಂದಿನ ವಾರ ಬರುವ ಗಾಂಧಿ ಜಯಂತಿಯನ್ನು ಬೈಡನ್‌ ಉಲ್ಲೇಖಿಸುತ್ತಾರೆ. “ಮುಂದಿನ ವಾರ ಇಡೀ ಜಗತ್ತು ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಗಾಂಧೀಜಿಯರ ಸಂದೇಶಗಳಾದ ಅಹಿಂಸೆ, ಗೌರವ, ಸಹಿಷ್ಣುತೆಯನ್ನು ನೆನೆಯುವುದು ಇಂದೆಂದಿಗಿಂತಲೂ ಇಂದು ಮುಖ್ಯವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...