Homeಅಂತರಾಷ್ಟ್ರೀಯಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

- Advertisement -
- Advertisement -

ವಿವಿಧ ಕೆಲಸಗಳ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ಪ್ರಕಟಿಸುವುದಾಗಿ ಟ್ರಂಪ್ ಫಾಕ್ಸ್ ನ್ಯೂಸ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಯೋಜನೆಯು ಈಗಾಗಲೇ ಅಮೇರಿಕಾದಲ್ಲಿರುವ ಕೆಲವು ಕಾರ್ಮಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಆಧಾರಿತ ವೀಸಾಗಳನ್ನು ನಿರ್ಬಂಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ಯೋಜನೆಯಿಂದ ತಂತ್ರಜ್ಞಾನ, ಹಣಕಾಸು ಮತ್ತು ಆತಿಥ್ಯ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಬಯಸುವ ಸುಮಾರು 240,000 ಜನರ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಲಾಗಿದೆ.

“ಕೆಲವು ಸಂದರ್ಭಗಳಲ್ಲಿ ಇಂತಹ ಹೊರಗಿಡುವಿಕೆ ಅವಶ್ಯಕವಾಗಿದ್ದು, ದೊಡ್ಡ ಉದ್ಯಮಗಳಿಗೆ ಇದು ಅಗತ್ಯವಾಗಿದೆ, ಅಲ್ಲಿವ ಕೆಲವು ಜನರು ದೀರ್ಘಕಾಲದದಿಂದ ಬರುತ್ತಿದ್ದಾರೆ” ಎಂದು ಟ್ರಂಪ್ ಹೇಳಿದರು.

ಒಂದು ಸಾಧ್ಯತೆಯ ಪ್ರಕಾರ ಎಚ್ -1 ಬಿ ವೀಸಾ ವಿಭಾಗಗಳಲ್ಲಿ 180 ದಿನಗಳವರೆಗೆ ಜನರು ಅಮರಿಕಾಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಜೂನ್ 12 ರಂದು ವರದಿ ಮಾಡಿದೆ. ಆ ವೀಸಾಗಳನ್ನು ಮಂಜೂರು ಮಾಡಿದೆ. ಆದರೆ ದೇಶದ ಹೊರಗೆ ಉಳಿದಿರುವ ಕಾರ್ಮಿಕರಿಗೆ ಆದೇಶದ ಅವಧಿ ಮುಗಿಯುವವರೆಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಈ ಕ್ರಮದಿಂದಾಗಿ ನೂರಾರು ಕಂಪನಿಗಳು ಹಾಗೂ ಸಾವಿರಾರು ಜನರ ಮೇಲೆ ಪರಿಣಾಮ ಬೀರುತ್ತದೆ, 2019 ರ ಆರ್ಥಿಕ ವರ್ಷದಲ್ಲಿ, ಕಂಪನಿಯೊಂದಿಗೆ ಆರಂಭಿಕ ಉದ್ಯೋಗವನ್ನು ಪ್ರಾರಂಭಿಸುವ ಸುಮಾರು 133,000 ಕಾರ್ಮಿಕರಿಗೆ ಎಚ್ -1 ಬಿ ವೀಸಾವನ್ನು ನೀಡಲಾಗಿತ್ತು. ಆರಂಭಿಕ ಅರ್ಜಿಗಳಲ್ಲಿ 12,000 ಕ್ಕೂ ಹೆಚ್ಚು ಜನರಿಗೆ ಎಲ್ -1 ವೀಸಾಗಳನ್ನು ನೀಡಲಾಗಿತ್ತು ಅಲ್ಲದೆ 98,000 ಕ್ಕೂ ಹೆಚ್ಚು ಜನರಿಗೆ ಎಚ್ -2 ಬಿ ವೀಸಾಗಳನ್ನು ನೀಡಲಾಗಿತ್ತು.

ಟ್ರಂಪ್ ಹೇಳಿರುವ ಹೊರಗಿಡುವಿಕೆಯನ್ನು ಹೊರತುಪಡಿಸಿದರೂ, ಯೋಜನೆಯಿಂದ ಈ ಮೂರು ಕೆಲಸದ ವೀಸಾ ವಿಭಾಗಗಳ ಆಧಾರದ ಮೇಲೆ 240,000 ಕ್ಕೂ ಹೆಚ್ಚು ಅರ್ಜಿದಾರರ ಮೇಲೆ ಪರಿಣಾಮ ಬೀರಬಹುದು.

ಕೊರೊನಾ ವೈರಸ್ ಸಾಂಕ್ರಾಮಿಕದ ಉತ್ತುಂಗದಲ್ಲಿ ಟ್ರಂಪ್ “ಅಮೆರಿಕಾಕ್ಕೆ ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು” ಯೋಜಿಸಿದ್ದಾರೆ ಎಂದು ಯುಎಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಉದ್ಯಮ ಮಂಡಳಿಯಂತಹ ಕೈಗಾರಿಕಾ ಗುಂಪುಗಳು ಟ್ರಂ‌ಪ್‌ಗೆ ಪತ್ರಗಳನ್ನು ಬರೆದಿದ್ದು, ಈ ನಿರ್ಬಂಧಗಳು ವ್ಯವಹಾರವನ್ನು ಹಾಗೂ ಬೆಳವಣಿಗೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದ್ದರು.

ಕಳೆದ ಕೆಲವು ವರ್ಷಗಳಲ್ಲಿ, ಟ್ರಂಪ್ ಆಡಳಿತವು ಎಚ್ -1ಬಿ ವೀಸಾ ಕಾರ್ಯಕ್ರಮವನ್ನು ಬಿಗಿಗೊಳಿಸಲು ಮುಂದಾಗಿದ್ದು, ಅರ್ಜಿಗಳಿಗೆ ಅನುಮೋದನೆ ದರ ಕಡಿಮೆಯಾಗಿದೆ. ತಂತ್ರಜ್ಞಾನ ಉದ್ಯಮವು ವಿಶೇಷವಾಗಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿದೇಶಿ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಎಚ್ -1ಬಿ ವೀಸಾಗಳನ್ನು ಅವಲಂಬಿಸಿದೆ.


ಓದಿ: ಡೊನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...