Homeಅಂತರಾಷ್ಟ್ರೀಯಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

- Advertisement -
- Advertisement -

ವಿವಿಧ ಕೆಲಸಗಳ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ಪ್ರಕಟಿಸುವುದಾಗಿ ಟ್ರಂಪ್ ಫಾಕ್ಸ್ ನ್ಯೂಸ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಯೋಜನೆಯು ಈಗಾಗಲೇ ಅಮೇರಿಕಾದಲ್ಲಿರುವ ಕೆಲವು ಕಾರ್ಮಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಆಧಾರಿತ ವೀಸಾಗಳನ್ನು ನಿರ್ಬಂಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ಯೋಜನೆಯಿಂದ ತಂತ್ರಜ್ಞಾನ, ಹಣಕಾಸು ಮತ್ತು ಆತಿಥ್ಯ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಬಯಸುವ ಸುಮಾರು 240,000 ಜನರ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಲಾಗಿದೆ.

“ಕೆಲವು ಸಂದರ್ಭಗಳಲ್ಲಿ ಇಂತಹ ಹೊರಗಿಡುವಿಕೆ ಅವಶ್ಯಕವಾಗಿದ್ದು, ದೊಡ್ಡ ಉದ್ಯಮಗಳಿಗೆ ಇದು ಅಗತ್ಯವಾಗಿದೆ, ಅಲ್ಲಿವ ಕೆಲವು ಜನರು ದೀರ್ಘಕಾಲದದಿಂದ ಬರುತ್ತಿದ್ದಾರೆ” ಎಂದು ಟ್ರಂಪ್ ಹೇಳಿದರು.

ಒಂದು ಸಾಧ್ಯತೆಯ ಪ್ರಕಾರ ಎಚ್ -1 ಬಿ ವೀಸಾ ವಿಭಾಗಗಳಲ್ಲಿ 180 ದಿನಗಳವರೆಗೆ ಜನರು ಅಮರಿಕಾಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಜೂನ್ 12 ರಂದು ವರದಿ ಮಾಡಿದೆ. ಆ ವೀಸಾಗಳನ್ನು ಮಂಜೂರು ಮಾಡಿದೆ. ಆದರೆ ದೇಶದ ಹೊರಗೆ ಉಳಿದಿರುವ ಕಾರ್ಮಿಕರಿಗೆ ಆದೇಶದ ಅವಧಿ ಮುಗಿಯುವವರೆಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಈ ಕ್ರಮದಿಂದಾಗಿ ನೂರಾರು ಕಂಪನಿಗಳು ಹಾಗೂ ಸಾವಿರಾರು ಜನರ ಮೇಲೆ ಪರಿಣಾಮ ಬೀರುತ್ತದೆ, 2019 ರ ಆರ್ಥಿಕ ವರ್ಷದಲ್ಲಿ, ಕಂಪನಿಯೊಂದಿಗೆ ಆರಂಭಿಕ ಉದ್ಯೋಗವನ್ನು ಪ್ರಾರಂಭಿಸುವ ಸುಮಾರು 133,000 ಕಾರ್ಮಿಕರಿಗೆ ಎಚ್ -1 ಬಿ ವೀಸಾವನ್ನು ನೀಡಲಾಗಿತ್ತು. ಆರಂಭಿಕ ಅರ್ಜಿಗಳಲ್ಲಿ 12,000 ಕ್ಕೂ ಹೆಚ್ಚು ಜನರಿಗೆ ಎಲ್ -1 ವೀಸಾಗಳನ್ನು ನೀಡಲಾಗಿತ್ತು ಅಲ್ಲದೆ 98,000 ಕ್ಕೂ ಹೆಚ್ಚು ಜನರಿಗೆ ಎಚ್ -2 ಬಿ ವೀಸಾಗಳನ್ನು ನೀಡಲಾಗಿತ್ತು.

ಟ್ರಂಪ್ ಹೇಳಿರುವ ಹೊರಗಿಡುವಿಕೆಯನ್ನು ಹೊರತುಪಡಿಸಿದರೂ, ಯೋಜನೆಯಿಂದ ಈ ಮೂರು ಕೆಲಸದ ವೀಸಾ ವಿಭಾಗಗಳ ಆಧಾರದ ಮೇಲೆ 240,000 ಕ್ಕೂ ಹೆಚ್ಚು ಅರ್ಜಿದಾರರ ಮೇಲೆ ಪರಿಣಾಮ ಬೀರಬಹುದು.

ಕೊರೊನಾ ವೈರಸ್ ಸಾಂಕ್ರಾಮಿಕದ ಉತ್ತುಂಗದಲ್ಲಿ ಟ್ರಂಪ್ “ಅಮೆರಿಕಾಕ್ಕೆ ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು” ಯೋಜಿಸಿದ್ದಾರೆ ಎಂದು ಯುಎಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಉದ್ಯಮ ಮಂಡಳಿಯಂತಹ ಕೈಗಾರಿಕಾ ಗುಂಪುಗಳು ಟ್ರಂ‌ಪ್‌ಗೆ ಪತ್ರಗಳನ್ನು ಬರೆದಿದ್ದು, ಈ ನಿರ್ಬಂಧಗಳು ವ್ಯವಹಾರವನ್ನು ಹಾಗೂ ಬೆಳವಣಿಗೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದ್ದರು.

ಕಳೆದ ಕೆಲವು ವರ್ಷಗಳಲ್ಲಿ, ಟ್ರಂಪ್ ಆಡಳಿತವು ಎಚ್ -1ಬಿ ವೀಸಾ ಕಾರ್ಯಕ್ರಮವನ್ನು ಬಿಗಿಗೊಳಿಸಲು ಮುಂದಾಗಿದ್ದು, ಅರ್ಜಿಗಳಿಗೆ ಅನುಮೋದನೆ ದರ ಕಡಿಮೆಯಾಗಿದೆ. ತಂತ್ರಜ್ಞಾನ ಉದ್ಯಮವು ವಿಶೇಷವಾಗಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿದೇಶಿ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಎಚ್ -1ಬಿ ವೀಸಾಗಳನ್ನು ಅವಲಂಬಿಸಿದೆ.


ಓದಿ: ಡೊನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...