Homeಅಂತರಾಷ್ಟ್ರೀಯಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

- Advertisement -
- Advertisement -

ವಿವಿಧ ಕೆಲಸಗಳ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ಪ್ರಕಟಿಸುವುದಾಗಿ ಟ್ರಂಪ್ ಫಾಕ್ಸ್ ನ್ಯೂಸ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಯೋಜನೆಯು ಈಗಾಗಲೇ ಅಮೇರಿಕಾದಲ್ಲಿರುವ ಕೆಲವು ಕಾರ್ಮಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಆಧಾರಿತ ವೀಸಾಗಳನ್ನು ನಿರ್ಬಂಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ಯೋಜನೆಯಿಂದ ತಂತ್ರಜ್ಞಾನ, ಹಣಕಾಸು ಮತ್ತು ಆತಿಥ್ಯ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಬಯಸುವ ಸುಮಾರು 240,000 ಜನರ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಲಾಗಿದೆ.

“ಕೆಲವು ಸಂದರ್ಭಗಳಲ್ಲಿ ಇಂತಹ ಹೊರಗಿಡುವಿಕೆ ಅವಶ್ಯಕವಾಗಿದ್ದು, ದೊಡ್ಡ ಉದ್ಯಮಗಳಿಗೆ ಇದು ಅಗತ್ಯವಾಗಿದೆ, ಅಲ್ಲಿವ ಕೆಲವು ಜನರು ದೀರ್ಘಕಾಲದದಿಂದ ಬರುತ್ತಿದ್ದಾರೆ” ಎಂದು ಟ್ರಂಪ್ ಹೇಳಿದರು.

ಒಂದು ಸಾಧ್ಯತೆಯ ಪ್ರಕಾರ ಎಚ್ -1 ಬಿ ವೀಸಾ ವಿಭಾಗಗಳಲ್ಲಿ 180 ದಿನಗಳವರೆಗೆ ಜನರು ಅಮರಿಕಾಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಜೂನ್ 12 ರಂದು ವರದಿ ಮಾಡಿದೆ. ಆ ವೀಸಾಗಳನ್ನು ಮಂಜೂರು ಮಾಡಿದೆ. ಆದರೆ ದೇಶದ ಹೊರಗೆ ಉಳಿದಿರುವ ಕಾರ್ಮಿಕರಿಗೆ ಆದೇಶದ ಅವಧಿ ಮುಗಿಯುವವರೆಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಈ ಕ್ರಮದಿಂದಾಗಿ ನೂರಾರು ಕಂಪನಿಗಳು ಹಾಗೂ ಸಾವಿರಾರು ಜನರ ಮೇಲೆ ಪರಿಣಾಮ ಬೀರುತ್ತದೆ, 2019 ರ ಆರ್ಥಿಕ ವರ್ಷದಲ್ಲಿ, ಕಂಪನಿಯೊಂದಿಗೆ ಆರಂಭಿಕ ಉದ್ಯೋಗವನ್ನು ಪ್ರಾರಂಭಿಸುವ ಸುಮಾರು 133,000 ಕಾರ್ಮಿಕರಿಗೆ ಎಚ್ -1 ಬಿ ವೀಸಾವನ್ನು ನೀಡಲಾಗಿತ್ತು. ಆರಂಭಿಕ ಅರ್ಜಿಗಳಲ್ಲಿ 12,000 ಕ್ಕೂ ಹೆಚ್ಚು ಜನರಿಗೆ ಎಲ್ -1 ವೀಸಾಗಳನ್ನು ನೀಡಲಾಗಿತ್ತು ಅಲ್ಲದೆ 98,000 ಕ್ಕೂ ಹೆಚ್ಚು ಜನರಿಗೆ ಎಚ್ -2 ಬಿ ವೀಸಾಗಳನ್ನು ನೀಡಲಾಗಿತ್ತು.

ಟ್ರಂಪ್ ಹೇಳಿರುವ ಹೊರಗಿಡುವಿಕೆಯನ್ನು ಹೊರತುಪಡಿಸಿದರೂ, ಯೋಜನೆಯಿಂದ ಈ ಮೂರು ಕೆಲಸದ ವೀಸಾ ವಿಭಾಗಗಳ ಆಧಾರದ ಮೇಲೆ 240,000 ಕ್ಕೂ ಹೆಚ್ಚು ಅರ್ಜಿದಾರರ ಮೇಲೆ ಪರಿಣಾಮ ಬೀರಬಹುದು.

ಕೊರೊನಾ ವೈರಸ್ ಸಾಂಕ್ರಾಮಿಕದ ಉತ್ತುಂಗದಲ್ಲಿ ಟ್ರಂಪ್ “ಅಮೆರಿಕಾಕ್ಕೆ ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು” ಯೋಜಿಸಿದ್ದಾರೆ ಎಂದು ಯುಎಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಉದ್ಯಮ ಮಂಡಳಿಯಂತಹ ಕೈಗಾರಿಕಾ ಗುಂಪುಗಳು ಟ್ರಂ‌ಪ್‌ಗೆ ಪತ್ರಗಳನ್ನು ಬರೆದಿದ್ದು, ಈ ನಿರ್ಬಂಧಗಳು ವ್ಯವಹಾರವನ್ನು ಹಾಗೂ ಬೆಳವಣಿಗೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದ್ದರು.

ಕಳೆದ ಕೆಲವು ವರ್ಷಗಳಲ್ಲಿ, ಟ್ರಂಪ್ ಆಡಳಿತವು ಎಚ್ -1ಬಿ ವೀಸಾ ಕಾರ್ಯಕ್ರಮವನ್ನು ಬಿಗಿಗೊಳಿಸಲು ಮುಂದಾಗಿದ್ದು, ಅರ್ಜಿಗಳಿಗೆ ಅನುಮೋದನೆ ದರ ಕಡಿಮೆಯಾಗಿದೆ. ತಂತ್ರಜ್ಞಾನ ಉದ್ಯಮವು ವಿಶೇಷವಾಗಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿದೇಶಿ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಎಚ್ -1ಬಿ ವೀಸಾಗಳನ್ನು ಅವಲಂಬಿಸಿದೆ.


ಓದಿ: ಡೊನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...