Homeಅಂತರಾಷ್ಟ್ರೀಯಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಎಚ್-1ಬಿ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ವಿಧಿಸಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

- Advertisement -
- Advertisement -

ವಿವಿಧ ಕೆಲಸಗಳ ವೀಸಾಗಳಿಗೆ ಹೊಸ ನಿರ್ಬಂಧಗಳನ್ನು ಪ್ರಕಟಿಸುವುದಾಗಿ ಟ್ರಂಪ್ ಫಾಕ್ಸ್ ನ್ಯೂಸ್ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಯೋಜನೆಯು ಈಗಾಗಲೇ ಅಮೇರಿಕಾದಲ್ಲಿರುವ ಕೆಲವು ಕಾರ್ಮಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಆಧಾರಿತ ವೀಸಾಗಳನ್ನು ನಿರ್ಬಂಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ಯೋಜನೆಯಿಂದ ತಂತ್ರಜ್ಞಾನ, ಹಣಕಾಸು ಮತ್ತು ಆತಿಥ್ಯ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಬಯಸುವ ಸುಮಾರು 240,000 ಜನರ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಲಾಗಿದೆ.

“ಕೆಲವು ಸಂದರ್ಭಗಳಲ್ಲಿ ಇಂತಹ ಹೊರಗಿಡುವಿಕೆ ಅವಶ್ಯಕವಾಗಿದ್ದು, ದೊಡ್ಡ ಉದ್ಯಮಗಳಿಗೆ ಇದು ಅಗತ್ಯವಾಗಿದೆ, ಅಲ್ಲಿವ ಕೆಲವು ಜನರು ದೀರ್ಘಕಾಲದದಿಂದ ಬರುತ್ತಿದ್ದಾರೆ” ಎಂದು ಟ್ರಂಪ್ ಹೇಳಿದರು.

ಒಂದು ಸಾಧ್ಯತೆಯ ಪ್ರಕಾರ ಎಚ್ -1 ಬಿ ವೀಸಾ ವಿಭಾಗಗಳಲ್ಲಿ 180 ದಿನಗಳವರೆಗೆ ಜನರು ಅಮರಿಕಾಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸುತ್ತದೆ ಎಂದು ಬ್ಲೂಮ್‌ಬರ್ಗ್ ನ್ಯೂಸ್ ಜೂನ್ 12 ರಂದು ವರದಿ ಮಾಡಿದೆ. ಆ ವೀಸಾಗಳನ್ನು ಮಂಜೂರು ಮಾಡಿದೆ. ಆದರೆ ದೇಶದ ಹೊರಗೆ ಉಳಿದಿರುವ ಕಾರ್ಮಿಕರಿಗೆ ಆದೇಶದ ಅವಧಿ ಮುಗಿಯುವವರೆಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಈ ಕ್ರಮದಿಂದಾಗಿ ನೂರಾರು ಕಂಪನಿಗಳು ಹಾಗೂ ಸಾವಿರಾರು ಜನರ ಮೇಲೆ ಪರಿಣಾಮ ಬೀರುತ್ತದೆ, 2019 ರ ಆರ್ಥಿಕ ವರ್ಷದಲ್ಲಿ, ಕಂಪನಿಯೊಂದಿಗೆ ಆರಂಭಿಕ ಉದ್ಯೋಗವನ್ನು ಪ್ರಾರಂಭಿಸುವ ಸುಮಾರು 133,000 ಕಾರ್ಮಿಕರಿಗೆ ಎಚ್ -1 ಬಿ ವೀಸಾವನ್ನು ನೀಡಲಾಗಿತ್ತು. ಆರಂಭಿಕ ಅರ್ಜಿಗಳಲ್ಲಿ 12,000 ಕ್ಕೂ ಹೆಚ್ಚು ಜನರಿಗೆ ಎಲ್ -1 ವೀಸಾಗಳನ್ನು ನೀಡಲಾಗಿತ್ತು ಅಲ್ಲದೆ 98,000 ಕ್ಕೂ ಹೆಚ್ಚು ಜನರಿಗೆ ಎಚ್ -2 ಬಿ ವೀಸಾಗಳನ್ನು ನೀಡಲಾಗಿತ್ತು.

ಟ್ರಂಪ್ ಹೇಳಿರುವ ಹೊರಗಿಡುವಿಕೆಯನ್ನು ಹೊರತುಪಡಿಸಿದರೂ, ಯೋಜನೆಯಿಂದ ಈ ಮೂರು ಕೆಲಸದ ವೀಸಾ ವಿಭಾಗಗಳ ಆಧಾರದ ಮೇಲೆ 240,000 ಕ್ಕೂ ಹೆಚ್ಚು ಅರ್ಜಿದಾರರ ಮೇಲೆ ಪರಿಣಾಮ ಬೀರಬಹುದು.

ಕೊರೊನಾ ವೈರಸ್ ಸಾಂಕ್ರಾಮಿಕದ ಉತ್ತುಂಗದಲ್ಲಿ ಟ್ರಂಪ್ “ಅಮೆರಿಕಾಕ್ಕೆ ವಲಸೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು” ಯೋಜಿಸಿದ್ದಾರೆ ಎಂದು ಯುಎಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಉದ್ಯಮ ಮಂಡಳಿಯಂತಹ ಕೈಗಾರಿಕಾ ಗುಂಪುಗಳು ಟ್ರಂ‌ಪ್‌ಗೆ ಪತ್ರಗಳನ್ನು ಬರೆದಿದ್ದು, ಈ ನಿರ್ಬಂಧಗಳು ವ್ಯವಹಾರವನ್ನು ಹಾಗೂ ಬೆಳವಣಿಗೆಗೆ ಅಡ್ಡಿಪಡಿಸುತ್ತದೆ ಎಂದು ಹೇಳಿದ್ದರು.

ಕಳೆದ ಕೆಲವು ವರ್ಷಗಳಲ್ಲಿ, ಟ್ರಂಪ್ ಆಡಳಿತವು ಎಚ್ -1ಬಿ ವೀಸಾ ಕಾರ್ಯಕ್ರಮವನ್ನು ಬಿಗಿಗೊಳಿಸಲು ಮುಂದಾಗಿದ್ದು, ಅರ್ಜಿಗಳಿಗೆ ಅನುಮೋದನೆ ದರ ಕಡಿಮೆಯಾಗಿದೆ. ತಂತ್ರಜ್ಞಾನ ಉದ್ಯಮವು ವಿಶೇಷವಾಗಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿದೇಶಿ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಎಚ್ -1ಬಿ ವೀಸಾಗಳನ್ನು ಅವಲಂಬಿಸಿದೆ.


ಓದಿ: ಡೊನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...