Homeಕರ್ನಾಟಕಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ - ಬಿಜೆಪಿ ಶಾಸಕ ಹರೀಶ್ ಪೂಂಜಾ...

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಕೂಡಾ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಹೇಳಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು ವ್ಯಾಪಕ ವ್ಯಂಗ್ಯಕ್ಕೀಡಾಗಿದ್ದಾರೆ.

ನವೆಂಬರ್‌ 18ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, “ನಮ್ಮ ದೇಶದ ಎಲ್ಲ ಜನರನ್ನು ಭಾರತೀಯರು ಅಂತ ತಿಳಿದುಕೊಂಡು ನರೇಂದ್ರ ಮೋದಿಯವರು ದೇಶದ ಆಡಳಿತವನ್ನು ನಡೆಸುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಮಾತ್ರ ಸೂಪರ್ ಪವರ್ ಭಾರತ ನಿರ್ಮಾಣವಾಗುತ್ತದೆ. ರಷ್ಯಾ-ಉಕ್ರೇನ್ ನಡುವೆ ಯುದ್ಧವಾದಾಗ ಅಮೆರಿಕದ ಅಧ್ಯಕ್ಷರನ್ನು ಕರೆಯಲಿಲ್ಲ. ಬದಲಾಗಿ, ಯುದ್ಧ ನಿಲ್ಲಿಸಲು ನರೇಂದ್ರ ಮೋದಿಯವರನ್ನು ಕರೆದಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿಯವರೇ, ನೀವು ಬನ್ನಿ, ಯುದ್ಧ ನಿಲ್ಲಿಸಿ ಅಂತ ಉಕ್ರೇನ್‌ನ ಅಧ್ಯಕ್ಷ ಮನವಿ ಮಾಡಿದ್ದರು. ಯಾಕೆಂದರೆ, ಭಾರತ ಅಷ್ಟೊಂದು ಸೂಪರ್ ಪವರ್” ಎಂದು ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಪ್ರತಿಪಾದಿಸಿದ್ದಾರೆ. ಅದಾಗ್ಯೂ, ವಿದೇಶಾಂಗ ಸಚಿವಾಲಯವು ಉಕ್ರೇನ್ ಮತ್ತು ರಷ್ಯಾ ಯುದ್ಧದ ವಿಚಾರವಾಗಿ ಈ ರೀತಿಯ ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿತ್ತು. ಅದರೂ ಬಿಜೆಪಿ ಅಭಿಮಾನಿಗಳು ಮತ್ತು ನಾಯಕರು ಅದನ್ನೆ ಪದೇ ಪದೇ ಹೇಳುತ್ತಾ ಸುಳ್ಳು ಹರಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ಯಾಲೆಸ್ತೀನ್-ಇಸ್ರೇಲ್ ಯುದ್ಧವಾದಾಗಲೂ ಕೂಡ ನರೇಂದ್ರ ಮೋದಿಯವರನ್ನು ಯುದ್ಧ ನಿಲ್ಲಿಸಲು ಕರೆದಿದ್ದರು. ಅದೇ ರೀತಿ, ಅಮೆರಿಕದ ಅಧ್ಯಕ್ಷ ಕೂಡ ಇವತ್ತು ಯಾವುದೇ ನಿರ್ಧಾರ ಮಾಡುವುದಿದ್ದರೆ ಮೊದಲು ಯೋಚನೆ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು. ಮೋದಿಯವರನ್ನು ಕೇಳಿಯೇ ನಿರ್ಧಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

“ಇದು ನಮಗೆ ಹೆಮ್ಮೆಯ ವಿಷಯವಾಗಬೇಕು. ನಮ್ಮನ್ನು ಕೇಳಿಯೇ ಅಲ್ಲಿ ಆಡಳಿತ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಂತಹ ದೇಶದಲ್ಲಿ ನಾವು ಬದುಕುತ್ತಿದ್ದೇವೆ ಎಂಬ ಹೆಮ್ಮೆ ನಮಗಿರಬೇಕು. ಇದಕ್ಕೆಲ್ಲ ಮೋದಿಯವರು ಕಾರಣ. 2030ರ ವೇಳೆಗೆ ಭಾರತ ಸೂಪರ್ ಪವರ್ ದೇಶವಾಗುತ್ತದೆ” ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದು, “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಈ ಹೇಳಿಕೆಯನ್ನು ಕೇಳಿ ನಗಬೇಕೊ ಆಳಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಅಮೆರಿಕ ದೇಶದಲ್ಲಿ ಯಾವುದೇ ನಿರ್ಧಾರ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯ ಮಾತು ಕೇಳಿಯಂತೆ. ಅಮೆರಿಕದ 1 ಡಾಲರ್ ಭಾರತದ 84 ರೂಪಾಯಿಗೆ ಸಮವಾಗಿದೆ. ಇದು ಕೂಡ ಮೋದಿಯ ಸಲಹೆಯಿಂದ ಆಗಿರಬಹುದು. ಮತ ನೀಡಿದ ಮತದಾರರ ಕಿವಿಗೆ ಹೂ ಇಡುವುದರಲ್ಲಿ ಬೆಳ್ತಂಗಡಿ ಶಾಸಕರು ನಿಸ್ಸೀಮರು” ಬಳಕೆದಾರರೊಬ್ಬರು ಹೇಳಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧದ ಬಗ್ಗೆ ಬಿಜೆಪಿ ಹರಡಿದ ಸುಳ್ಳು!

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದಾಗ, ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನೆರವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಗೆ ಸ್ಪಂದಿಸಿ ಉಕ್ರೇನ್‌ನಲ್ಲಿ ರಷ್ಯಾ ಕೆಲಕಾಲ ದಾಳಿಯನ್ನು ಸ್ಥಗಿತಗೊಳಿಸಿತ್ತು ಎಂದು ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಸಂಘಪರಿವಾರದವರು ಸುದ್ದಿ ಹರಡಿದ್ದರು.

ಬಿಜೆಪಿ ಹರಡಿದ್ದ ಸುಳ್ಳನ್ನು ನಂಬಿ ಬಿಜೆಪಿ ಪರ ಮಾಧ್ಯಮಗಳು, ವರದಿ ಪ್ರಕಟಿಸಿತ್ತು. ಬಳಿಕ ಎಲ್ಲವೂ ಸುಳ್ಳು ಎಂದು ಗೊತ್ತಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಆಗಿನ ವಿದೇಶಾಂಗ ಇಲಾಖೆಯ ಅಧಿಕಾರಿ ಅರಿಂದಮ್ ಬಾಗ್ಚಿ, ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.

“ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲು ನಮಗೆ ಸೂಕ್ತ ಮಾರ್ಗಗಳನ್ನು ರಷ್ಯಾ ಹಾಗೂ ಉಕ್ರೇನ್ ಸರ್ಕಾರಗಳು ವಿವರಿಸಿದವು. ಹೀಗಾಗಿ, ನಾವು ಉಕ್ರೇನ್‌ನಲ್ಲಿ ಇರುವ ನಮ್ಮ ಪ್ರಜೆಗಳಿಗೆ ಈ ಮಾಹಿತಿಯನ್ನು ರವಾನಿಸಿ ಅವರನ್ನು ಉಕ್ರೇನ್‌ ದೇಶದ ಗಡಿ ದಾಟಿಸಿದೆವು. ಈ ರಕ್ಷಣಾ ಕಾರ್ಯಾಚರಣೆಗೆ ಸಹಕಾರ ನೀಡಿದ ದೇಶಗಳಿಗೆ ಧನ್ಯವಾದ ಹೇಳುತ್ತೇವೆ. ಇದು ನಮಗೆ ಖುಷಿ ತಂದಿದೆ” ಎಂದು ಅವರು ಹೇಳಿದ್ದರು.

“ನಮ್ಮ ಮನವಿಗೆ ಸೇನೆ ಸ್ಪಂದಿಸಿ ಭಾರತೀಯರ ತೆರವು ಕಾರ್ಯಾಚರಣೆ ವೇಳೆ ಬಾಂಬ್ ದಾಳಿ ನಿಲ್ಲಿಸಲಾಗಿತ್ತು ಎಂಬ ವಿಚಾರ ಸತ್ಯಕ್ಕೆ ದೂರವಾದ ವಿಚಾರ” ಎಂದು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...