Homeಕರ್ನಾಟಕಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ - ಬಿಜೆಪಿ ಶಾಸಕ ಹರೀಶ್ ಪೂಂಜಾ...

ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

- Advertisement -
- Advertisement -

ಅಮೆರಿಕದ ಅಧ್ಯಕ್ಷ ಕೂಡಾ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಹೇಳಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು ವ್ಯಾಪಕ ವ್ಯಂಗ್ಯಕ್ಕೀಡಾಗಿದ್ದಾರೆ.

ನವೆಂಬರ್‌ 18ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, “ನಮ್ಮ ದೇಶದ ಎಲ್ಲ ಜನರನ್ನು ಭಾರತೀಯರು ಅಂತ ತಿಳಿದುಕೊಂಡು ನರೇಂದ್ರ ಮೋದಿಯವರು ದೇಶದ ಆಡಳಿತವನ್ನು ನಡೆಸುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಮಾತ್ರ ಸೂಪರ್ ಪವರ್ ಭಾರತ ನಿರ್ಮಾಣವಾಗುತ್ತದೆ. ರಷ್ಯಾ-ಉಕ್ರೇನ್ ನಡುವೆ ಯುದ್ಧವಾದಾಗ ಅಮೆರಿಕದ ಅಧ್ಯಕ್ಷರನ್ನು ಕರೆಯಲಿಲ್ಲ. ಬದಲಾಗಿ, ಯುದ್ಧ ನಿಲ್ಲಿಸಲು ನರೇಂದ್ರ ಮೋದಿಯವರನ್ನು ಕರೆದಿದ್ದರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿಯವರೇ, ನೀವು ಬನ್ನಿ, ಯುದ್ಧ ನಿಲ್ಲಿಸಿ ಅಂತ ಉಕ್ರೇನ್‌ನ ಅಧ್ಯಕ್ಷ ಮನವಿ ಮಾಡಿದ್ದರು. ಯಾಕೆಂದರೆ, ಭಾರತ ಅಷ್ಟೊಂದು ಸೂಪರ್ ಪವರ್” ಎಂದು ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಪ್ರತಿಪಾದಿಸಿದ್ದಾರೆ. ಅದಾಗ್ಯೂ, ವಿದೇಶಾಂಗ ಸಚಿವಾಲಯವು ಉಕ್ರೇನ್ ಮತ್ತು ರಷ್ಯಾ ಯುದ್ಧದ ವಿಚಾರವಾಗಿ ಈ ರೀತಿಯ ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿತ್ತು. ಅದರೂ ಬಿಜೆಪಿ ಅಭಿಮಾನಿಗಳು ಮತ್ತು ನಾಯಕರು ಅದನ್ನೆ ಪದೇ ಪದೇ ಹೇಳುತ್ತಾ ಸುಳ್ಳು ಹರಡುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ಯಾಲೆಸ್ತೀನ್-ಇಸ್ರೇಲ್ ಯುದ್ಧವಾದಾಗಲೂ ಕೂಡ ನರೇಂದ್ರ ಮೋದಿಯವರನ್ನು ಯುದ್ಧ ನಿಲ್ಲಿಸಲು ಕರೆದಿದ್ದರು. ಅದೇ ರೀತಿ, ಅಮೆರಿಕದ ಅಧ್ಯಕ್ಷ ಕೂಡ ಇವತ್ತು ಯಾವುದೇ ನಿರ್ಧಾರ ಮಾಡುವುದಿದ್ದರೆ ಮೊದಲು ಯೋಚನೆ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು. ಮೋದಿಯವರನ್ನು ಕೇಳಿಯೇ ನಿರ್ಧಾರ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

“ಇದು ನಮಗೆ ಹೆಮ್ಮೆಯ ವಿಷಯವಾಗಬೇಕು. ನಮ್ಮನ್ನು ಕೇಳಿಯೇ ಅಲ್ಲಿ ಆಡಳಿತ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಂತಹ ದೇಶದಲ್ಲಿ ನಾವು ಬದುಕುತ್ತಿದ್ದೇವೆ ಎಂಬ ಹೆಮ್ಮೆ ನಮಗಿರಬೇಕು. ಇದಕ್ಕೆಲ್ಲ ಮೋದಿಯವರು ಕಾರಣ. 2030ರ ವೇಳೆಗೆ ಭಾರತ ಸೂಪರ್ ಪವರ್ ದೇಶವಾಗುತ್ತದೆ” ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಅವರ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದು, “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಈ ಹೇಳಿಕೆಯನ್ನು ಕೇಳಿ ನಗಬೇಕೊ ಆಳಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಅಮೆರಿಕ ದೇಶದಲ್ಲಿ ಯಾವುದೇ ನಿರ್ಧಾರ ಮಾಡುವುದು ಭಾರತದ ಪ್ರಧಾನಿ ನರೇಂದ್ರ ಮೋದಿಯ ಮಾತು ಕೇಳಿಯಂತೆ. ಅಮೆರಿಕದ 1 ಡಾಲರ್ ಭಾರತದ 84 ರೂಪಾಯಿಗೆ ಸಮವಾಗಿದೆ. ಇದು ಕೂಡ ಮೋದಿಯ ಸಲಹೆಯಿಂದ ಆಗಿರಬಹುದು. ಮತ ನೀಡಿದ ಮತದಾರರ ಕಿವಿಗೆ ಹೂ ಇಡುವುದರಲ್ಲಿ ಬೆಳ್ತಂಗಡಿ ಶಾಸಕರು ನಿಸ್ಸೀಮರು” ಬಳಕೆದಾರರೊಬ್ಬರು ಹೇಳಿದ್ದಾರೆ.

ರಷ್ಯಾ ಉಕ್ರೇನ್ ಯುದ್ಧದ ಬಗ್ಗೆ ಬಿಜೆಪಿ ಹರಡಿದ ಸುಳ್ಳು!

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದಾಗ, ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ನೆರವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಗೆ ಸ್ಪಂದಿಸಿ ಉಕ್ರೇನ್‌ನಲ್ಲಿ ರಷ್ಯಾ ಕೆಲಕಾಲ ದಾಳಿಯನ್ನು ಸ್ಥಗಿತಗೊಳಿಸಿತ್ತು ಎಂದು ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಸಂಘಪರಿವಾರದವರು ಸುದ್ದಿ ಹರಡಿದ್ದರು.

ಬಿಜೆಪಿ ಹರಡಿದ್ದ ಸುಳ್ಳನ್ನು ನಂಬಿ ಬಿಜೆಪಿ ಪರ ಮಾಧ್ಯಮಗಳು, ವರದಿ ಪ್ರಕಟಿಸಿತ್ತು. ಬಳಿಕ ಎಲ್ಲವೂ ಸುಳ್ಳು ಎಂದು ಗೊತ್ತಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಆಗಿನ ವಿದೇಶಾಂಗ ಇಲಾಖೆಯ ಅಧಿಕಾರಿ ಅರಿಂದಮ್ ಬಾಗ್ಚಿ, ಎಲ್ಲಾ ವರದಿಗಳನ್ನೂ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು.

“ಭಾರತೀಯರನ್ನು ಉಕ್ರೇನ್‌ನಿಂದ ವಾಪಸ್ ಕರೆತರಲು ನಮಗೆ ಸೂಕ್ತ ಮಾರ್ಗಗಳನ್ನು ರಷ್ಯಾ ಹಾಗೂ ಉಕ್ರೇನ್ ಸರ್ಕಾರಗಳು ವಿವರಿಸಿದವು. ಹೀಗಾಗಿ, ನಾವು ಉಕ್ರೇನ್‌ನಲ್ಲಿ ಇರುವ ನಮ್ಮ ಪ್ರಜೆಗಳಿಗೆ ಈ ಮಾಹಿತಿಯನ್ನು ರವಾನಿಸಿ ಅವರನ್ನು ಉಕ್ರೇನ್‌ ದೇಶದ ಗಡಿ ದಾಟಿಸಿದೆವು. ಈ ರಕ್ಷಣಾ ಕಾರ್ಯಾಚರಣೆಗೆ ಸಹಕಾರ ನೀಡಿದ ದೇಶಗಳಿಗೆ ಧನ್ಯವಾದ ಹೇಳುತ್ತೇವೆ. ಇದು ನಮಗೆ ಖುಷಿ ತಂದಿದೆ” ಎಂದು ಅವರು ಹೇಳಿದ್ದರು.

“ನಮ್ಮ ಮನವಿಗೆ ಸೇನೆ ಸ್ಪಂದಿಸಿ ಭಾರತೀಯರ ತೆರವು ಕಾರ್ಯಾಚರಣೆ ವೇಳೆ ಬಾಂಬ್ ದಾಳಿ ನಿಲ್ಲಿಸಲಾಗಿತ್ತು ಎಂಬ ವಿಚಾರ ಸತ್ಯಕ್ಕೆ ದೂರವಾದ ವಿಚಾರ” ಎಂದು ಅರಿಂದಮ್ ಬಾಗ್ಚಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...