Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...