Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....