Homeಮುಖಪುಟಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಯುಎಸ್ ಅಧ್ಯಕ್ಷೀಯ ಚುನಾವಣೆ | ಇಂದು ಮತದಾನ : ಟ್ರಂಪ್, ಹ್ಯಾರಿಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

- Advertisement -
- Advertisement -

ತಿಂಗಳುಗಳ ಕಾಲ ನಡೆದ ವಾಗ್ವಾದ, ಆರೋಪ-ಪ್ರತ್ಯಾರೋಪ, ಆಮಿಷ, ಓಲೈಕೆ ಡೊನಾಲ್ಡ್ ಟ್ರಂಪ್ ಅವರ ಎರಡು ಹತ್ಯೆ ಪ್ರಯತ್ನಗಳ ಬಳಿಕ ಅಂತಿಮವಾಗಿ ಇಂದು (ನ.5) ಯುಎಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮತದಾನ ನಡೆಯಲಿದೆ.

ರಿಪಬ್ಲಿಕನ್ ಪಕ್ಷದಿಂದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದಿಂದ ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.

ವರದಿಗಳ ಪ್ರಕಾರ, ಈಗಾಗಲೇ 7.8 ಕೋಟಿಗೂ ಅಧಿಕ ಮತದಾರರು ಮೇಲ್‌-ಇನ್ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಯೂನಿವರ್ಸಿಟಿ ಆಫ್ ಫ್ಲೋರಿಡಾ ಎಲೆಕ್ಷನ್ ಲ್ಯಾಬ್ ತಿಳಿಸಿದೆ.

ಇಂದು ಮತದಾನವಾದರೂ, ಸಂಪೂರ್ಣ ಯುಎಸ್‌ನವರಿಗೆ ಒಂದೇ ಸಮಯಕ್ಕೆ ಬೆಳಗಾಗುವುದಿಲ್ಲ. ಆದ್ದರಿಂದ ಎಲ್ಲರಿಗೂ ಒಂದೇ ಸಮಯಕ್ಕೆ ಮತದಾನ ಕೇಂದ್ರಗಳಿಗೆ ಹೋಗಲು ಆಗುವುದಿಲ್ಲ. ಯುಎಸ್‌ನ ಭೂಭಾಗವು ಆರು ಸಮಯ ವಲಯಗಳನ್ನು ಹೊಂದಿದೆ. ಆದ್ದರಿಂದ, ಭಾರತೀಯ ಕಾಲಮಾನ (ಐಎಸ್‌ಟಿ) ಪರಿಗಣಿಸಿದಾಗ ವಿವಿಧ ಸಮಯಗಳಲ್ಲಿ ಮತಗಟ್ಟೆಗಳು ತೆರೆಯಲ್ಪಡುತ್ತವೆ.

ಯುಎಸ್‌ನಾದ್ಯಂತ ಮತಗಟ್ಟೆಗಳು ಬೆಳಿಗ್ಗೆ 7 ರಿಂದ 11 ರವರೆಗೆ (ಸ್ಥಳೀಯ ಕಾಲಮಾನ) ತೆರೆಯುವ ನಿರೀಕ್ಷೆಯಿದೆ. ಇದನ್ನು ಭಾರತೀಯ ಕಾಲಮಾನಕ್ಕೆ ಹೋಲಿಸಿದರೆ, ಇಂದು ಸಂಜೆ 3.30ರಿಂದ ರಾತ್ರಿ 8.30ರ ನಡುವೆ ಮತಗಟ್ಟೆಗಳು ತೆರೆಯಬಹುದು. ಯುಎಸ್‌ ಸ್ಥಳೀಯ ಕಾಲಮಾನದ ಪ್ರಕಾರ, ಇಂದು ಸಂಜೆ 5.30ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಲ್ಲಿ ಮತದಾನ ಕೊನೆಗೊಳ್ಳುವ ಹೊತ್ತಿಗೆ, ಭಾರತದಲ್ಲಿ ನಾಳೆ (ನ.6, ಬುಧವಾರ) ಬೆಳಿಗ್ಗೆ 5.30 ಆಗಬಹುದು.

ಯುಎಸ್‌ನಲ್ಲಿ ಮತದಾನ ಪ್ರಕ್ರಿಯೆ ಕೊನೆಗೊಂಡ ನಂತರ ಎಣಿಕೆ ಆರಂಭವಾಗುವ ನಿರೀಕ್ಷೆ ಇದೆ. ಭಾರತೀಯ ಕಾಲಮಾನ ಪ್ರಕಾರ, ನಾಳೆ (ಬುಧವಾರ) ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಯುಎಸ್‌ನ ಪಶ್ಚಿಮ ಭಾಗಗಳಲ್ಲಿ ಮತದಾನ ನಡೆಯುತ್ತಿರುವಾಗಲೂ, ಪೂರ್ವ ಕರಾವಳಿ ಪ್ರದೇಶಗಳಲ್ಲಿ ಮತ ಎಣಿಕೆ ಶುರುವಾಗುವ ಸಾಧ್ಯತೆಯಿದೆ.

ಮತದಾನ ಕೊನೆಗೊಂಡ ಬಳಿಕ ಎಣಿಕೆ ಪ್ರಾರಂಭವಾದರೆ ಆರಂಭಿಕ ಟ್ರೆಂಡ್ ಮಾಹಿತಿ ನಮಗೆ ಲಭ್ಯವಾಗಬಹುದು. ಆದರೆ, ಅಂತಿಮ ಫಲಿತಾಂಶಕ್ಕೆ ಕೆಲ ದಿನಗಳು ಕಾಯಬೇಕಿದೆ. ಏಕೆಂದರೆ ವಿವಿಧ ಯುಎಸ್‌ ರಾಜ್ಯಗಳು ಮತಗಳ ಎಣಿಕೆಯ ವಿಭಿನ್ನ ವಿಧಾನಗಳನ್ನು ಹೊಂದಿವೆ. ನಂತರ ಮೇಲ್-ಇನ್ ಮತಪತ್ರಗಳ ಸಮಸ್ಯೆಯೂ ಇದೆ. ಅತಿ ಕಡಿಮೆ ಗೆಲುವಿನ ಅಂತರಗಳಿದ್ದಲ್ಲಿ, ಮತಗಟ್ಟೆ ಅಧಿಕಾರಿಗಳು ಮರು ಎಣಿಕೆ ಮಾಡಲು ನಿರ್ಧರಿಸಬಹುದು. ಮುಖ್ಯವಾಗಿ, ಫಲಿತಾಂಶಗಳಿಗೆ ಕಾನೂನು ಸವಾಲುಗಳು ಇರಬಹುದು. ಇದು ಚುನಾವಣಾ ಫಲಿತಾಂಶದ ಅಂತಿಮ ಘೋಷಣೆಯನ್ನು ಇನ್ನಷ್ಟು ವಿಳಂಬಗೊಳಿಸಬಹುದು.

ಫಲಿತಾಂಶಗಳು ತನಗೆ ವಿರುದ್ಧವಾಗಿ ಬಂದರೆ ಏನು ಮಾಡುತ್ತೇನೆ ಎಂದು ಹೇಳಲು ಮಾಜಿ ಅಧ್ಯಕ್ಷ ಟ್ರಂಪ್ ನಿರಾಕರಿಸಿದ್ದಾರೆ. ಆದರೆ, 2020 ರ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ದ ಸೋತ ಬಳಿಕ ಟ್ರಂಪ್ ಸೃಷ್ಟಿಸಿದ ಪರಿಸ್ಥಿತಿ ಜಗತ್ತಿಗೆ ಗೊತ್ತಿದೆ.

ಯುಎಸ್‌ನಲ್ಲಿ ಮತದಾರರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವುದಿಲ್ಲ. ಜನರು ರಾಜ್ಯಗಳಿಂದ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ನಂತರ ಅವರು ಅಧ್ಯಕ್ಷೀಯ ಅಭ್ಯರ್ಥಿಗೆ ಮತ ಹಾಕುತ್ತಾರೆ.

ಎಲ್ಲವೂ ವೇಳಾಪಟ್ಟಿಯ ಪ್ರಕಾರ ನಡೆದರೆ, ಹೊಸ ಯುಎಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಜನವರಿ 20, 2025 ರಂದು ದೇಶದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ದಾಳಿ ಆರೋಪ : ಪ್ರಧಾನಿ ಟ್ರುಡೊ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...