Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ದೆಹಲಿ ಬಿಜೆಪಿಯ ಮಾಜಿ ಶಾಸಕರೊಬ್ಬರು ಅಮೆರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಅವರ ಪಕ್ಷದ ಪರವಾಗಿರುವ ರಿಪಬ್ಲಿಕನ್ ಹಿಂದೂ ಒಕ್ಕೂಟದೊಂದಿಗೆ ಆನ್‌ಲೈನ್ ಕಾರ್ಯಕ್ರಮ ಆಯೋಜಿಸಿದ್ದು ವಿವಾದವಾಗಿದೆ. ಅದಾಗ್ಯೂ ಬಿಜೆಪಿ ಇದರಿಂದ ಅಂತರ ಕಾಪಾಡಿಕೊಂಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಹೇಳಿದೆ. ಟ್ರಂಪ್ ಪರವಾಗಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 5 ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ವಿವಾದಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಭಾಗವಹಿಸುವ ರಿಪಬ್ಲಿಕನ್ ಹಿಂದೂ ಒಕ್ಕೂಟವನ್ನು 2015 ರಲ್ಲಿ ಹಿಂದೂ-ಅಮೇರಿಕನ್ ಸಮುದಾಯ ಮತ್ತು ರಿಪಬ್ಲಿಕನ್ ಪ್ರತಿನಿಧಿಗಳ ನಡುವಿನ “ವಿಶಿಷ್ಟ ಸೇತುವೆ” ಎಂದು ಸ್ಥಾಪಿಸಲಾಯಿತು.

ಇದನ್ನೂ ಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ರಿಪಬ್ಲಿಕನ್‌ ಹಿಂದೂ ಒಕ್ಕೂಟದ ಅಧ್ಯಕ್ಷ ಶಲಭ್ ಕುಮಾರ್ ಅವರೊಂದಿಗೆ ದೆಹಲಿಯ ಮಾಜಿ ಶಾಸಕ ವಿಜಯ್ ಜಾಲಿ ಅವರು ಆಯೋಜಿಸುತ್ತಿರುವ ಆನ್‌ಲೈನ್ ಸಭೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಬುಧವಾರ ಹೇಳಿದ್ದಾರೆ. ಟ್ರಂಪ್ ಪರವಾಗಿ ಸಭೆ

“ಬಿಜೆಪಿಯ ಹಿರಿಯ ನಾಯಕ ಎಂದು ಘೋಷಿತವಾಗಿರುವ ವಿಜಯ್ ಜಾಲಿ ಅವರು ಅಮೆರಿಕ ಚುನಾವಣೆಯ ಇಬ್ಬರು ಪ್ರಮುಖ ಅಧ್ಯಕ್ಷೀಯ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಬೆಂಬಲಿಸುವ ಆನ್‌ಲೈನ್ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ತರಲಾಗಿದೆ. ಈ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ.” ಎಂದು ಚೌತೈವಾಲೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗಳು ಅಲ್ಲಿನ ಆಂತರಿಕ ವಿಷಯ ಎಂಬ ವಿಚಾರದಲ್ಲಿ ಬಿಜೆಪಿಗೆ “ಬಹಳ ಸ್ಪಷ್ಟ” ನಿಲುವಿದೆ. ಬಿಜೆಪಿ ಆ ದೇಶದಲ್ಲಿ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಚೌತೈವಾಲೆ ಅವರು ಹೇಳಿದ್ದಾರೆ.

ಇದನ್ನೂಓದಿ: ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

ದೆಹಲಿಯ ಸಾಕೇತ್ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸುವ ಜಾಲಿ ಅವರು ದ್ವಿಪಕ್ಷೀಯ ವೇದಿಕೆಯಾದ ದೆಹಲಿ ಸ್ಟಡಿ ಸರ್ಕಲ್‌ನ ಆಶ್ರಯದಲ್ಲಿ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ದಿ ಹಿಂದೂಗೆ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಗೂ ಅಥವಾ ಅಮೆರಿಕದ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.

“ಇದಲ್ಲದೆ, ಶಲಭ್ ಕುಮಾರ್ ಅವರು ದೀರ್ಘಕಾಲದವರೆಗೆ ಬಿಜೆಪಿಗೆ ಪರಿಚಿತರಾಗಿದ್ದಾರೆ. ಅವರು ಅಮೆರಿಕಾದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಾಲ್ವರು ರಿಪಬ್ಲಿಕನ್ ಸಂಸದರ ಭೇಟಿಯನ್ನು ಏರ್ಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು” ಅವರು ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

“ಆ ಸಮಯದಲ್ಲಿ ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ತೆಗೆದುಕೊಂಡ ಧೋರಣೆ ಹೊರತಾಗಿಯೂ ಈ ರಿಪಬ್ಲಿಕನ್ ಸಂಸದರು ಮೋದಿ ಅವರಿಗೆ ಆಹ್ವಾನವನ್ನು ನೀಡಿದ್ದರು.” ಎಂದು ಅವರು ಹೇಳಿದ್ದಾರೆ. 2002ರ ಗುಜರಾತ್ ಗಲಭೆಯ ಕಾರಣಕ್ಕೆ 2005 ರಲ್ಲಿ, ಅಮೆರಿಕಾ ಸರ್ಕಾರವು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರಿಗೆ ರಾಜತಾಂತ್ರಿಕ ವೀಸಾವನ್ನು ನಿರಾಕರಿಸಿತ್ತು.

ವಿಡಿಯೊನೋಡಿ: ‘ರಾಷ್ಟ್ರೀಯ ವಿಜ್ಞಾನ‌ ದಿನ’ ಪ್ರಯುಕ್ತ ವಿಚಾರ ಕ್ರಾಂತಿ-ರಾಜ್ಯಮಟ್ಟದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...