Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ದೆಹಲಿ ಬಿಜೆಪಿಯ ಮಾಜಿ ಶಾಸಕರೊಬ್ಬರು ಅಮೆರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಅವರ ಪಕ್ಷದ ಪರವಾಗಿರುವ ರಿಪಬ್ಲಿಕನ್ ಹಿಂದೂ ಒಕ್ಕೂಟದೊಂದಿಗೆ ಆನ್‌ಲೈನ್ ಕಾರ್ಯಕ್ರಮ ಆಯೋಜಿಸಿದ್ದು ವಿವಾದವಾಗಿದೆ. ಅದಾಗ್ಯೂ ಬಿಜೆಪಿ ಇದರಿಂದ ಅಂತರ ಕಾಪಾಡಿಕೊಂಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಹೇಳಿದೆ. ಟ್ರಂಪ್ ಪರವಾಗಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 5 ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ವಿವಾದಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಭಾಗವಹಿಸುವ ರಿಪಬ್ಲಿಕನ್ ಹಿಂದೂ ಒಕ್ಕೂಟವನ್ನು 2015 ರಲ್ಲಿ ಹಿಂದೂ-ಅಮೇರಿಕನ್ ಸಮುದಾಯ ಮತ್ತು ರಿಪಬ್ಲಿಕನ್ ಪ್ರತಿನಿಧಿಗಳ ನಡುವಿನ “ವಿಶಿಷ್ಟ ಸೇತುವೆ” ಎಂದು ಸ್ಥಾಪಿಸಲಾಯಿತು.

ಇದನ್ನೂ ಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ರಿಪಬ್ಲಿಕನ್‌ ಹಿಂದೂ ಒಕ್ಕೂಟದ ಅಧ್ಯಕ್ಷ ಶಲಭ್ ಕುಮಾರ್ ಅವರೊಂದಿಗೆ ದೆಹಲಿಯ ಮಾಜಿ ಶಾಸಕ ವಿಜಯ್ ಜಾಲಿ ಅವರು ಆಯೋಜಿಸುತ್ತಿರುವ ಆನ್‌ಲೈನ್ ಸಭೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಬುಧವಾರ ಹೇಳಿದ್ದಾರೆ. ಟ್ರಂಪ್ ಪರವಾಗಿ ಸಭೆ

“ಬಿಜೆಪಿಯ ಹಿರಿಯ ನಾಯಕ ಎಂದು ಘೋಷಿತವಾಗಿರುವ ವಿಜಯ್ ಜಾಲಿ ಅವರು ಅಮೆರಿಕ ಚುನಾವಣೆಯ ಇಬ್ಬರು ಪ್ರಮುಖ ಅಧ್ಯಕ್ಷೀಯ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಬೆಂಬಲಿಸುವ ಆನ್‌ಲೈನ್ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ತರಲಾಗಿದೆ. ಈ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ.” ಎಂದು ಚೌತೈವಾಲೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗಳು ಅಲ್ಲಿನ ಆಂತರಿಕ ವಿಷಯ ಎಂಬ ವಿಚಾರದಲ್ಲಿ ಬಿಜೆಪಿಗೆ “ಬಹಳ ಸ್ಪಷ್ಟ” ನಿಲುವಿದೆ. ಬಿಜೆಪಿ ಆ ದೇಶದಲ್ಲಿ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಚೌತೈವಾಲೆ ಅವರು ಹೇಳಿದ್ದಾರೆ.

ಇದನ್ನೂಓದಿ: ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

ದೆಹಲಿಯ ಸಾಕೇತ್ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸುವ ಜಾಲಿ ಅವರು ದ್ವಿಪಕ್ಷೀಯ ವೇದಿಕೆಯಾದ ದೆಹಲಿ ಸ್ಟಡಿ ಸರ್ಕಲ್‌ನ ಆಶ್ರಯದಲ್ಲಿ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ದಿ ಹಿಂದೂಗೆ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಗೂ ಅಥವಾ ಅಮೆರಿಕದ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.

“ಇದಲ್ಲದೆ, ಶಲಭ್ ಕುಮಾರ್ ಅವರು ದೀರ್ಘಕಾಲದವರೆಗೆ ಬಿಜೆಪಿಗೆ ಪರಿಚಿತರಾಗಿದ್ದಾರೆ. ಅವರು ಅಮೆರಿಕಾದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಾಲ್ವರು ರಿಪಬ್ಲಿಕನ್ ಸಂಸದರ ಭೇಟಿಯನ್ನು ಏರ್ಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು” ಅವರು ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

“ಆ ಸಮಯದಲ್ಲಿ ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ತೆಗೆದುಕೊಂಡ ಧೋರಣೆ ಹೊರತಾಗಿಯೂ ಈ ರಿಪಬ್ಲಿಕನ್ ಸಂಸದರು ಮೋದಿ ಅವರಿಗೆ ಆಹ್ವಾನವನ್ನು ನೀಡಿದ್ದರು.” ಎಂದು ಅವರು ಹೇಳಿದ್ದಾರೆ. 2002ರ ಗುಜರಾತ್ ಗಲಭೆಯ ಕಾರಣಕ್ಕೆ 2005 ರಲ್ಲಿ, ಅಮೆರಿಕಾ ಸರ್ಕಾರವು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರಿಗೆ ರಾಜತಾಂತ್ರಿಕ ವೀಸಾವನ್ನು ನಿರಾಕರಿಸಿತ್ತು.

ವಿಡಿಯೊನೋಡಿ: ‘ರಾಷ್ಟ್ರೀಯ ವಿಜ್ಞಾನ‌ ದಿನ’ ಪ್ರಯುಕ್ತ ವಿಚಾರ ಕ್ರಾಂತಿ-ರಾಜ್ಯಮಟ್ಟದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...