Homeಮುಖಪುಟಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

- Advertisement -
- Advertisement -

ಅಮೆರಿಕದ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ದೆಹಲಿ ಬಿಜೆಪಿಯ ಮಾಜಿ ಶಾಸಕರೊಬ್ಬರು ಅಮೆರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಅವರ ಪಕ್ಷದ ಪರವಾಗಿರುವ ರಿಪಬ್ಲಿಕನ್ ಹಿಂದೂ ಒಕ್ಕೂಟದೊಂದಿಗೆ ಆನ್‌ಲೈನ್ ಕಾರ್ಯಕ್ರಮ ಆಯೋಜಿಸಿದ್ದು ವಿವಾದವಾಗಿದೆ. ಅದಾಗ್ಯೂ ಬಿಜೆಪಿ ಇದರಿಂದ ಅಂತರ ಕಾಪಾಡಿಕೊಂಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಹೇಳಿದೆ. ಟ್ರಂಪ್ ಪರವಾಗಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 5 ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ವಿವಾದಿತ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಭಾಗವಹಿಸುವ ರಿಪಬ್ಲಿಕನ್ ಹಿಂದೂ ಒಕ್ಕೂಟವನ್ನು 2015 ರಲ್ಲಿ ಹಿಂದೂ-ಅಮೇರಿಕನ್ ಸಮುದಾಯ ಮತ್ತು ರಿಪಬ್ಲಿಕನ್ ಪ್ರತಿನಿಧಿಗಳ ನಡುವಿನ “ವಿಶಿಷ್ಟ ಸೇತುವೆ” ಎಂದು ಸ್ಥಾಪಿಸಲಾಯಿತು.

ಇದನ್ನೂ ಓದಿ: ಪ್ರೋಟೀನ್‌ಗಳ ಕುರಿತ ಸಂಶೋಧನೆಗೆ ‘ನೊಬೆಲ್ ಪುರಸ್ಕಾರ’; ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಮಹತ್ತರ ಸಾಧನೆ

ರಿಪಬ್ಲಿಕನ್‌ ಹಿಂದೂ ಒಕ್ಕೂಟದ ಅಧ್ಯಕ್ಷ ಶಲಭ್ ಕುಮಾರ್ ಅವರೊಂದಿಗೆ ದೆಹಲಿಯ ಮಾಜಿ ಶಾಸಕ ವಿಜಯ್ ಜಾಲಿ ಅವರು ಆಯೋಜಿಸುತ್ತಿರುವ ಆನ್‌ಲೈನ್ ಸಭೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿಯ ವಿದೇಶಾಂಗ ವ್ಯವಹಾರಗಳ ಘಟಕದ ಮುಖ್ಯಸ್ಥ ವಿಜಯ್ ಚೌತೈವಾಲೆ ಬುಧವಾರ ಹೇಳಿದ್ದಾರೆ. ಟ್ರಂಪ್ ಪರವಾಗಿ ಸಭೆ

“ಬಿಜೆಪಿಯ ಹಿರಿಯ ನಾಯಕ ಎಂದು ಘೋಷಿತವಾಗಿರುವ ವಿಜಯ್ ಜಾಲಿ ಅವರು ಅಮೆರಿಕ ಚುನಾವಣೆಯ ಇಬ್ಬರು ಪ್ರಮುಖ ಅಧ್ಯಕ್ಷೀಯ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಬೆಂಬಲಿಸುವ ಆನ್‌ಲೈನ್ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ನನ್ನ ಗಮನಕ್ಕೆ ತರಲಾಗಿದೆ. ಈ ಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ.” ಎಂದು ಚೌತೈವಾಲೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗಳು ಅಲ್ಲಿನ ಆಂತರಿಕ ವಿಷಯ ಎಂಬ ವಿಚಾರದಲ್ಲಿ ಬಿಜೆಪಿಗೆ “ಬಹಳ ಸ್ಪಷ್ಟ” ನಿಲುವಿದೆ. ಬಿಜೆಪಿ ಆ ದೇಶದಲ್ಲಿ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಚೌತೈವಾಲೆ ಅವರು ಹೇಳಿದ್ದಾರೆ.

ಇದನ್ನೂಓದಿ: ರಾಜ್ಯದ ಸ್ಥಾನಮಾನಕ್ಕೆ ಆಗ್ರಹಿಸುವುದು ನಮ್ಮ ಸಂಪುಟದ ಮೊದಲ ನಿರ್ಣಯ : ಉಮರ್ ಅಬ್ದುಲ್ಲಾ

ದೆಹಲಿಯ ಸಾಕೇತ್ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸುವ ಜಾಲಿ ಅವರು ದ್ವಿಪಕ್ಷೀಯ ವೇದಿಕೆಯಾದ ದೆಹಲಿ ಸ್ಟಡಿ ಸರ್ಕಲ್‌ನ ಆಶ್ರಯದಲ್ಲಿ ಸಭೆಯನ್ನು ಆಯೋಜಿಸುತ್ತಿದ್ದಾರೆ ಎಂದು ದಿ ಹಿಂದೂಗೆ ತಿಳಿಸಿದ್ದಾರೆ. ಹೀಗಾಗಿ ಬಿಜೆಪಿಗೂ ಅಥವಾ ಅಮೆರಿಕದ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.

“ಇದಲ್ಲದೆ, ಶಲಭ್ ಕುಮಾರ್ ಅವರು ದೀರ್ಘಕಾಲದವರೆಗೆ ಬಿಜೆಪಿಗೆ ಪರಿಚಿತರಾಗಿದ್ದಾರೆ. ಅವರು ಅಮೆರಿಕಾದಲ್ಲಿ ಗುಜರಾತ್‌ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಾಲ್ವರು ರಿಪಬ್ಲಿಕನ್ ಸಂಸದರ ಭೇಟಿಯನ್ನು ಏರ್ಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು” ಅವರು ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

“ಆ ಸಮಯದಲ್ಲಿ ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ತೆಗೆದುಕೊಂಡ ಧೋರಣೆ ಹೊರತಾಗಿಯೂ ಈ ರಿಪಬ್ಲಿಕನ್ ಸಂಸದರು ಮೋದಿ ಅವರಿಗೆ ಆಹ್ವಾನವನ್ನು ನೀಡಿದ್ದರು.” ಎಂದು ಅವರು ಹೇಳಿದ್ದಾರೆ. 2002ರ ಗುಜರಾತ್ ಗಲಭೆಯ ಕಾರಣಕ್ಕೆ 2005 ರಲ್ಲಿ, ಅಮೆರಿಕಾ ಸರ್ಕಾರವು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರಿಗೆ ರಾಜತಾಂತ್ರಿಕ ವೀಸಾವನ್ನು ನಿರಾಕರಿಸಿತ್ತು.

ವಿಡಿಯೊನೋಡಿ: ‘ರಾಷ್ಟ್ರೀಯ ವಿಜ್ಞಾನ‌ ದಿನ’ ಪ್ರಯುಕ್ತ ವಿಚಾರ ಕ್ರಾಂತಿ-ರಾಜ್ಯಮಟ್ಟದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...