Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...