Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...