Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...