Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...