Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...