Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...