Homeಅಂತರಾಷ್ಟ್ರೀಯಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು...

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

- Advertisement -
- Advertisement -

ಹಲವು ದಿನಗಳ ಊಹಾಪೋಹಗಳ ನಂತರ, ಅಮೆರಿಕದ ಶ್ವೇತಭವನವು ಸೋಮವಾರ (ಸೆ.29) ಸುಮಾರು ಎರಡು ವರ್ಷಗಳ ಗಾಝಾ ಯುದ್ಧವನ್ನು ಕೊನೆಗೊಳಿಸುವ, ಹಮಾಸ್ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯನ್ನು ಸುರಕ್ಷಿತಗೊಳಿಸುವ ಮತ್ತು ಪ್ಯಾಲೆಸ್ತೀನ್ ಪ್ರದೇಶದ ಭವಿಷ್ಯದ ಆಡಳಿತವನ್ನು ನಿಗದಿಪಡಿಸುವ ಗುರಿಯನ್ನು ಹೊಂದಿರುವ 20 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ ಈ ಜಂಟಿ ಶಾಂತಿ ಯೋಜನೆಯು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಕೊನೆಗೊಳಿಸುವ ಮತ್ತು ಗಾಝಾದ ಭವಿಷ್ಯದ ಆಡಳಿತದಿಂದ ಹಮಾಸ್ ಅನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ವರದಿಗಳು ಹೇಳಿವೆ.

ಈ ಪ್ರಸ್ತಾವನೆಯನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ? ಎಂಬುವುದು ಈಗ ಪ್ರಶ್ನೆಯಾಗಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಪ್ರಸ್ತಾವನೆಯನ್ನು ಹಮಾಸ್ ಅಧ್ಯಯನ ಮಾಡುತ್ತಿದೆ. ಅದಕ್ಕಾಗಿ ಒಂದು ತಂಡವನ್ನು ನೇಮಿಸಿದೆ.

ಅಮೆರಿಕ ಮುಂದಿಟ್ಟ ಶಾಂತಿ ಯೋಜನೆಯ ಪ್ರಕಾರ, ಇಸ್ರೇಲ್ ಮತ್ತು ಹಮಾಸ್ ಯೋಜನೆಯ ಷರತ್ತುಗಳನ್ನು ಒಪ್ಪಿಕೊಂಡರೆ ಯುದ್ಧ ಅಂತ್ಯಗೊಳ್ಳಲಿದೆ. ಇಸ್ರೇಲ್ ಯೋಜನೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ 72 ಗಂಟೆಗಳ ಒಳಗೆ ಹಮಾಸ್ ತನ್ನ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು (ಮೃತರು ಮತ್ತು ಜೀವಂತ ಇರುವವರು) ಬಿಡುಗಡೆ ಮಾಡಬೇಕು.

ಒತ್ತೆಯಾಳುಗಳಿಗೆ ಬದಲಾಗಿ, ಇಸ್ರೇಲ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 250 ಪ್ಯಾಲೆಸ್ತೀನಿಯರನ್ನು ಮತ್ತು 2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಗಾಝಾದಲ್ಲಿ ಬಂಧಿಸಲ್ಪಟ್ಟ 1,700 ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಒಬ್ಬರು ಇಸ್ರೇಲಿ ಒತ್ತೆಯಾಳುವಿನ ಮೃತದೇಹವನ್ನು ನೀಡಿದರೆ, ಅದಕ್ಕೆ ಬದಲಾಗಿ ಇಸ್ರೇಲ್ 15 ಪ್ಯಾಲೆಸ್ತೀನಿಯರ ಮೃತದೇಹಗಳನ್ನು ಹಸ್ತಾಂತರಿಸಲಿದೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಯೋಜನೆಯ ಮೂಲಕ ಇಂದಿನ ದಿನ ‘ಶಾಂತಿಗಾಗಿ ಒಂದು ಐತಿಹಾಸಿಕ ದಿನ’ವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಹಮಾಸ್ ಗುಂಪು ಈ ಯೋಜನೆಯನ್ನು ತಿರಸ್ಕರಿಸಿದರೆ, ಅದರ ಬೆದರಿಕೆಯನ್ನು ನಾಶಮಾಡುವ ಕೆಲಸವನ್ನು ಪೂರ್ಣಗೊಳಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಮಾಸ್ ಈ ಪ್ರಸ್ತಾಪವನ್ನು ನಿರಾಕರಿಸಿದರೆ ಅಥವಾ ಅನುಸರಿಸದಿದ್ದರೆ ಇಸ್ರೇಲ್ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಯೋಜನೆಯು ಹಮಾಸ್‌ಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ಮಾನವೀಯ ನೆರವು ಮತ್ತು ಗಾಝಾ ಪುನರ್ನಿರ್ಮಾಣದ ಭರವಸೆಗೆ ಪ್ರತಿಯಾಗಿ ಹೋರಾಟವನ್ನು ಅಂತ್ಯಗೊಳಿಸಿ ಶರಣಾಗುವುದು ಅಥವಾ ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದು. ಇನ್ನೊಂದು ಒಪ್ಪಂದವನ್ನು ತಿರಸ್ಕರಿಸಿ ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುವ ಆಕ್ರಮಣವನ್ನು ಎದುರಿಸುವುದು.

ಯುದ್ಧವನ್ನು ಕೊನೆಗೊಳಿಸಿ, ಮಾನವೀಯ ನೆರವು ನೀಡಲು ಮತ್ತು ಗಾಝಾವನ್ನು ಪುನರ್ನಿರ್ಮಾಣ ಮಾಡಲು ಅವಕಾಶ ನೀಡಬೇಕಾದರೆ ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಎಂಬ ಷರತ್ತನ್ನು ಅಮೆರಿಕ ಮತ್ತು ಇಸ್ರೇಲ್‌ ಹಮಾಸ್‌ಗೆ ಮುಂದಿಟ್ಟಿದೆ.

ಅಲ್ಲದೆ ಯೋಜನೆಯ ಪ್ರಕಾರ, ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ಕೊಡುವ ಪ್ರಸ್ತಾಪವನ್ನು ಮಾಡಲಾಗಿದೆ. ಆದರೆ, ಅದು ದೀರ್ಘಕಾಲೀನ ಗುರಿಯಾಗಿದೆ. ಪ್ರಸ್ತುತ, 20 ಲಕ್ಷಕ್ಕೂ ಹೆಚ್ಚು ಜನರಿರುವ ಗಾಝಾ ಅಂತಾರಾಷ್ಟ್ರೀಯ ನಿಯಂತ್ರಣಕ್ಕೆ ಒಳಪಡಲಿದೆ. ಗಾಝಾದ ಭದ್ರತೆಯ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಭದ್ರತಾ ಪಡೆಯು ತೆಗೆದುಕೊಳ್ಳಲಿದೆ. ಟ್ರಂಪ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ಟೋನಿ ಬ್ಲೇರ್ ನೇತೃತ್ವದ ‘ಶಾಂತಿ ಮಂಡಳಿ’ ಎಂಬ ಸಂಸ್ಥೆಯು ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲಿದೆ. ಇಸ್ರೇಲಿ ಸೈನ್ಯವು ಗಾಝಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಳಿಯಲಿದೆ.

ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಟ್ರಂಪ್ ಮತ್ತು ನೆತನ್ಯಾಹು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಈ ಯೋಜನೆಯ ಒಂದು ಭಾಗವು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರ ಘೋಷಿತ ನಿಲುವಿನೊಂದಿಗೆ ನೇರವಾಗಿ ವಿರೋಧಾಭಾಸವನ್ನು ಹೊಂದಿದೆ ಎಂದು ವರದಿಗಳು ಹೇಳಿವೆ. ಏಕೆಂದರೆ, ಯೋಜನೆಯ ಪ್ರಕಾರ, ಗಾಝಾವನ್ನು ಕಾಲಾಂತರದಲ್ಲಿ ಪ್ಯಾಲೆಸ್ಟೈನ್ ಅಥಾರಿಟಿ (ಪ್ಯಾಲೆಸ್ಟೈನ್ ಪ್ರಾಧಿಕಾರ) ಆಡಳಿತ ಮಾಡಲಿದೆ.

ಆದರೆ, ನೆತನ್ಯಾಹು ಮತ್ತು ಅವರ ಸರ್ಕಾರವು ಪ್ಯಾಲೆಸ್ಟೈನ್ ರಾಷ್ಟ್ರೀಯತೆಗೆ ವಿರೋಧವಾಗಿದ್ದು, ಇಂತಹ ಒಪ್ಪಂದವನ್ನು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಆದಾಗ್ಯೂ, ಈ ನಿಬಂಧನೆಯು ಯೋಜನೆಯ ದಾಖಲೆಯಲ್ಲಿ ಉಳಿದಿದೆ.

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...