Homeಅಂತರಾಷ್ಟ್ರೀಯಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು...

ಗಾಝಾ ಯುದ್ಧ ಕೊನೆಗೊಳಿಸಲು 20 ಅಂಶಗಳ ಯೋಜನೆ ಮುಂದಿಟ್ಟ ಅಮೆರಿಕ: ಇಸ್ರೇಲ್ ಒಪ್ಪಿಗೆ, ಇನ್ನೂ ನಿಲುವು ತಿಳಿಸದ ಹಮಾಸ್

- Advertisement -
- Advertisement -

ಹಲವು ದಿನಗಳ ಊಹಾಪೋಹಗಳ ನಂತರ, ಅಮೆರಿಕದ ಶ್ವೇತಭವನವು ಸೋಮವಾರ (ಸೆ.29) ಸುಮಾರು ಎರಡು ವರ್ಷಗಳ ಗಾಝಾ ಯುದ್ಧವನ್ನು ಕೊನೆಗೊಳಿಸುವ, ಹಮಾಸ್ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಯನ್ನು ಸುರಕ್ಷಿತಗೊಳಿಸುವ ಮತ್ತು ಪ್ಯಾಲೆಸ್ತೀನ್ ಪ್ರದೇಶದ ಭವಿಷ್ಯದ ಆಡಳಿತವನ್ನು ನಿಗದಿಪಡಿಸುವ ಗುರಿಯನ್ನು ಹೊಂದಿರುವ 20 ಅಂಶಗಳ ಯೋಜನೆಯನ್ನು ಪ್ರಸ್ತಾಪಿಸಿದೆ.

ಅಮೆರಿಕ ಮತ್ತು ಇಸ್ರೇಲ್‌ ಈ ಜಂಟಿ ಶಾಂತಿ ಯೋಜನೆಯು ಇಸ್ರೇಲ್-ಹಮಾಸ್ ನಡುವಿನ ಸಂಘರ್ಷ ಕೊನೆಗೊಳಿಸುವ ಮತ್ತು ಗಾಝಾದ ಭವಿಷ್ಯದ ಆಡಳಿತದಿಂದ ಹಮಾಸ್ ಅನ್ನು ಹೊರಗಿಡುವ ಉದ್ದೇಶ ಹೊಂದಿದೆ ಎಂದು ವರದಿಗಳು ಹೇಳಿವೆ.

ಈ ಪ್ರಸ್ತಾವನೆಯನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ? ಎಂಬುವುದು ಈಗ ಪ್ರಶ್ನೆಯಾಗಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಪ್ರಸ್ತಾವನೆಯನ್ನು ಹಮಾಸ್ ಅಧ್ಯಯನ ಮಾಡುತ್ತಿದೆ. ಅದಕ್ಕಾಗಿ ಒಂದು ತಂಡವನ್ನು ನೇಮಿಸಿದೆ.

ಅಮೆರಿಕ ಮುಂದಿಟ್ಟ ಶಾಂತಿ ಯೋಜನೆಯ ಪ್ರಕಾರ, ಇಸ್ರೇಲ್ ಮತ್ತು ಹಮಾಸ್ ಯೋಜನೆಯ ಷರತ್ತುಗಳನ್ನು ಒಪ್ಪಿಕೊಂಡರೆ ಯುದ್ಧ ಅಂತ್ಯಗೊಳ್ಳಲಿದೆ. ಇಸ್ರೇಲ್ ಯೋಜನೆಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ 72 ಗಂಟೆಗಳ ಒಳಗೆ ಹಮಾಸ್ ತನ್ನ ವಶದಲ್ಲಿರುವ ಇಸ್ರೇಲ್ ಒತ್ತೆಯಾಳುಗಳನ್ನು (ಮೃತರು ಮತ್ತು ಜೀವಂತ ಇರುವವರು) ಬಿಡುಗಡೆ ಮಾಡಬೇಕು.

ಒತ್ತೆಯಾಳುಗಳಿಗೆ ಬದಲಾಗಿ, ಇಸ್ರೇಲ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 250 ಪ್ಯಾಲೆಸ್ತೀನಿಯರನ್ನು ಮತ್ತು 2023ರ ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಗಾಝಾದಲ್ಲಿ ಬಂಧಿಸಲ್ಪಟ್ಟ 1,700 ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಲಿದೆ. ಒಬ್ಬರು ಇಸ್ರೇಲಿ ಒತ್ತೆಯಾಳುವಿನ ಮೃತದೇಹವನ್ನು ನೀಡಿದರೆ, ಅದಕ್ಕೆ ಬದಲಾಗಿ ಇಸ್ರೇಲ್ 15 ಪ್ಯಾಲೆಸ್ತೀನಿಯರ ಮೃತದೇಹಗಳನ್ನು ಹಸ್ತಾಂತರಿಸಲಿದೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಮಾತುಕತೆಯ ನಂತರ ಪತ್ರಿಕಾಗೋಷ್ಠಿ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಯೋಜನೆಯ ಮೂಲಕ ಇಂದಿನ ದಿನ ‘ಶಾಂತಿಗಾಗಿ ಒಂದು ಐತಿಹಾಸಿಕ ದಿನ’ವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಹಮಾಸ್ ಗುಂಪು ಈ ಯೋಜನೆಯನ್ನು ತಿರಸ್ಕರಿಸಿದರೆ, ಅದರ ಬೆದರಿಕೆಯನ್ನು ನಾಶಮಾಡುವ ಕೆಲಸವನ್ನು ಪೂರ್ಣಗೊಳಿಸಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಮಾಸ್ ಈ ಪ್ರಸ್ತಾಪವನ್ನು ನಿರಾಕರಿಸಿದರೆ ಅಥವಾ ಅನುಸರಿಸದಿದ್ದರೆ ಇಸ್ರೇಲ್ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತದೆ ಎಂದು ನೆತನ್ಯಾಹು ಹೇಳಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಯೋಜನೆಯು ಹಮಾಸ್‌ಗೆ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ಮಾನವೀಯ ನೆರವು ಮತ್ತು ಗಾಝಾ ಪುನರ್ನಿರ್ಮಾಣದ ಭರವಸೆಗೆ ಪ್ರತಿಯಾಗಿ ಹೋರಾಟವನ್ನು ಅಂತ್ಯಗೊಳಿಸಿ ಶರಣಾಗುವುದು ಅಥವಾ ಶಸ್ತ್ರಾಸ್ತ್ರಗಳನ್ನು ತ್ಯಜಿಸುವುದು. ಇನ್ನೊಂದು ಒಪ್ಪಂದವನ್ನು ತಿರಸ್ಕರಿಸಿ ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಡೆಸುವ ಆಕ್ರಮಣವನ್ನು ಎದುರಿಸುವುದು.

ಯುದ್ಧವನ್ನು ಕೊನೆಗೊಳಿಸಿ, ಮಾನವೀಯ ನೆರವು ನೀಡಲು ಮತ್ತು ಗಾಝಾವನ್ನು ಪುನರ್ನಿರ್ಮಾಣ ಮಾಡಲು ಅವಕಾಶ ನೀಡಬೇಕಾದರೆ ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಎಂಬ ಷರತ್ತನ್ನು ಅಮೆರಿಕ ಮತ್ತು ಇಸ್ರೇಲ್‌ ಹಮಾಸ್‌ಗೆ ಮುಂದಿಟ್ಟಿದೆ.

ಅಲ್ಲದೆ ಯೋಜನೆಯ ಪ್ರಕಾರ, ಪ್ಯಾಲೆಸ್ತೀನ್‌ಗೆ ರಾಷ್ಟ್ರದ ಮಾನ್ಯತೆ ಕೊಡುವ ಪ್ರಸ್ತಾಪವನ್ನು ಮಾಡಲಾಗಿದೆ. ಆದರೆ, ಅದು ದೀರ್ಘಕಾಲೀನ ಗುರಿಯಾಗಿದೆ. ಪ್ರಸ್ತುತ, 20 ಲಕ್ಷಕ್ಕೂ ಹೆಚ್ಚು ಜನರಿರುವ ಗಾಝಾ ಅಂತಾರಾಷ್ಟ್ರೀಯ ನಿಯಂತ್ರಣಕ್ಕೆ ಒಳಪಡಲಿದೆ. ಗಾಝಾದ ಭದ್ರತೆಯ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಭದ್ರತಾ ಪಡೆಯು ತೆಗೆದುಕೊಳ್ಳಲಿದೆ. ಟ್ರಂಪ್ ಮತ್ತು ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ಟೋನಿ ಬ್ಲೇರ್ ನೇತೃತ್ವದ ‘ಶಾಂತಿ ಮಂಡಳಿ’ ಎಂಬ ಸಂಸ್ಥೆಯು ಗಾಝಾದ ಆಡಳಿತ ಮತ್ತು ಪುನರ್ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲಿದೆ. ಇಸ್ರೇಲಿ ಸೈನ್ಯವು ಗಾಝಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಳಿಯಲಿದೆ.

ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಟ್ರಂಪ್ ಮತ್ತು ನೆತನ್ಯಾಹು ಈ ಯೋಜನೆಯನ್ನು ಒಪ್ಪಿಕೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ.

ಈ ಯೋಜನೆಯ ಒಂದು ಭಾಗವು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರ ಘೋಷಿತ ನಿಲುವಿನೊಂದಿಗೆ ನೇರವಾಗಿ ವಿರೋಧಾಭಾಸವನ್ನು ಹೊಂದಿದೆ ಎಂದು ವರದಿಗಳು ಹೇಳಿವೆ. ಏಕೆಂದರೆ, ಯೋಜನೆಯ ಪ್ರಕಾರ, ಗಾಝಾವನ್ನು ಕಾಲಾಂತರದಲ್ಲಿ ಪ್ಯಾಲೆಸ್ಟೈನ್ ಅಥಾರಿಟಿ (ಪ್ಯಾಲೆಸ್ಟೈನ್ ಪ್ರಾಧಿಕಾರ) ಆಡಳಿತ ಮಾಡಲಿದೆ.

ಆದರೆ, ನೆತನ್ಯಾಹು ಮತ್ತು ಅವರ ಸರ್ಕಾರವು ಪ್ಯಾಲೆಸ್ಟೈನ್ ರಾಷ್ಟ್ರೀಯತೆಗೆ ವಿರೋಧವಾಗಿದ್ದು, ಇಂತಹ ಒಪ್ಪಂದವನ್ನು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಆದಾಗ್ಯೂ, ಈ ನಿಬಂಧನೆಯು ಯೋಜನೆಯ ದಾಖಲೆಯಲ್ಲಿ ಉಳಿದಿದೆ.

ನೆರವು ಹೊತ್ತು ಗಾಝಾ ತೀರ ಸಮೀಪಿಸುತ್ತಿರುವ ‘ಸುಮುದ್ ಫ್ಲೋಟಿಲ್ಲಾ’ ತಂಡ: ಇಸ್ರೇಲ್ ದಿಗ್ಬಂಧನ ಮುರಿಯುವ ಶಪಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...